ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಡಿ ವಿವಾದ ವಿಚಾರದಲ್ಲಿ ಸುಪ್ರಿಂಕೋರ್ಟ್ ಮಹಾರಾಷ್ಟ್ರದ ವಾದವನ್ನು ಎರಡು ಬಾರಿ ತಳ್ಳಿಹಾಕಿದೆ. ಇಂತಹ ಸಂದರ್ಭದಲ್ಲಿ ಅಶಾಂತಿ ಇದೆ ಎಂಬುದನ್ನು ಬಿಂಬಿಸಲು ಪ್ರಯತ್ನ ನಡೆದಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ಸಮಿತಿ ರಚಿಸಲು ಹೊರಟಿದೆ. ಇದಕ್ಕೆ ರಾಜ್ಯ ಸರ್ಕಾರ ಸಮ್ಮತಿಸಬಾರದು’ ಎಂದು ಒತ್ತಾಯಿಸಿದರು.