<p><strong>ಹಳಿಯಾಳ</strong>: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ವತಿಯಿಂದ ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ನರ್ಸ್ (ದಾದಿಯರ) ದಿನಾಚರಣೆ ಇತ್ತೀಚಿಗೆ ಆಚರಿಸಲಾಯಿತು.</p>.<p>ಡಾ.ಶ್ರೀಶೈಲ ಮಾದನ್ನವರ ಮಾತನಾಡಿ, ನರ್ಸ್ (ದಾದಿಯರು) ಆರೋಗ್ಯ ಸೇವೆ ಬಲಪಡಿಸುವಲ್ಲಿ ನೀಡುತ್ತಿರುವ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದರು.</p>.<p>ಮೇಲ್ವಿಚಾರಕಿ ತೇಜಸ್ವಿನಿ ಮಾತನಾಡಿ, ರೋಗಿಗಳ ಆರೈಕೆಯಲ್ಲಿ ನರ್ಸ್ ಸೇವೆಯ ಮಹತ್ವವನ್ನು ವಿವರಿಸಿ, ಅವರ ಸೇವೆಯನ್ನು ಗುರುತಿಸಿ ಗೌರವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.</p>.<p>ಸಿಬಿಡಿ ಆರ್ಸೆಟಿಯ ಯೋಜನಾ ಸಂಯೋಜಕ ವಿನಾಯಕ ಚವ್ಹಾಣ ಮಾತನಾಡಿ, ಸಮಾಜ ಮತ್ತು ರೋಗಿಗಳ ಆರೈಕೆಯಲ್ಲಿ ದಾದಿಯರು ನೀಡುತ್ತಿರುವ ಸಮರ್ಪಿತ ಸೇವೆಯನ್ನು ಗೌರವಿಸಿ ಅಭಿನಂದಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಯಿತು ಎಂದರು.</p>.<p>ಅಂತರರಾಷ್ಟ್ರೀಯ ನರ್ಸ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಕ್ಷೇತ್ರ ಮೇಲ್ವಿಚಾರಕ, ಸಂತೋಷ ಸಿದ್ನೆಕೊಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-20-758434559</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ</strong>: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ವತಿಯಿಂದ ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ನರ್ಸ್ (ದಾದಿಯರ) ದಿನಾಚರಣೆ ಇತ್ತೀಚಿಗೆ ಆಚರಿಸಲಾಯಿತು.</p>.<p>ಡಾ.ಶ್ರೀಶೈಲ ಮಾದನ್ನವರ ಮಾತನಾಡಿ, ನರ್ಸ್ (ದಾದಿಯರು) ಆರೋಗ್ಯ ಸೇವೆ ಬಲಪಡಿಸುವಲ್ಲಿ ನೀಡುತ್ತಿರುವ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದರು.</p>.<p>ಮೇಲ್ವಿಚಾರಕಿ ತೇಜಸ್ವಿನಿ ಮಾತನಾಡಿ, ರೋಗಿಗಳ ಆರೈಕೆಯಲ್ಲಿ ನರ್ಸ್ ಸೇವೆಯ ಮಹತ್ವವನ್ನು ವಿವರಿಸಿ, ಅವರ ಸೇವೆಯನ್ನು ಗುರುತಿಸಿ ಗೌರವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.</p>.<p>ಸಿಬಿಡಿ ಆರ್ಸೆಟಿಯ ಯೋಜನಾ ಸಂಯೋಜಕ ವಿನಾಯಕ ಚವ್ಹಾಣ ಮಾತನಾಡಿ, ಸಮಾಜ ಮತ್ತು ರೋಗಿಗಳ ಆರೈಕೆಯಲ್ಲಿ ದಾದಿಯರು ನೀಡುತ್ತಿರುವ ಸಮರ್ಪಿತ ಸೇವೆಯನ್ನು ಗೌರವಿಸಿ ಅಭಿನಂದಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಯಿತು ಎಂದರು.</p>.<p>ಅಂತರರಾಷ್ಟ್ರೀಯ ನರ್ಸ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಕ್ಷೇತ್ರ ಮೇಲ್ವಿಚಾರಕ, ಸಂತೋಷ ಸಿದ್ನೆಕೊಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-20-758434559</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>