<p><strong>ಹಳಿಯಾಳ:</strong> ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಾರಿಗೆ ಬಸ್ಸೊಂದು ಗುರುವಾರ ಬೆಳಿಗ್ಗೆ ತಾಲ್ಲೂಕಿನ ಬಾಣಸಗೇರಿ ಗ್ರಾಮದ ಹತ್ತಿರದ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ 34 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬಸ್ ಚಾಲಕ ಹಾಗೂ 7 ವಿದ್ಯಾರ್ಥಿಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಜೋಗನಕೊಪ್ಪ ಗ್ರಾಮದಿಂದ ಸುಮಾರು 40 ಪ್ರಯಾಣಿಕರನ್ನು ಹೊತ್ತ ಬಸ್ ಹಳಿಯಾಳಕ್ಕೆ ಬರುವಾಗ ಬಾಣಸಗೇರಿ ಮೊರಾರ್ಜಿ ವಸತಿ ಶಾಲೆಯ ಹತ್ತಿರದಲ್ಲಿ ಮರಕ್ಕೆ ಢಿಕ್ಕಿ ಹೊಡೆದಿದೆ. ಹಳಿಯಾಳದ ವಿವಿಧ ಶಾಲೆಗಳಿಗೆ ತೆರಳುತ್ತಿದ್ದ ಸುಮಾರು 34 ವಿದ್ಯಾರ್ಥಿಗಳು ಬಸ್ನಲ್ಲಿ ಪ್ರಯಾಣಿಸುತ್ತಿದ್ದರು.</p>.<p>ಚಾಲಕನ ಪಕ್ಕದ ಆಸನದಲ್ಲಿ ಕುಳಿತ್ತಿದ್ದ 4ನೇ ತರಗತಿಯ ವಿದ್ಯಾರ್ಥಿ ಸಿಮಂತ ಮಹಾಂತೇಶ ಕಮ್ಮಾರನ ಎರಡೂ ಕಾಲುಗಳು ಬಸ್ಸಿನೊಳಗೆ ಸಿಕ್ಕಿಹಾಕಿಕೊಂಡಿದ್ದವು. ಜಿಸಿಬಿಯಿಂದ ಬಸ್ನ್ನು ಗಿಡದಿಂದ ಮೆಲಕ್ಕೆತ್ತಿ, ನುರಿತ ತಜ್ಞರಿಂದ ಬಸ್ಸಿನ ಮುಂಭಾಗವನ್ನು ಕತ್ತರಿಸಿ ಮೂರು ಗಂಟೆಯ ನಂತರ ವಿದ್ಯಾರ್ಥಿಯನ್ನು ಹೊರಗೆ ತೆಗೆಯಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ:</strong> ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಾರಿಗೆ ಬಸ್ಸೊಂದು ಗುರುವಾರ ಬೆಳಿಗ್ಗೆ ತಾಲ್ಲೂಕಿನ ಬಾಣಸಗೇರಿ ಗ್ರಾಮದ ಹತ್ತಿರದ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ 34 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬಸ್ ಚಾಲಕ ಹಾಗೂ 7 ವಿದ್ಯಾರ್ಥಿಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಜೋಗನಕೊಪ್ಪ ಗ್ರಾಮದಿಂದ ಸುಮಾರು 40 ಪ್ರಯಾಣಿಕರನ್ನು ಹೊತ್ತ ಬಸ್ ಹಳಿಯಾಳಕ್ಕೆ ಬರುವಾಗ ಬಾಣಸಗೇರಿ ಮೊರಾರ್ಜಿ ವಸತಿ ಶಾಲೆಯ ಹತ್ತಿರದಲ್ಲಿ ಮರಕ್ಕೆ ಢಿಕ್ಕಿ ಹೊಡೆದಿದೆ. ಹಳಿಯಾಳದ ವಿವಿಧ ಶಾಲೆಗಳಿಗೆ ತೆರಳುತ್ತಿದ್ದ ಸುಮಾರು 34 ವಿದ್ಯಾರ್ಥಿಗಳು ಬಸ್ನಲ್ಲಿ ಪ್ರಯಾಣಿಸುತ್ತಿದ್ದರು.</p>.<p>ಚಾಲಕನ ಪಕ್ಕದ ಆಸನದಲ್ಲಿ ಕುಳಿತ್ತಿದ್ದ 4ನೇ ತರಗತಿಯ ವಿದ್ಯಾರ್ಥಿ ಸಿಮಂತ ಮಹಾಂತೇಶ ಕಮ್ಮಾರನ ಎರಡೂ ಕಾಲುಗಳು ಬಸ್ಸಿನೊಳಗೆ ಸಿಕ್ಕಿಹಾಕಿಕೊಂಡಿದ್ದವು. ಜಿಸಿಬಿಯಿಂದ ಬಸ್ನ್ನು ಗಿಡದಿಂದ ಮೆಲಕ್ಕೆತ್ತಿ, ನುರಿತ ತಜ್ಞರಿಂದ ಬಸ್ಸಿನ ಮುಂಭಾಗವನ್ನು ಕತ್ತರಿಸಿ ಮೂರು ಗಂಟೆಯ ನಂತರ ವಿದ್ಯಾರ್ಥಿಯನ್ನು ಹೊರಗೆ ತೆಗೆಯಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>