<p><strong>ಮುಂಡಗೋಡ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಭಾನುವಾರ ಆಲಿಕಲ್ಲು ಸಹಿತ ಮಳೆಯಾಯಿತು.</p>.<p>ಅರ್ಧ ಗಂಟೆಗೂ ಹೆಚ್ಚು ಕಾಲ ಭಾರಿ ಗಾಳಿಯೊಂದಿಗೆ ಮಳೆ ಸುರಿಯಿತು. ಇದರಿಂದ ವಿದ್ಯುತ್ ವ್ಯತ್ಯಯಗೊಂಡು ಕತ್ತಲಲ್ಲಿ ರಾತ್ರಿ ಕಳೆಯುವಂತಾಯಿತು.</p>.<p>ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಏಕಾಏಕಿ ಸುರಿದ ಮಳೆಯಿಂದ ತುಸು ಸಂತಸಪಟ್ಟರು. ಕೆಲವೆಡೆ ಮರಗಳು ರಸ್ತೆ ಮೇಲೆ ಉರುಳಿಬಿದ್ದಿದ್ದರಿಂದ, ವಾಹನ ಸಂಚಾರಕ್ಕೆ ತೊಂದರೆಯಾಯಿತು. ಇನ್ನೂ ಕೆಲವೆಡೆ ವಿದ್ಯುತ್ ತಂತಿ ಮೇಲೆ ಮರದ ಟೊಂಗೆಗಳು ಮುರಿದು ಬಿದ್ದಿರುವುದರಿಂದ, ವಿದ್ಯುತ್ ವ್ಯತ್ಯಯವಾಗಿದೆ. ಭಾರಿ ಗಾಳಿಯಿಂದ ಕೆಲವೆಡೆ ಮನೆಯ ತಾರಸಿ ಮೇಲಿನ ತಗಡಿನ ಶೀಟ್ಗಳು ಹಾರಿ ಹೋಗಿವೆ. ಕೆಲವೇ ನಿಮಿಷಗಳಲ್ಲಿ ಆಲಿಕಲ್ಲುಗಳು ರಾಶಿ ರಾಶಿಯಾಗಿ ನೆಲದ ಮೇಲೆ ಸಂಗ್ರಹಗೊಂಡಿದ್ದವು.</p>.<p>ತಾಲ್ಲೂಕಿನ ಪಾಳಾದಿಂದ ಹಾನಗಲ್ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಬೃಹತ್ ಮಾವಿನ ಮರವೊಂದು ಉರುಳಿ ಬಿದ್ದಿತ್ತು. ಇದರಿಂದ, ಈ ಮಾರ್ಗದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಮರ ತೆರವುಗೊಳಿಸುವವರೆಗೂ ದಾರಿಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>ಸ್ಥಳೀಯರು ರಸ್ತೆಗೆ ಬಿದ್ದ ಮಾವಿನ ಮರದ ಕೊಂಬೆಗಳನ್ನು ಉರುವಲು ಕಟ್ಟಿಗೆಯಾಗಿ ಬಳಸಲು, ಕೊಂಡೊಯ್ಯಲು ಮುಗಿಬಿದ್ದ ದೃಶ್ಯ ಕಂಡುಬಂತು. ಅರಣ್ಯ ಇಲಾಖೆಯ ಸಿಬ್ಬಂದಿ ಆಗಮಿಸಿ, ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಭಾನುವಾರ ಆಲಿಕಲ್ಲು ಸಹಿತ ಮಳೆಯಾಯಿತು.</p>.<p>ಅರ್ಧ ಗಂಟೆಗೂ ಹೆಚ್ಚು ಕಾಲ ಭಾರಿ ಗಾಳಿಯೊಂದಿಗೆ ಮಳೆ ಸುರಿಯಿತು. ಇದರಿಂದ ವಿದ್ಯುತ್ ವ್ಯತ್ಯಯಗೊಂಡು ಕತ್ತಲಲ್ಲಿ ರಾತ್ರಿ ಕಳೆಯುವಂತಾಯಿತು.</p>.<p>ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಏಕಾಏಕಿ ಸುರಿದ ಮಳೆಯಿಂದ ತುಸು ಸಂತಸಪಟ್ಟರು. ಕೆಲವೆಡೆ ಮರಗಳು ರಸ್ತೆ ಮೇಲೆ ಉರುಳಿಬಿದ್ದಿದ್ದರಿಂದ, ವಾಹನ ಸಂಚಾರಕ್ಕೆ ತೊಂದರೆಯಾಯಿತು. ಇನ್ನೂ ಕೆಲವೆಡೆ ವಿದ್ಯುತ್ ತಂತಿ ಮೇಲೆ ಮರದ ಟೊಂಗೆಗಳು ಮುರಿದು ಬಿದ್ದಿರುವುದರಿಂದ, ವಿದ್ಯುತ್ ವ್ಯತ್ಯಯವಾಗಿದೆ. ಭಾರಿ ಗಾಳಿಯಿಂದ ಕೆಲವೆಡೆ ಮನೆಯ ತಾರಸಿ ಮೇಲಿನ ತಗಡಿನ ಶೀಟ್ಗಳು ಹಾರಿ ಹೋಗಿವೆ. ಕೆಲವೇ ನಿಮಿಷಗಳಲ್ಲಿ ಆಲಿಕಲ್ಲುಗಳು ರಾಶಿ ರಾಶಿಯಾಗಿ ನೆಲದ ಮೇಲೆ ಸಂಗ್ರಹಗೊಂಡಿದ್ದವು.</p>.<p>ತಾಲ್ಲೂಕಿನ ಪಾಳಾದಿಂದ ಹಾನಗಲ್ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಬೃಹತ್ ಮಾವಿನ ಮರವೊಂದು ಉರುಳಿ ಬಿದ್ದಿತ್ತು. ಇದರಿಂದ, ಈ ಮಾರ್ಗದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಮರ ತೆರವುಗೊಳಿಸುವವರೆಗೂ ದಾರಿಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>ಸ್ಥಳೀಯರು ರಸ್ತೆಗೆ ಬಿದ್ದ ಮಾವಿನ ಮರದ ಕೊಂಬೆಗಳನ್ನು ಉರುವಲು ಕಟ್ಟಿಗೆಯಾಗಿ ಬಳಸಲು, ಕೊಂಡೊಯ್ಯಲು ಮುಗಿಬಿದ್ದ ದೃಶ್ಯ ಕಂಡುಬಂತು. ಅರಣ್ಯ ಇಲಾಖೆಯ ಸಿಬ್ಬಂದಿ ಆಗಮಿಸಿ, ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>