<p><strong>ಗೋಕರ್ಣ</strong>: ಮಳೆಗಾಲ ಪ್ರಾರಂಭವಾಗಿ ಶುಕ್ರವಾರ ಸುರಿದ ಪ್ರಥಮ ರಭಸದ ಮಳೆಗೇ ಗೋಕರ್ಣದ ಹಲವು ಕಡೆ ನೀರು ತುಂಬಿ ಪರದಾಡುವ ಸ್ಥಿತಿ ಉಂಟಾಯಿತು. ಮಹಾಬಲೇಶ್ವರನ ಗರ್ಭಗುಡಿಯೂ ಜಲಾವೃತವಾಗಿ, ಆತ್ಮಲಿಂಗ ಗಂಟೆಗಳ ಕಾಲ ರಾಡಿ ನೀರಿನಿಂದ ಮುಳುಗಿತ್ತು.</p>.<p>ಒಂದು ಗಂಟೆ ಕಾಲ ಭಕ್ತರಿಗೆ ಆತ್ಮಲಿಂಗದ ದರ್ಶನಕ್ಕೆ ಅವಕಾಶ ನಿಲ್ಲಿಸಲಾಗಿತ್ತು. ಸಮುದ್ರದಲ್ಲೂ ಭರತವಿದ್ದು, ಸಂಗಮದ ನಾಲೆಯಿಂದ ಬಂದ ಮಳೆಯ ನೀರು ಸಮುದ್ರಕ್ಕೆ ಸೇರದಿರುವುದೇ ಇದಕ್ಕೆ ಕಾರಣವಾಗಿತ್ತು. ಆ ನೀರು ಗರ್ಭಗುಡಿಯಿಂದ ತೀರ್ಥ ಹೊರಹೋಗುವ ಸೋಮಸೂತ್ರದಿಂದ ಒಳನುಗ್ಗಿ ಗರ್ಭಗುಡಿ ಜಲಾವೃತವಾಗಿತ್ತು. ನೀರೆಲ್ಲಾ ಹೊರಹಾಕಿದ ಮೇಲೆ ಮಧ್ಯಾಹ್ನ 3 ಗಂಟೆಯ ನಂತರ ಮಹಾಪೂಜೆ ನೆರವೇರಿಸಲಾಯಿತು.</p>.<p>ಪ್ರತಿ ವರ್ಷ ಮಳೆಗಾಲದಲ್ಲಿ ಕೆಲವು ಸಲ ಈ ಸಮಸ್ಯೆಯಾಗುತ್ತಿದ್ದು, ಶಾಸಕರಾಗಲಿ, ಅಧಿಕಾರಿಗಳಾಗಲಿ ಪರಿಹಾರ ದೊರಕಿಸದಿರುವುದು ಭಕ್ತರಲ್ಲಿ ಬೇಸರ ಮೂಡಿಸಿದೆ.</p>.<p>ರಥಬೀದಿ, ಗಂಜಿಗದ್ದೆಯಲ್ಲೂ ರಸ್ತೆಯ ಮೇಲೆ ನೀರು ತುಂಬಿ ಜನರು ಪರದಾಡುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕರ್ಣ</strong>: ಮಳೆಗಾಲ ಪ್ರಾರಂಭವಾಗಿ ಶುಕ್ರವಾರ ಸುರಿದ ಪ್ರಥಮ ರಭಸದ ಮಳೆಗೇ ಗೋಕರ್ಣದ ಹಲವು ಕಡೆ ನೀರು ತುಂಬಿ ಪರದಾಡುವ ಸ್ಥಿತಿ ಉಂಟಾಯಿತು. ಮಹಾಬಲೇಶ್ವರನ ಗರ್ಭಗುಡಿಯೂ ಜಲಾವೃತವಾಗಿ, ಆತ್ಮಲಿಂಗ ಗಂಟೆಗಳ ಕಾಲ ರಾಡಿ ನೀರಿನಿಂದ ಮುಳುಗಿತ್ತು.</p>.<p>ಒಂದು ಗಂಟೆ ಕಾಲ ಭಕ್ತರಿಗೆ ಆತ್ಮಲಿಂಗದ ದರ್ಶನಕ್ಕೆ ಅವಕಾಶ ನಿಲ್ಲಿಸಲಾಗಿತ್ತು. ಸಮುದ್ರದಲ್ಲೂ ಭರತವಿದ್ದು, ಸಂಗಮದ ನಾಲೆಯಿಂದ ಬಂದ ಮಳೆಯ ನೀರು ಸಮುದ್ರಕ್ಕೆ ಸೇರದಿರುವುದೇ ಇದಕ್ಕೆ ಕಾರಣವಾಗಿತ್ತು. ಆ ನೀರು ಗರ್ಭಗುಡಿಯಿಂದ ತೀರ್ಥ ಹೊರಹೋಗುವ ಸೋಮಸೂತ್ರದಿಂದ ಒಳನುಗ್ಗಿ ಗರ್ಭಗುಡಿ ಜಲಾವೃತವಾಗಿತ್ತು. ನೀರೆಲ್ಲಾ ಹೊರಹಾಕಿದ ಮೇಲೆ ಮಧ್ಯಾಹ್ನ 3 ಗಂಟೆಯ ನಂತರ ಮಹಾಪೂಜೆ ನೆರವೇರಿಸಲಾಯಿತು.</p>.<p>ಪ್ರತಿ ವರ್ಷ ಮಳೆಗಾಲದಲ್ಲಿ ಕೆಲವು ಸಲ ಈ ಸಮಸ್ಯೆಯಾಗುತ್ತಿದ್ದು, ಶಾಸಕರಾಗಲಿ, ಅಧಿಕಾರಿಗಳಾಗಲಿ ಪರಿಹಾರ ದೊರಕಿಸದಿರುವುದು ಭಕ್ತರಲ್ಲಿ ಬೇಸರ ಮೂಡಿಸಿದೆ.</p>.<p>ರಥಬೀದಿ, ಗಂಜಿಗದ್ದೆಯಲ್ಲೂ ರಸ್ತೆಯ ಮೇಲೆ ನೀರು ತುಂಬಿ ಜನರು ಪರದಾಡುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>