<p><strong>ಕಾರವಾರ</strong>: ತಾಲ್ಲೂಕಿನ ಬಾಳೆಮನೆ ಸಮೀಪ ಗುರುವಾರ ನಸುಕಿನ ಜಾವ ಭೂಕುಸಿತ ಉಂಟಾಗಿದ್ದು, ಕದ್ರಾದಿಂದ ಕೊಡಸಳ್ಳಿ ಅಣೆಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.</p><p>ಸುಮಾರು 50 ಮೀಟರ್ ಅಗಲದವರೆಗೆ ಭೂಮಿ ಕುಸಿದಿದ್ದು, ರಸ್ತೆಯ ಮೇಲೆರಗಿದೆ. ಹಲವು ಮರಗಳು ಮಣ್ಣಿನಡಿಗೆ ಸಿಲುಕಿವೆ. ಈ ಮಾರ್ಗದಲ್ಲಿ ವಾಹನ ಸಂಚಾರ ನಡೆಯುವುದು ವಿರಳ.</p><p>'ಭೂಕುಸಿತದ ಘಟನೆ ನಡೆದ ಸ್ಥಳವು ಕದ್ರಾ ಅಣೆಕಟ್ಟೆಯಿಂದ ಕೇವಲ 12 ಕಿ.ಮೀ ದೂರದಲ್ಲಿ, ಕೊಡಸಳ್ಳಿ ಅಣೆಕಟ್ಟೆಯಿಂದ 22 ಕಿ.ಮೀ ದೂರದಲ್ಲಿದೆ. ಅಣೆಕಟ್ಟೆಯ ಜಲಾನಯನ ಪ್ರದೇಶಕ್ಕೆ ಸಮೀಪ ಕುಸಿತ ಸಂಭವಿಸಿದ್ದರಿಂದ ಆತಂಕ ಉಂಟಾಗಿದೆ' ಎಂದು ಕದ್ರಾ ಭಾಗದ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.</p><p>ಬಾಳೆಮನೆ, ಜೊಯಿಡಾ ತಾಲ್ಲೂಕಿನ ಸೂಳಗೇರಿ ಗ್ರಾಮದ ಜನರಿಗೆ ಇದೊಂದೇ ರಸ್ತೆ ಸಂಪರ್ಕಕ್ಕೆ ಆಸರೆಯಾಗಿದೆ. ಕೊಡಸಳ್ಳಿ ಅಣೆಕಟ್ಟೆ ನಿರ್ವಹಣೆ ಕೆಲಸಕ್ಕೆ ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿ) ಸಿಬ್ಬಂದಿ ತೆರಳಲೂ ಇದೊಂದೇ ಮಾರ್ಗ. ಸದ್ಯ ಅಲ್ಲಿ ವಾಹನ ಸಂಚಾರ ಸಾಧ್ಯವಿಲ್ಲದ ಸ್ಥಿತಿ ಇದೆ.</p><p>'ಭೂಕುಸಿತವಾದ ಸ್ಥಳ ಅಣೆಕಟ್ಟೆಯಿಂದ ಸಾಕಷ್ಟು ದೂರದಲ್ಲಿದ್ದು, ಅಣೆಕಟ್ಟೆಯ ಭದ್ರತೆಗೆ ಅಪಾಯವಿಲ್ಲ. ರಸ್ತೆಗೆ ಬಿದ್ದಿರುವ ಮಣ್ಣಿನ ರಾಶಿ ತೆರವುಗೊಳಿಸಲಾಗುತ್ತಿದೆ' ಎಂದು ಕೆಪಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ತಾಲ್ಲೂಕಿನ ಬಾಳೆಮನೆ ಸಮೀಪ ಗುರುವಾರ ನಸುಕಿನ ಜಾವ ಭೂಕುಸಿತ ಉಂಟಾಗಿದ್ದು, ಕದ್ರಾದಿಂದ ಕೊಡಸಳ್ಳಿ ಅಣೆಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.</p><p>ಸುಮಾರು 50 ಮೀಟರ್ ಅಗಲದವರೆಗೆ ಭೂಮಿ ಕುಸಿದಿದ್ದು, ರಸ್ತೆಯ ಮೇಲೆರಗಿದೆ. ಹಲವು ಮರಗಳು ಮಣ್ಣಿನಡಿಗೆ ಸಿಲುಕಿವೆ. ಈ ಮಾರ್ಗದಲ್ಲಿ ವಾಹನ ಸಂಚಾರ ನಡೆಯುವುದು ವಿರಳ.</p><p>'ಭೂಕುಸಿತದ ಘಟನೆ ನಡೆದ ಸ್ಥಳವು ಕದ್ರಾ ಅಣೆಕಟ್ಟೆಯಿಂದ ಕೇವಲ 12 ಕಿ.ಮೀ ದೂರದಲ್ಲಿ, ಕೊಡಸಳ್ಳಿ ಅಣೆಕಟ್ಟೆಯಿಂದ 22 ಕಿ.ಮೀ ದೂರದಲ್ಲಿದೆ. ಅಣೆಕಟ್ಟೆಯ ಜಲಾನಯನ ಪ್ರದೇಶಕ್ಕೆ ಸಮೀಪ ಕುಸಿತ ಸಂಭವಿಸಿದ್ದರಿಂದ ಆತಂಕ ಉಂಟಾಗಿದೆ' ಎಂದು ಕದ್ರಾ ಭಾಗದ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.</p><p>ಬಾಳೆಮನೆ, ಜೊಯಿಡಾ ತಾಲ್ಲೂಕಿನ ಸೂಳಗೇರಿ ಗ್ರಾಮದ ಜನರಿಗೆ ಇದೊಂದೇ ರಸ್ತೆ ಸಂಪರ್ಕಕ್ಕೆ ಆಸರೆಯಾಗಿದೆ. ಕೊಡಸಳ್ಳಿ ಅಣೆಕಟ್ಟೆ ನಿರ್ವಹಣೆ ಕೆಲಸಕ್ಕೆ ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿ) ಸಿಬ್ಬಂದಿ ತೆರಳಲೂ ಇದೊಂದೇ ಮಾರ್ಗ. ಸದ್ಯ ಅಲ್ಲಿ ವಾಹನ ಸಂಚಾರ ಸಾಧ್ಯವಿಲ್ಲದ ಸ್ಥಿತಿ ಇದೆ.</p><p>'ಭೂಕುಸಿತವಾದ ಸ್ಥಳ ಅಣೆಕಟ್ಟೆಯಿಂದ ಸಾಕಷ್ಟು ದೂರದಲ್ಲಿದ್ದು, ಅಣೆಕಟ್ಟೆಯ ಭದ್ರತೆಗೆ ಅಪಾಯವಿಲ್ಲ. ರಸ್ತೆಗೆ ಬಿದ್ದಿರುವ ಮಣ್ಣಿನ ರಾಶಿ ತೆರವುಗೊಳಿಸಲಾಗುತ್ತಿದೆ' ಎಂದು ಕೆಪಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>