<p><strong>ಕಾರವಾರ</strong>: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ನಸುಕಿನಿಂದ ಕೆಲ ಗಂಟೆ ನಿರಂತರ ಮಳೆ ಸುರಿದಿದ್ದರಿಂದ ಅಘನಾಶಿನಿ ನದಿ ಸೇರಿ ಹಲವು ಉಪನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.</p>.<p>ಘಟ್ಟದ ಮೇಲಿನ ಸಿದ್ದಾಪುರ, ಶಿರಸಿ ಭಾಗದಲ್ಲಿ ಮಳೆ ಸುರಿದಿದ್ದರಿಂದ ಅಘನಾಶಿನಿ ನದಿಯ ಉಪನದಿ ಚಂಡಿಕಾ ಉಕ್ಕೇರಿ ಹರಿಯಿತು. ಕುಮಟಾ ತಾಲ್ಲೂಕಿನ ಕತಗಾಲ ಬಳಿ ರಾಷ್ಟ್ರೀಯ ಹೆದ್ದಾರಿ–766 ಜಲಾವೃತಗೊಂಡು ಸುಮಾರು 6 ಗಂಟೆಗೂ ಹೆಚ್ಚು ಹೊತ್ತು ಸಂಚಾರ ಸ್ಥಗತಗೊಂಡಿತ್ತು. ರಸ್ತೆಯಲ್ಲಿ ಸಿಲುಕಿದ್ದವರನ್ನು ದೋಣಿ ಬಳಸಿ ದಾಟಿಸಲಾಯಿತು. ಖಾಸಗಿ ಬಸ್ ನೀರಿನಲ್ಲೇ ಸಿಲುಕಿಕೊಂಡು, ಮುಂದೆ ಸಾಗಲು ಸಾಧ್ಯವಾಗಲಿಲ್ಲ.</p>.<p>ಹೊನ್ನಾವರ ತಾಲ್ಲೂಕಿನ ಭಾಸ್ಕೇರಿ ಸಮೀಪ ಹೊನ್ನಾವರ–ಸಾಗರ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–69 ರಲ್ಲಿ ಗುಡ್ಡ ಕುಸಿದು ಕೆಲ ಗಂಟೆ ಸಂಚಾರ ಸ್ಥಗಿತವಾಗಿತ್ತು. ಶಿರಸಿಯಲ್ಲಿ ಮಳೆಯಿಂದ ಮನೆಯ ಚಾವಣಿ ಕುಸಿದು ಲಕ್ಷಾಂತರ ಮೊತ್ತದ ಹಾನಿ ಸಂಭವಿಸಿದೆ.</p>.<p>ಗುಂಡಬಾಳ ನದಿಯು ಉಕ್ಕೇರಿದ್ದರಿಂದ ಹರಿಜನಕೇರಿ, ಹಿತ್ತಲಕೇರಿ ಗ್ರಾಮಸ್ಥರನ್ನು ಮತ್ತು ಅಂಕೋಲಾ ತಾಲ್ಲೂಕಿನಲ್ಲಿ ಗಂಗಾವಳಿ ನದಿ ಉಕ್ಕಿದ್ದರಿಂದ ಬಿಳಿಹೊಯ್ಗಿ, ಶಿಂಗನಮಕ್ಕಿ, ಹಡವ ಗ್ರಾಮದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಕುಮಟಾ ಮತ್ತು ಹೊನ್ನಾವರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ನಸುಕಿನಿಂದ ಕೆಲ ಗಂಟೆ ನಿರಂತರ ಮಳೆ ಸುರಿದಿದ್ದರಿಂದ ಅಘನಾಶಿನಿ ನದಿ ಸೇರಿ ಹಲವು ಉಪನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.</p>.<p>ಘಟ್ಟದ ಮೇಲಿನ ಸಿದ್ದಾಪುರ, ಶಿರಸಿ ಭಾಗದಲ್ಲಿ ಮಳೆ ಸುರಿದಿದ್ದರಿಂದ ಅಘನಾಶಿನಿ ನದಿಯ ಉಪನದಿ ಚಂಡಿಕಾ ಉಕ್ಕೇರಿ ಹರಿಯಿತು. ಕುಮಟಾ ತಾಲ್ಲೂಕಿನ ಕತಗಾಲ ಬಳಿ ರಾಷ್ಟ್ರೀಯ ಹೆದ್ದಾರಿ–766 ಜಲಾವೃತಗೊಂಡು ಸುಮಾರು 6 ಗಂಟೆಗೂ ಹೆಚ್ಚು ಹೊತ್ತು ಸಂಚಾರ ಸ್ಥಗತಗೊಂಡಿತ್ತು. ರಸ್ತೆಯಲ್ಲಿ ಸಿಲುಕಿದ್ದವರನ್ನು ದೋಣಿ ಬಳಸಿ ದಾಟಿಸಲಾಯಿತು. ಖಾಸಗಿ ಬಸ್ ನೀರಿನಲ್ಲೇ ಸಿಲುಕಿಕೊಂಡು, ಮುಂದೆ ಸಾಗಲು ಸಾಧ್ಯವಾಗಲಿಲ್ಲ.</p>.<p>ಹೊನ್ನಾವರ ತಾಲ್ಲೂಕಿನ ಭಾಸ್ಕೇರಿ ಸಮೀಪ ಹೊನ್ನಾವರ–ಸಾಗರ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–69 ರಲ್ಲಿ ಗುಡ್ಡ ಕುಸಿದು ಕೆಲ ಗಂಟೆ ಸಂಚಾರ ಸ್ಥಗಿತವಾಗಿತ್ತು. ಶಿರಸಿಯಲ್ಲಿ ಮಳೆಯಿಂದ ಮನೆಯ ಚಾವಣಿ ಕುಸಿದು ಲಕ್ಷಾಂತರ ಮೊತ್ತದ ಹಾನಿ ಸಂಭವಿಸಿದೆ.</p>.<p>ಗುಂಡಬಾಳ ನದಿಯು ಉಕ್ಕೇರಿದ್ದರಿಂದ ಹರಿಜನಕೇರಿ, ಹಿತ್ತಲಕೇರಿ ಗ್ರಾಮಸ್ಥರನ್ನು ಮತ್ತು ಅಂಕೋಲಾ ತಾಲ್ಲೂಕಿನಲ್ಲಿ ಗಂಗಾವಳಿ ನದಿ ಉಕ್ಕಿದ್ದರಿಂದ ಬಿಳಿಹೊಯ್ಗಿ, ಶಿಂಗನಮಕ್ಕಿ, ಹಡವ ಗ್ರಾಮದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಕುಮಟಾ ಮತ್ತು ಹೊನ್ನಾವರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>