<p><strong>ಶಿರಸಿ: </strong>ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮನೆ ಕಳೆದುಕೊಂಡು ಅತಂತ್ರರಾದ ತಾಲ್ಲೂಕಿನ ರೇವಣಕಟ್ಟಾದ ಹದಿನೈದಕ್ಕೂ ಹೆಚ್ಚು ಕುಟುಂಬಗಳು ತಾತ್ಕಾಲಿಕ ಸೂರು ನಿರ್ಮಿಸಿಕೊಳ್ಳಲು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ನೆರವು ನೀಡಿದ್ದಾರೆ.</p>.<p>ಸುರಕ್ಷಿತ ಸ್ಥಳದಲ್ಲಿ ಸಂತ್ರಸ್ತರು ತಾತ್ಕಾಲಿಕವಾಗಿ ವಸತಿ ಮಾಡಲು ಮನೆ ನಿರ್ಮಿಸಿಕೊಳ್ಳುತ್ತಿದ್ದು, ಅದಕ್ಕೆ ಅಗತ್ಯವಿರುವ ಶೀಟ್ಗಳು, ನೆಲಹಾಸು ಕಲ್ಲುಗಳನ್ನು ಸ್ವಂತ ವೆಚ್ಚದಲ್ಲಿ ಪೂರೈಸಿದ್ದಾರೆ. ಈ ಮೂಲಕ ಸಂತ್ರಸ್ತರಲ್ಲಿ ಧೈರ್ಯ ತುಂಬಿದ್ದಾರೆ.</p>.<p>ನೆರೆ ಸ್ಥಿತಿ ಸಂಭವಿಸಿದ್ದ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಅವರು ಅಲ್ಲಿನ ಪರಿಸ್ಥಿತಿ ಅವಲೋಕಿಸಿದ್ದರು. ಅಗತ್ಯ ನೆರವು ನೀಡುವ ಭರವಸೆ ನೀಡಿದ್ದರು. ಮಂಗಳವಾರವೇ ರೇವಣಕಟ್ಟಾ ಗ್ರಾಮಕ್ಕೆ ಅಗತ್ಯ ಪರಿಕರಗಳನ್ನು ಕಳುಹಿಸಿಕೊಡಲಾಗಿತ್ತು. ಬುಧವಾರ ಸಂತ್ರಸ್ತರಿಗೆ ಪುನಃ ಧೈರ್ಯ ತುಂಬಿ ಅವುಗಳನ್ನು ಹಸ್ತಾಂತರಿಸಿದರು.</p>.<p>ಇಟಗುಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನವಗ್ರಾಮ ಇನ್ನಿತರ ಕಡೆಗಳ ನೆರೆಬಾಧಿತ ಸ್ಥಳಗಳಿಗೂ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಇಲ್ಲಿನ ಕೆರಿಯಾ ಗೌಡ, ಸೀತಾರಾಮ, ಅಶೋಕ, ಬೆಳ್ಳಿ ಇನ್ನಿತರರ ಮನೆಗೆ ಭೇಟಿ ನೀಡಿ ನೆರವು ಒದಗಿಸುವ ಭರವಸೆ ನೀಡಿದ್ದಾರೆ.</p>.<p>‘ಅತಿವೃಷ್ಟಿಯಿಂದ ಜನರು ಕಷ್ಟ ಎದುರಿಸುತ್ತಿದ್ದಾರೆ. ವ್ಯಾಪಕ ಪ್ರಮಾಣ ಆಸ್ತಿ, ಬೆಳೆ ಹಾನಿಗೀಡಾಗಿದೆ. ಇಂತಹ ಸಂಕಷ್ಟದಲ್ಲಿ ಜನಪ್ರತಿನಿಧಿಗಳು ಜರನ ನೆರವಿಗೆ ಧಾವಿಸದಿರುವುದು ಸರಿಯಲ್ಲ’ ಎಂದು ಭೀಮಣ್ಣ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರಮುಖರಾದ ಎಸ್.ಕೆ. ಭಾಗವತ, ಜಗದೀಶ ಗೌಡ, ವಿ.ಎಂ. ಹೆಗಡೆ, ಗೀತಾ ಭೋವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮನೆ ಕಳೆದುಕೊಂಡು ಅತಂತ್ರರಾದ ತಾಲ್ಲೂಕಿನ ರೇವಣಕಟ್ಟಾದ ಹದಿನೈದಕ್ಕೂ ಹೆಚ್ಚು ಕುಟುಂಬಗಳು ತಾತ್ಕಾಲಿಕ ಸೂರು ನಿರ್ಮಿಸಿಕೊಳ್ಳಲು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ನೆರವು ನೀಡಿದ್ದಾರೆ.</p>.<p>ಸುರಕ್ಷಿತ ಸ್ಥಳದಲ್ಲಿ ಸಂತ್ರಸ್ತರು ತಾತ್ಕಾಲಿಕವಾಗಿ ವಸತಿ ಮಾಡಲು ಮನೆ ನಿರ್ಮಿಸಿಕೊಳ್ಳುತ್ತಿದ್ದು, ಅದಕ್ಕೆ ಅಗತ್ಯವಿರುವ ಶೀಟ್ಗಳು, ನೆಲಹಾಸು ಕಲ್ಲುಗಳನ್ನು ಸ್ವಂತ ವೆಚ್ಚದಲ್ಲಿ ಪೂರೈಸಿದ್ದಾರೆ. ಈ ಮೂಲಕ ಸಂತ್ರಸ್ತರಲ್ಲಿ ಧೈರ್ಯ ತುಂಬಿದ್ದಾರೆ.</p>.<p>ನೆರೆ ಸ್ಥಿತಿ ಸಂಭವಿಸಿದ್ದ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಅವರು ಅಲ್ಲಿನ ಪರಿಸ್ಥಿತಿ ಅವಲೋಕಿಸಿದ್ದರು. ಅಗತ್ಯ ನೆರವು ನೀಡುವ ಭರವಸೆ ನೀಡಿದ್ದರು. ಮಂಗಳವಾರವೇ ರೇವಣಕಟ್ಟಾ ಗ್ರಾಮಕ್ಕೆ ಅಗತ್ಯ ಪರಿಕರಗಳನ್ನು ಕಳುಹಿಸಿಕೊಡಲಾಗಿತ್ತು. ಬುಧವಾರ ಸಂತ್ರಸ್ತರಿಗೆ ಪುನಃ ಧೈರ್ಯ ತುಂಬಿ ಅವುಗಳನ್ನು ಹಸ್ತಾಂತರಿಸಿದರು.</p>.<p>ಇಟಗುಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನವಗ್ರಾಮ ಇನ್ನಿತರ ಕಡೆಗಳ ನೆರೆಬಾಧಿತ ಸ್ಥಳಗಳಿಗೂ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಇಲ್ಲಿನ ಕೆರಿಯಾ ಗೌಡ, ಸೀತಾರಾಮ, ಅಶೋಕ, ಬೆಳ್ಳಿ ಇನ್ನಿತರರ ಮನೆಗೆ ಭೇಟಿ ನೀಡಿ ನೆರವು ಒದಗಿಸುವ ಭರವಸೆ ನೀಡಿದ್ದಾರೆ.</p>.<p>‘ಅತಿವೃಷ್ಟಿಯಿಂದ ಜನರು ಕಷ್ಟ ಎದುರಿಸುತ್ತಿದ್ದಾರೆ. ವ್ಯಾಪಕ ಪ್ರಮಾಣ ಆಸ್ತಿ, ಬೆಳೆ ಹಾನಿಗೀಡಾಗಿದೆ. ಇಂತಹ ಸಂಕಷ್ಟದಲ್ಲಿ ಜನಪ್ರತಿನಿಧಿಗಳು ಜರನ ನೆರವಿಗೆ ಧಾವಿಸದಿರುವುದು ಸರಿಯಲ್ಲ’ ಎಂದು ಭೀಮಣ್ಣ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರಮುಖರಾದ ಎಸ್.ಕೆ. ಭಾಗವತ, ಜಗದೀಶ ಗೌಡ, ವಿ.ಎಂ. ಹೆಗಡೆ, ಗೀತಾ ಭೋವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>