ಧರ್ಮದರ್ಶಿಗಳ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸೂರಜ್ ಗೋವಿಂದರಾಜ್, ಕಳೆದ ವಾರವೇ ಆಯ್ಕೆಯಾದ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸದಂತೆ ಆದೇಶಿಸಿದ್ದರು. ಮಂಗಳವಾರ ಪುನಃ ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡೂ ದೇವಸ್ಥಾನಗಳ ಆಡಳಿತ ಸಮಿತಿಯ ಸಂಪೂರ್ಣ ಆಯ್ಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.