ಸಾಂಸ್ಕೃತಿಕ ಸಂಭ್ರಮದಲ್ಲಿ ಕಲಾವಿದೆ ತುಳಸಿ ಹೆಗಡೆ ಇವಳಿಂದ ‘ಪರಿವರ್ತನೆ ಜಗದ ನಿಯಮ’ ಯಕ್ಷನೃತ್ಯ ರೂಪಕ, ಶಾಂಭವಿ ಶಂಕರ ಭಟ್ಟ ಇವಳಿಂದ ಕಥಾ ಕೀರ್ತನೆ, ನರಸಿಂಹ ಜೋಷಿ ಸಂಪೇಸರ ಅವರ ಹಿಂದೂಸ್ತಾನಿ ಗಾಯನ ನಡೆಯಲಿದೆ. ಮೇ 5ರ ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಇತಿಹಾಸಕಾರ ಲಕ್ಷ್ಮಣ ತೆಲಗಾವಿ ಅವರಿಗೆ ‘ಸೋದೆ ಸದಾಶಿವರಾಯ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ. ಸ್ವಾದಿ ದಿಗಂಬರ ಜೈನ ಮಠಾಧೀಶ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಹೇಳಿದರು. ಸಮ್ಮೇಳನ ಸಮಿತಿ ಪ್ರಮುಖರಾದ ಎನ್.ಎನ್.ಹೆಗಡೆ ಕಲಗದ್ದೆ, ಎನ್.ಎನ್.ಹೆಗಡೆ ವಾಜಗದ್ದೆ, ಸುಧೀರ ಪರಾಂಜಪೆ, ರತ್ನಾಕರ ಹೆಗಡೆ, ಶ್ರೀಧರ ಹೆಗಡೆ ಇದ್ದರು.