<p>ಹೊನ್ನಾವರ: ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಮಾಲಿನ್ಯ ಇನ್ನಷ್ಟು ಹೆಚ್ಚಿದ್ದು ಜನರು ಕ್ಯಾನ್ಸರ್ ಮೊದಲಾದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೀಶ ಸಿ.ಕೆ.ಅಭಿಪ್ರಾಯಪಟ್ಟರು.</p>.<p>ಲಯನ್ಸ್ ಕ್ಲಬ್ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಆಶ್ರಯದಲ್ಲಿ ಕಾಸರಕೋಡಿನಲ್ಲಿರುವ ಅರಣ್ಯ ಇಲಾಖೆಯ ಸಸ್ಯಪಾಲನಾಲಯದಲ್ಲಿ ಶನಿವಾರ ನಡೆದ ಬೀಜದುಂಡೆ ತಯಾರಿಕೆ ಮತ್ತು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>’ಪರಿಸರ ಸಮತೋಲನ ಕಾಯುವಲ್ಲಿ ಕಾಡಿನ ಪಾತ್ರ ಮಹತ್ವದ್ದಾಗಿದ್ದು ಸಾರ್ವಜನಿಕ ವಲಯದಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ಕೆ ಪ್ರೋತ್ಸಾಹ ಅಗತ್ಯ.ಗೊಬ್ಬರ ಮಿಶ್ರಿತ ಮಣ್ಣಿನಲ್ಲಿ ಬೀಜಗಳನ್ನಿಟ್ಟು ಬೀಜದುಂಡೆಗಳನ್ನು ತಯಾರಿಸಲಾಗುತ್ತದೆ;ಬೀಜಪ್ರಸರಣದ ಮೂಲಕ ಸ್ವಾಭಾವಿಕವಾಗಿ ಗಿಡಗಳು ಬೆಳೆಯುವಂತೆ ಮಾಡುವುದು ಇದರಿಂದ ಸಾಧ್ಯವಾಗುತ್ತದೆ' ಎಂದು ಅವರು ಹೇಳಿದರು.</p>.<p>ಲಯನ್ ಎಂ.ಜೆ.ಎಫ್. ರವೀಂದ್ರ ನಾಯ್ಕ ಪರಿಸರ ಸ್ನೇಹಿ ಚೀಲಗಳನ್ನು ವಿತರಿಸಿದರು. ಲಯನ್ಸ್ ವಿವಿಧ ಪದಾಧಿಕಾರಿಗಳಾದ ರವಿ ಹೆಗಡೆ, ಗಣಪತಿ ನಾಯಕ, ಗಿರೀಶ ಕುಚಿನಾಡ್, ಐಶ್ವರ್ಯ ಮಾಸೂರಕರ್, ರಾಜೇಶ ಸಾಳೆಹಿತ್ತಲ್, ಮಂಜುಳಾ ಕುಚಿನಾಡ್, ಗಿರೀಶ ಶೇಟ್, ಆರ್.ಎಚ್.ನಾಯ್ಕ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-20-1306065786</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾವರ: ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಮಾಲಿನ್ಯ ಇನ್ನಷ್ಟು ಹೆಚ್ಚಿದ್ದು ಜನರು ಕ್ಯಾನ್ಸರ್ ಮೊದಲಾದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೀಶ ಸಿ.ಕೆ.ಅಭಿಪ್ರಾಯಪಟ್ಟರು.</p>.<p>ಲಯನ್ಸ್ ಕ್ಲಬ್ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಆಶ್ರಯದಲ್ಲಿ ಕಾಸರಕೋಡಿನಲ್ಲಿರುವ ಅರಣ್ಯ ಇಲಾಖೆಯ ಸಸ್ಯಪಾಲನಾಲಯದಲ್ಲಿ ಶನಿವಾರ ನಡೆದ ಬೀಜದುಂಡೆ ತಯಾರಿಕೆ ಮತ್ತು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>’ಪರಿಸರ ಸಮತೋಲನ ಕಾಯುವಲ್ಲಿ ಕಾಡಿನ ಪಾತ್ರ ಮಹತ್ವದ್ದಾಗಿದ್ದು ಸಾರ್ವಜನಿಕ ವಲಯದಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ಕೆ ಪ್ರೋತ್ಸಾಹ ಅಗತ್ಯ.ಗೊಬ್ಬರ ಮಿಶ್ರಿತ ಮಣ್ಣಿನಲ್ಲಿ ಬೀಜಗಳನ್ನಿಟ್ಟು ಬೀಜದುಂಡೆಗಳನ್ನು ತಯಾರಿಸಲಾಗುತ್ತದೆ;ಬೀಜಪ್ರಸರಣದ ಮೂಲಕ ಸ್ವಾಭಾವಿಕವಾಗಿ ಗಿಡಗಳು ಬೆಳೆಯುವಂತೆ ಮಾಡುವುದು ಇದರಿಂದ ಸಾಧ್ಯವಾಗುತ್ತದೆ' ಎಂದು ಅವರು ಹೇಳಿದರು.</p>.<p>ಲಯನ್ ಎಂ.ಜೆ.ಎಫ್. ರವೀಂದ್ರ ನಾಯ್ಕ ಪರಿಸರ ಸ್ನೇಹಿ ಚೀಲಗಳನ್ನು ವಿತರಿಸಿದರು. ಲಯನ್ಸ್ ವಿವಿಧ ಪದಾಧಿಕಾರಿಗಳಾದ ರವಿ ಹೆಗಡೆ, ಗಣಪತಿ ನಾಯಕ, ಗಿರೀಶ ಕುಚಿನಾಡ್, ಐಶ್ವರ್ಯ ಮಾಸೂರಕರ್, ರಾಜೇಶ ಸಾಳೆಹಿತ್ತಲ್, ಮಂಜುಳಾ ಕುಚಿನಾಡ್, ಗಿರೀಶ ಶೇಟ್, ಆರ್.ಎಚ್.ನಾಯ್ಕ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-20-1306065786</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>