ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ, ಪೌರಾಯುಕ್ತರ ಮೇಲೆ ಜೇನು ದಾಳಿ: ಪ್ರಾಣಾಪಾಯದಿಂದ ಪಾರು

Published 8 ಮೇ 2024, 8:15 IST
Last Updated 8 ಮೇ 2024, 8:15 IST
ಅಕ್ಷರ ಗಾತ್ರ

ಶಿರಸಿ: ನಗರ ಕುಡಿಯುವ ನೀರಿನ ಮೂಲವಾದ ಕೆಂಗ್ರೆ ಜಾಕ್ ವೆಲ್ ಬಳಿ ನೀರು ಕ್ಷೀಣಿಸಿದ ಹಿನ್ನೆಲೆ ಸ್ಥಳ ವೀಕ್ಷಣೆಗೆ ತೆರಳಿದ್ದ ಶಾಸಕ ಭೀಮಣ್ಣ ನಾಯ್ಕ ಹಾಗೂ ಪೌರಾಯುಕ್ತ ಕಾಂತರಾಜ್ ಮೇಲೆ ಜೇನು ದಾಳಿ ನಡೆಸಿದ ಘಟನೆ ನಡೆದಿದೆ.

ಬುಧವಾರ ಕೆಂಗ್ರೆ ಜಾಕ್ ವೆಲ್ ವೀಕ್ಷಣೆಗೆ ತೆರಳಿದ್ದ ವೇಳೆ ಜೇನು ಹಿಂಡು ಭೀಮಣ್ಣ ನಾಯ್ಕ ಹಾಗೂ ಕಾಂತರಾಜ್ ಅವರ ಮೇಲೆ ಹಠಾತ್ ದಾಳಿ ನಡೆಸಿವೆ. ಈ ವೇಳೆ ಸ್ಥಳದಲ್ಲಿದ್ದವರು ಇಬ್ಬರನ್ನೂ ವಾಹನದಲ್ಲಿ ಕುಳ್ಳಿರಿಸಿ ಬಾಗಿಲು ಮುಚ್ಚಿದ ಕಾರಣ ಹೆಚ್ಚಿನ ಅಪಾಯ ಸಂಭವಿಸಿಲ್ಲ. ತಕ್ಷಣ ನಗರದ ಟಿ.ಎಸ್.ಎಸ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಜಲಮೂಲವಾದ ಕೆಂಗ್ರೆ ಹೊಳೆ ಬತ್ತಿದೆ. ಶಾಸಕ ಭೀಮಣ್ಣ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಕಾರಣಕ್ಕೆ ಕುಡಿಯುವ ನೀರಿನ ಸಮಸ್ಯೆ ಕೇಳುವವರಿಲ್ಲದಂತಾಗಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಸ್ವತಃ ಅವರು ಅಧಿಕಾರಿಗಳ ಜತೆಗೂಡಿ ಸ್ಥಳ ವೀಕ್ಷಣೆಗೆ ತೆರಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT