<p>ಹೊನ್ನಾವರ: ‘ಹಸಿರಿನಿಂದ ಕಂಗೊಳಿಸುವ ಉತ್ತಮ ಪರಿಸರ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ವಿಶೇಷ ಮೆರುಗು ಕೊಡುತ್ತವೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಪರಿಸರ ಸಂರಕ್ಷಣೆಗೂ ಆದ್ಯತೆ ನೀಡಬೇಕಿದೆ’ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ವಿ.ಕೆ. ವಿಶಾಲ್ ಅಭಿಪ್ರಾಯಪಟ್ಟರು.</p>.<p>ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದೇವರಕಾಡಿನಲ್ಲಿರುವ ದುರ್ಗಮ್ಮ ದೇವಸ್ಥಾನದ ವರ್ಧಂತಿ ಉತ್ಸವದ ಪ್ರಯುಕ್ತ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್ ಜಿ. ಮಾತನಾಡಿ, ‘ದೈವತ್ವದ ನಂಬಿಕೆ ಅಡಿಯಲ್ಲಿ ಅರಣ್ಯ ಉಳಿಸುವ ಉದ್ದೇಶದೊಂದಿಗೆ ದೇವರಕಾಡು ನಿರ್ಮಿಸಿ ಪರಿಸರ ಸಂರಕ್ಷಣೆ ಕೈಗೊಳ್ಳಲಾಗಿದೆ. ಕಾಡು ಇದ್ದರೆ ಮಾತ್ರ ನಾಡು ಉಳಿಯಲು ಸಾಧ್ಯ. ಅರಣ್ಯ ಅತಿಕ್ರಮಣ ತಡೆಗಟ್ಟುವ ಅಗತ್ಯವಿದೆ’ ಎಂದು ಹೇಳಿದರು.</p>.<p>ಎಸ್.ಡಿ.ಎಂ. ಕಾಲೇಜಿನ ಕನ್ನಡ ಪ್ರಾಧ್ಯಾಪಕ ನಾಗರಾಜ ಹೆಗಡೆ ಮಾತನಾಡಿ, ‘ಪರಿಸರ ಪ್ರವಾಸೋದ್ಯಮದಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮ ತಡೆಗಟ್ಟಬೇಕಿದ್ದು ಸುಸ್ಥಿರ ಅಭಿವೃದ್ಧಿ ಸಾಧಿಸಬೇಕಿದೆ’ ಎಂದು ಹೇಳಿದರು.</p>.<p>ಯಕ್ಷಗಾನ ಅಕಾಡೆಮಿ ಸದಸ್ಯ ಹಾಗೂ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷ ನೀಲಕಂಠ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ದೇವಸ್ಥಾನ ಸಮಿತಿಯ ಗಂಗಾಧರ ನಾಯ್ಕ, ಎಚ್.ಎಲ್. ಗುರುದತ್ತ, ವಿನಯ ನಾಯ್ಕ, ಮಾದೇವ ನಾಯ್ಕ ಭಾಗವಹಿಸಿದ್ದರು. ವಿಷ್ಣು ನಾಯ್ಕ ನಿರೂಪಿಸಿದರು. ಎಂ.ಜಿ.ಹೆಗಡೆ ಸ್ವಾಗತಿಸಿದರು.</p>.<p>ಉತ್ಸವದ ಅಂಗವಾಗಿ ವೈದಿಕ ಕಾರ್ಯಕ್ರಮ, ಮಕ್ಕಳಿಂದ ಹಾಡು, ನೃತ್ಯ ನಡೆದವು. ಕಲಾರಂಗ ಯಕ್ಷಬಳಗ ಜಲವಳ್ಳಿ ಇದರ ಕಲಾವಿದರಿಂದ ನಡೆದ ‘ದಕ್ಷ ಯಜ್ಞ’ ಪ್ರಸಂಗದ ಯಕ್ಷಗಾನ ಪ್ರದರ್ಶನ ಪ್ರೇಕ್ಷಕರಿಗೆ ಮುದ ನೀಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-20-1394208116</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾವರ: ‘ಹಸಿರಿನಿಂದ ಕಂಗೊಳಿಸುವ ಉತ್ತಮ ಪರಿಸರ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ವಿಶೇಷ ಮೆರುಗು ಕೊಡುತ್ತವೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಪರಿಸರ ಸಂರಕ್ಷಣೆಗೂ ಆದ್ಯತೆ ನೀಡಬೇಕಿದೆ’ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ವಿ.ಕೆ. ವಿಶಾಲ್ ಅಭಿಪ್ರಾಯಪಟ್ಟರು.</p>.<p>ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದೇವರಕಾಡಿನಲ್ಲಿರುವ ದುರ್ಗಮ್ಮ ದೇವಸ್ಥಾನದ ವರ್ಧಂತಿ ಉತ್ಸವದ ಪ್ರಯುಕ್ತ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್ ಜಿ. ಮಾತನಾಡಿ, ‘ದೈವತ್ವದ ನಂಬಿಕೆ ಅಡಿಯಲ್ಲಿ ಅರಣ್ಯ ಉಳಿಸುವ ಉದ್ದೇಶದೊಂದಿಗೆ ದೇವರಕಾಡು ನಿರ್ಮಿಸಿ ಪರಿಸರ ಸಂರಕ್ಷಣೆ ಕೈಗೊಳ್ಳಲಾಗಿದೆ. ಕಾಡು ಇದ್ದರೆ ಮಾತ್ರ ನಾಡು ಉಳಿಯಲು ಸಾಧ್ಯ. ಅರಣ್ಯ ಅತಿಕ್ರಮಣ ತಡೆಗಟ್ಟುವ ಅಗತ್ಯವಿದೆ’ ಎಂದು ಹೇಳಿದರು.</p>.<p>ಎಸ್.ಡಿ.ಎಂ. ಕಾಲೇಜಿನ ಕನ್ನಡ ಪ್ರಾಧ್ಯಾಪಕ ನಾಗರಾಜ ಹೆಗಡೆ ಮಾತನಾಡಿ, ‘ಪರಿಸರ ಪ್ರವಾಸೋದ್ಯಮದಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮ ತಡೆಗಟ್ಟಬೇಕಿದ್ದು ಸುಸ್ಥಿರ ಅಭಿವೃದ್ಧಿ ಸಾಧಿಸಬೇಕಿದೆ’ ಎಂದು ಹೇಳಿದರು.</p>.<p>ಯಕ್ಷಗಾನ ಅಕಾಡೆಮಿ ಸದಸ್ಯ ಹಾಗೂ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷ ನೀಲಕಂಠ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ದೇವಸ್ಥಾನ ಸಮಿತಿಯ ಗಂಗಾಧರ ನಾಯ್ಕ, ಎಚ್.ಎಲ್. ಗುರುದತ್ತ, ವಿನಯ ನಾಯ್ಕ, ಮಾದೇವ ನಾಯ್ಕ ಭಾಗವಹಿಸಿದ್ದರು. ವಿಷ್ಣು ನಾಯ್ಕ ನಿರೂಪಿಸಿದರು. ಎಂ.ಜಿ.ಹೆಗಡೆ ಸ್ವಾಗತಿಸಿದರು.</p>.<p>ಉತ್ಸವದ ಅಂಗವಾಗಿ ವೈದಿಕ ಕಾರ್ಯಕ್ರಮ, ಮಕ್ಕಳಿಂದ ಹಾಡು, ನೃತ್ಯ ನಡೆದವು. ಕಲಾರಂಗ ಯಕ್ಷಬಳಗ ಜಲವಳ್ಳಿ ಇದರ ಕಲಾವಿದರಿಂದ ನಡೆದ ‘ದಕ್ಷ ಯಜ್ಞ’ ಪ್ರಸಂಗದ ಯಕ್ಷಗಾನ ಪ್ರದರ್ಶನ ಪ್ರೇಕ್ಷಕರಿಗೆ ಮುದ ನೀಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-20-1394208116</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>