<p>ಕಾರವಾರ: ಸತತ 6ನೇ ಬಾರಿಗೆ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಕಡಲತೀರದಲ್ಲಿ ಭಾನುವಾರ ಧ್ವಜಾರೋಹಣವನ್ನು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಮಂಗಳ ಗೌರಿ ಭಟ್ ನೆರವೇರಿಸಿದರು.</p>.<p>‘ದೇಶಧ 14 ಕಡಲತೀರಗಳಿಗೆ ಪ್ರಸಕ್ತ ವರ್ಷ ಬ್ಲೂ ಫ್ಲ್ಯಾಗ್ ಮಾನ್ಯತೆ ಸಿಕ್ಕಿದೆ. ರಾಜ್ಯದಲ್ಲಿ ಮೂರು ಕಡಲತೀರಗಳು ಈ ಪಟ್ಟಿಗೆ ಸೇರಿದ್ದು, ಅವುಗಳಲ್ಲಿ ಕಾಸರಕೋಡ ಕಡಲತೀರವೂ ಒಂದು. ಮುಂದಿನ ದಿನಗಳಲ್ಲಿ ಕಾರವಾರದ ಟ್ಯಾಗೋರ್ ಕಡಲತೀರ ಮತ್ತು ಹೊನ್ನಾವರದ ಅಪ್ಸರಕೊಂಡ ಕಡಲತೀರಕ್ಕೆ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಕಡಲತೀರದ ಸ್ವಚ್ಛತೆ, ಪ್ರವಾಸಿಗರ ಸುರಕ್ಷತೆ, ಉತ್ತಮ ಮೂಲಸೌಕರ್ಯಗಳ ವ್ಯವಸ್ಥೆ ಹಾಗೂ ನೈಸರ್ಗಿಕ ವಸ್ತುಗಳ ಬಳಕೆಯ ಮೂಲಕ ಅಭಿವೃದ್ಧಿಪಡಿಸಿರುವುದನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಕಡಲತೀರ ಸ್ವಚ್ಛತೆಗೆ ಯಂತ್ರಗಳನ್ನು ಒದಗಿಸಲಾಗಿದೆ. ಪ್ರವಾಸಿಗರ ಸುರಕ್ಷತೆಗೆ ಜೀವರಕ್ಷಕ ಸಿಬ್ಬಂದಿ ನಿಯೋಜಿಸಿದ್ದೇವೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-20-1300615297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ಸತತ 6ನೇ ಬಾರಿಗೆ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಕಡಲತೀರದಲ್ಲಿ ಭಾನುವಾರ ಧ್ವಜಾರೋಹಣವನ್ನು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಮಂಗಳ ಗೌರಿ ಭಟ್ ನೆರವೇರಿಸಿದರು.</p>.<p>‘ದೇಶಧ 14 ಕಡಲತೀರಗಳಿಗೆ ಪ್ರಸಕ್ತ ವರ್ಷ ಬ್ಲೂ ಫ್ಲ್ಯಾಗ್ ಮಾನ್ಯತೆ ಸಿಕ್ಕಿದೆ. ರಾಜ್ಯದಲ್ಲಿ ಮೂರು ಕಡಲತೀರಗಳು ಈ ಪಟ್ಟಿಗೆ ಸೇರಿದ್ದು, ಅವುಗಳಲ್ಲಿ ಕಾಸರಕೋಡ ಕಡಲತೀರವೂ ಒಂದು. ಮುಂದಿನ ದಿನಗಳಲ್ಲಿ ಕಾರವಾರದ ಟ್ಯಾಗೋರ್ ಕಡಲತೀರ ಮತ್ತು ಹೊನ್ನಾವರದ ಅಪ್ಸರಕೊಂಡ ಕಡಲತೀರಕ್ಕೆ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಕಡಲತೀರದ ಸ್ವಚ್ಛತೆ, ಪ್ರವಾಸಿಗರ ಸುರಕ್ಷತೆ, ಉತ್ತಮ ಮೂಲಸೌಕರ್ಯಗಳ ವ್ಯವಸ್ಥೆ ಹಾಗೂ ನೈಸರ್ಗಿಕ ವಸ್ತುಗಳ ಬಳಕೆಯ ಮೂಲಕ ಅಭಿವೃದ್ಧಿಪಡಿಸಿರುವುದನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಕಡಲತೀರ ಸ್ವಚ್ಛತೆಗೆ ಯಂತ್ರಗಳನ್ನು ಒದಗಿಸಲಾಗಿದೆ. ಪ್ರವಾಸಿಗರ ಸುರಕ್ಷತೆಗೆ ಜೀವರಕ್ಷಕ ಸಿಬ್ಬಂದಿ ನಿಯೋಜಿಸಿದ್ದೇವೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-20-1300615297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>