<p><strong>ಅಂಕೋಲಾ</strong>: ಶಾಲಾ ಶಿಕ್ಷಣ ಇಲಾಖೆ ಉತ್ತರ ಕನ್ನಡ ಜಿಲ್ಲೆಯ ಉಪ ನಿರ್ದೇಶಕಿಯಾಗಿ ಆಯ್ಕೆಯಾದ ಲತಾ ನಾಯಕ ಅವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದಿಂದ ಸನ್ಮಾನಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಲತಾ ನಾಯಕ, 2024- 25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದು ಸಂತಸದ ಸಂಗತಿ. ಹಿರಿಯ ಅಧಿಕಾರಿಗಳ ಮಾರ್ಗದರ್ಶನ, ಕಿರಿಯ ಅಧಿಕಾರಿಗಳ, ಸಿಬ್ಬಂದಿ ಸಹಕಾರದಲ್ಲಿ ಈ ಸಾಧನೆ ಸಾಧ್ಯವಾಯಿತು. ಈ ಸಾಧನೆಯಲ್ಲಿ ಶಿಕ್ಷಕರ ಪರಿಶ್ರಮ ಸಾಕಷ್ಟಿದೆ’ ಎಂದರು.</p>.<p>ಅಂಕೋಲಾ ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ ಮಾತನಾಡಿದರು.</p>.<p>ಅಂಕೋಲಾ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಕುಮಟಾ ಡಯಟ್ನ ವಿಶ್ರಾಂತ ಪ್ರಾಚಾರ್ಯ ಎನ್.ಜಿ.ನಾಯಕ, ಸಂಘದ ಪ್ರಧಾನ ಕಾರ್ಯದರ್ಶಿ ರಾಜು ನಾಯಕ, ಮಂಜುನಾಥ ನಾಯಕ, ಭಾರತಿ ನಾಯಕ, ತುಕಾರಾಮ ಬಂಟ, ಸಂಜೀವ ನಾಯಕ, ವೆಂಕಮ್ಮ ನಾಯಕ, ಶೋಭಾ ನಾಯಕ, ದಿವಾಕರ ದೇವನಮನೆ, ಆನಂದು ನಾಯ್ಕ, ವಿನಾಯಕ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ಶಾಲಾ ಶಿಕ್ಷಣ ಇಲಾಖೆ ಉತ್ತರ ಕನ್ನಡ ಜಿಲ್ಲೆಯ ಉಪ ನಿರ್ದೇಶಕಿಯಾಗಿ ಆಯ್ಕೆಯಾದ ಲತಾ ನಾಯಕ ಅವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದಿಂದ ಸನ್ಮಾನಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಲತಾ ನಾಯಕ, 2024- 25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದು ಸಂತಸದ ಸಂಗತಿ. ಹಿರಿಯ ಅಧಿಕಾರಿಗಳ ಮಾರ್ಗದರ್ಶನ, ಕಿರಿಯ ಅಧಿಕಾರಿಗಳ, ಸಿಬ್ಬಂದಿ ಸಹಕಾರದಲ್ಲಿ ಈ ಸಾಧನೆ ಸಾಧ್ಯವಾಯಿತು. ಈ ಸಾಧನೆಯಲ್ಲಿ ಶಿಕ್ಷಕರ ಪರಿಶ್ರಮ ಸಾಕಷ್ಟಿದೆ’ ಎಂದರು.</p>.<p>ಅಂಕೋಲಾ ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ ಮಾತನಾಡಿದರು.</p>.<p>ಅಂಕೋಲಾ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಕುಮಟಾ ಡಯಟ್ನ ವಿಶ್ರಾಂತ ಪ್ರಾಚಾರ್ಯ ಎನ್.ಜಿ.ನಾಯಕ, ಸಂಘದ ಪ್ರಧಾನ ಕಾರ್ಯದರ್ಶಿ ರಾಜು ನಾಯಕ, ಮಂಜುನಾಥ ನಾಯಕ, ಭಾರತಿ ನಾಯಕ, ತುಕಾರಾಮ ಬಂಟ, ಸಂಜೀವ ನಾಯಕ, ವೆಂಕಮ್ಮ ನಾಯಕ, ಶೋಭಾ ನಾಯಕ, ದಿವಾಕರ ದೇವನಮನೆ, ಆನಂದು ನಾಯ್ಕ, ವಿನಾಯಕ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>