<p><strong>ಅಂಕೋಲಾ/ಗೋಕರ್ಣ (ಉತ್ತರ ಕನ್ನಡ ಜಿಲ್ಲೆ)</strong>: ತಾಲ್ಲೂಕಿನ ಹಾರವಾಡ ತರಂಗಮೇಟದಲ್ಲಿ ಸಮುದ್ರದಲೆಗಳ ಅಬ್ಬರಕ್ಕೆ ಕಡಲತೀರದಲ್ಲಿದ್ದ ಮನೆ ಕೊಚ್ಚಿ ಹೋಗಿದೆ. ಅಕ್ಕಪಕ್ಕದ ಮನೆಗಳು ಅಪಾಯದ ಅಂಚಿನಲ್ಲಿವೆ.</p><p>ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ಬುಧವಾರ ತಡರಾತ್ರಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸಿದೆ. ಅಶೋಕ ಹರಿಕಂತ್ರ ಎಂಬುವರಿಗೆ ಸೇರಿದ ಮನೆ, ತೆಂಗಿನ ಮರಗಳು ಕೊಚ್ಚಿಹೋಗಿವೆ.</p><p>ಗೋಕರ್ಣದ ಮುಖ್ಯ ಕಡಲತೀರದ ಕರಿಯಪ್ಪನ ಕಟ್ಟೆ ಬಳಿ ಗುರುವಾರ ಸಂಜೆ ದಿಢೀರ್ ಉಕ್ಕೇರಿ ಬಂದ ಸಮುದ್ರದ ಅಲೆಗಳಿಗೆ ನಾಲ್ಕು ಅಂಗಡಿ, ರೆಸಾರ್ಟ್ಗಳಿಗೆ ತೀವ್ರ ಹಾನಿಯಾಗಿದೆ.</p><p>ಅರಬ್ಬಿ ಸಮುದ್ರದ ಅಬ್ಬರಕ್ಕೆ ಎರಡು ಅಂಗಡಿ ಸಂಪೂರ್ಣ ಕೊಚ್ಚಿ ಹೋಗಿದ್ದು, 10ಕ್ಕೂ ಹೆಚ್ಚು ಕೊಠಡಿಗಳು ಭಾಗಶಃ ನಾಶವಾಗಿದೆ. ಕೆಲ ಅಂಗಡಿಗಳ ತಡೆಗೋಡೆ ಕುಸಿದುಬಿದ್ದಿದೆ.</p><p>‘ಪ್ರವಾಸಿಗರ ಅನುಕೂಲಕ್ಕೆ ಲಕ್ಷಾಂತರ ರೂಪಾಯಿ ವ್ಯಯಿಸಿ ತೆರೆದಿದ್ದ ಕೆಫೆ ನೀರಿನಲ್ಲಿ ಕೊಚ್ಚಿಹೋಗಿದೆ. ಹೀಗೆಯೇ ಮುಂದುವರಿದರೆ ಇನ್ನೂ ಹೆಚ್ಚಿನ ಹಾನಿ ಸಂಭವಿಸಬಹುದು. ದುರ್ಘಟನೆಯಿಂದ ಭಯಭೀತ<br>ರಾಗಿದ್ದೇವೆ’ ಎಂದು ಕೆಫೆ ಓಶನ್ ವ್ಯೂ ಮಾಲೀಕ ಗಣಪು ಜಟ್ಟಯ್ಯ ಗೌಡ ತಿಳಿಸಿದರು.</p><p><strong>ಲಂಗರು ಹಾಕಿದ ಬೋಟ್ಗಳು: </strong></p><p>ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದರಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ನೆರೆಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರಿಕೆ ಬೋಟ್ಗಳು, ಹೊರರಾಜ್ಯದ ಬೋಟ್ಗಳು ಕಾರವಾರದ ಬೈತಕೋಲದ ಮೀನುಗಾರಿಕೆ ಮತ್ತು ವಾಣಿಜ್ಯ ಬಂದರುಗಳ ಸಮೀಪ ಗುರುವಾರ ಲಂಗರು ಹಾಕಿದವು.</p>.<blockquote>‘ಕಲ್ಯಾಣ’ದಲ್ಲಿ ಸಾಧಾರಣ ಮಳೆ </blockquote>.<p>ಕಲಬುರಗಿ: ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ.</p><p>ರಾಯಚೂರು ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಹಾಗೂ ಗುರುವಾರ ಉತ್ತಮವಾಗಿ ಮಳೆಯಾಗಿದೆ. ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ರಸ್ತೆ ಕೊಚ್ಚಿಹೋಗಿದೆ. ದೇವದುರ್ಗ, ಕವಿತಾಳ, ಮಾನ್ವಿ, ಹಟ್ಟಿ ಚಿನ್ನದಗಣಿ ಪ್ರದೇಶದಲ್ಲಿ ಮಳೆಯಾಗಿದೆ.</p><p>ಯಾದಗಿರಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ. ನಾರಾಯಣಪುರ, ಹುಣಸಗಿ,<br>ಕೆಂಭಾವಿಯಲ್ಲಿ ತುಂತುರು ಮಳೆಯಾಗಿದ್ದರೆ, ಶಹಾಪುರ, ಸುರಪುರದಲ್ಲಿ ಉತ್ತಮ ಮಳೆಯಾಗಿದೆ.</p><p>ಕೊಪ್ಪಳ, ಕುಷ್ಟಗಿ ಹಾಗೂ ಮುನಿರಾಬಾದ್ನಲ್ಲಿ ಉತ್ತಮ ಮಳೆಯಾಗಿದೆ. ಬುಧವಾರ ತಡರಾತ್ರಿ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಹಾಗೂ ಹನುಮಸಾಗರದಲ್ಲಿ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ/ಗೋಕರ್ಣ (ಉತ್ತರ ಕನ್ನಡ ಜಿಲ್ಲೆ)</strong>: ತಾಲ್ಲೂಕಿನ ಹಾರವಾಡ ತರಂಗಮೇಟದಲ್ಲಿ ಸಮುದ್ರದಲೆಗಳ ಅಬ್ಬರಕ್ಕೆ ಕಡಲತೀರದಲ್ಲಿದ್ದ ಮನೆ ಕೊಚ್ಚಿ ಹೋಗಿದೆ. ಅಕ್ಕಪಕ್ಕದ ಮನೆಗಳು ಅಪಾಯದ ಅಂಚಿನಲ್ಲಿವೆ.</p><p>ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ಬುಧವಾರ ತಡರಾತ್ರಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸಿದೆ. ಅಶೋಕ ಹರಿಕಂತ್ರ ಎಂಬುವರಿಗೆ ಸೇರಿದ ಮನೆ, ತೆಂಗಿನ ಮರಗಳು ಕೊಚ್ಚಿಹೋಗಿವೆ.</p><p>ಗೋಕರ್ಣದ ಮುಖ್ಯ ಕಡಲತೀರದ ಕರಿಯಪ್ಪನ ಕಟ್ಟೆ ಬಳಿ ಗುರುವಾರ ಸಂಜೆ ದಿಢೀರ್ ಉಕ್ಕೇರಿ ಬಂದ ಸಮುದ್ರದ ಅಲೆಗಳಿಗೆ ನಾಲ್ಕು ಅಂಗಡಿ, ರೆಸಾರ್ಟ್ಗಳಿಗೆ ತೀವ್ರ ಹಾನಿಯಾಗಿದೆ.</p><p>ಅರಬ್ಬಿ ಸಮುದ್ರದ ಅಬ್ಬರಕ್ಕೆ ಎರಡು ಅಂಗಡಿ ಸಂಪೂರ್ಣ ಕೊಚ್ಚಿ ಹೋಗಿದ್ದು, 10ಕ್ಕೂ ಹೆಚ್ಚು ಕೊಠಡಿಗಳು ಭಾಗಶಃ ನಾಶವಾಗಿದೆ. ಕೆಲ ಅಂಗಡಿಗಳ ತಡೆಗೋಡೆ ಕುಸಿದುಬಿದ್ದಿದೆ.</p><p>‘ಪ್ರವಾಸಿಗರ ಅನುಕೂಲಕ್ಕೆ ಲಕ್ಷಾಂತರ ರೂಪಾಯಿ ವ್ಯಯಿಸಿ ತೆರೆದಿದ್ದ ಕೆಫೆ ನೀರಿನಲ್ಲಿ ಕೊಚ್ಚಿಹೋಗಿದೆ. ಹೀಗೆಯೇ ಮುಂದುವರಿದರೆ ಇನ್ನೂ ಹೆಚ್ಚಿನ ಹಾನಿ ಸಂಭವಿಸಬಹುದು. ದುರ್ಘಟನೆಯಿಂದ ಭಯಭೀತ<br>ರಾಗಿದ್ದೇವೆ’ ಎಂದು ಕೆಫೆ ಓಶನ್ ವ್ಯೂ ಮಾಲೀಕ ಗಣಪು ಜಟ್ಟಯ್ಯ ಗೌಡ ತಿಳಿಸಿದರು.</p><p><strong>ಲಂಗರು ಹಾಕಿದ ಬೋಟ್ಗಳು: </strong></p><p>ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದರಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ನೆರೆಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರಿಕೆ ಬೋಟ್ಗಳು, ಹೊರರಾಜ್ಯದ ಬೋಟ್ಗಳು ಕಾರವಾರದ ಬೈತಕೋಲದ ಮೀನುಗಾರಿಕೆ ಮತ್ತು ವಾಣಿಜ್ಯ ಬಂದರುಗಳ ಸಮೀಪ ಗುರುವಾರ ಲಂಗರು ಹಾಕಿದವು.</p>.<blockquote>‘ಕಲ್ಯಾಣ’ದಲ್ಲಿ ಸಾಧಾರಣ ಮಳೆ </blockquote>.<p>ಕಲಬುರಗಿ: ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ.</p><p>ರಾಯಚೂರು ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಹಾಗೂ ಗುರುವಾರ ಉತ್ತಮವಾಗಿ ಮಳೆಯಾಗಿದೆ. ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ರಸ್ತೆ ಕೊಚ್ಚಿಹೋಗಿದೆ. ದೇವದುರ್ಗ, ಕವಿತಾಳ, ಮಾನ್ವಿ, ಹಟ್ಟಿ ಚಿನ್ನದಗಣಿ ಪ್ರದೇಶದಲ್ಲಿ ಮಳೆಯಾಗಿದೆ.</p><p>ಯಾದಗಿರಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ. ನಾರಾಯಣಪುರ, ಹುಣಸಗಿ,<br>ಕೆಂಭಾವಿಯಲ್ಲಿ ತುಂತುರು ಮಳೆಯಾಗಿದ್ದರೆ, ಶಹಾಪುರ, ಸುರಪುರದಲ್ಲಿ ಉತ್ತಮ ಮಳೆಯಾಗಿದೆ.</p><p>ಕೊಪ್ಪಳ, ಕುಷ್ಟಗಿ ಹಾಗೂ ಮುನಿರಾಬಾದ್ನಲ್ಲಿ ಉತ್ತಮ ಮಳೆಯಾಗಿದೆ. ಬುಧವಾರ ತಡರಾತ್ರಿ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಹಾಗೂ ಹನುಮಸಾಗರದಲ್ಲಿ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>