<p><strong>ಯಲ್ಲಾಪುರ</strong>: ತಾಲ್ಲೂಕಿನ ಹುಬ್ಬಳ್ಳಿ – ಅಂಕೋಲಾ ರಾಷ್ಟ್ರೀಯ ಹೆದ್ದಾರಿಯ ಹಿಟ್ಟಿನಬೈಲ್ ಸಮೀಪ ಶುಕ್ರವಾರ ರಾತ್ರಿ ಬಸ್ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ್ದು 3 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 7 ಜನ ಗಾಯಗೊಂಡಿದ್ದಾರೆ.</p><p>ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ನೀಲವ್ವಾ ಯಲದುರ್ಗಪ್ಪ ಹರದೊಳ್ಳಿ (40), ಜಾಲಿಹಾಳದ ಗಿರಿಜವ್ವ ಅಯ್ಯಪ್ಪ ಬೂದನ್ನವರ್ (30) ಮೃತರು. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ.</p><p>ಅಮೀನಗಡದ ಚಿದಾನಂದ ಕಿತ್ತಳಿ, ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳೆಪ್ಪ ಹಳಬರ್, ಮಲ್ಲಿಕಾರ್ಜುನ ಪಕೀರಪ್ಪ ಅಂದಲಿ, ದೇವಕಿ ಹನುಮಂತ ಬೆಳ್ಳಿ, ಬಾದಾಮಿಯ ಸಮೀರಾ ಬೇಗಂ, ಹುನಗುಂದದ ಷರೀಪಾ ಬೇಗಂ ಗಾಯಗೊಂಡಿದ್ದಾರೆ.</p><p>ಬಸ್ ಚಾಲಕ ಯಮನಪ್ಪ ಮುತ್ತಪ್ಪ ಮಾಗಿ ಹಾಗೂ ಲಾರಿ ಚಾಲಕನ ವಿರುದ್ಧ ಅಮ್ಮಿನಗಡದ ರಮೇಶ ಚಂದಪ್ಪ ಕಿತ್ತಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.</p><p>ಬಸ್ ಹುಬ್ಬಳ್ಳಿಯಿಂದ ಯಲ್ಲಾಪುರ ಮಾರ್ಗವಾಗಿ ಪ್ರಯಾಣಿಸುತ್ತಿತ್ತು. ಹಿಟ್ಟಿನಬೈಲ್ ಸಮೀಪ ಇಂಡಿಕೇಟರ್ ಹಾಕದೆ ನಿಲ್ಲಿಸಲಾಗಿದ್ದ ಲಾರಿಗೆ ಡಿಕ್ಕಿಹೊಡೆಯಿತು. ಮೃತರು ಮತ್ತು ಗಾಯಾಳುಗಳಲ್ಲಿ ಹೆಚ್ಚಿನವರು ಧರ್ಮಸ್ಥಳಕ್ಕೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ತಾಲ್ಲೂಕಿನ ಹುಬ್ಬಳ್ಳಿ – ಅಂಕೋಲಾ ರಾಷ್ಟ್ರೀಯ ಹೆದ್ದಾರಿಯ ಹಿಟ್ಟಿನಬೈಲ್ ಸಮೀಪ ಶುಕ್ರವಾರ ರಾತ್ರಿ ಬಸ್ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ್ದು 3 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 7 ಜನ ಗಾಯಗೊಂಡಿದ್ದಾರೆ.</p><p>ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ನೀಲವ್ವಾ ಯಲದುರ್ಗಪ್ಪ ಹರದೊಳ್ಳಿ (40), ಜಾಲಿಹಾಳದ ಗಿರಿಜವ್ವ ಅಯ್ಯಪ್ಪ ಬೂದನ್ನವರ್ (30) ಮೃತರು. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ.</p><p>ಅಮೀನಗಡದ ಚಿದಾನಂದ ಕಿತ್ತಳಿ, ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳೆಪ್ಪ ಹಳಬರ್, ಮಲ್ಲಿಕಾರ್ಜುನ ಪಕೀರಪ್ಪ ಅಂದಲಿ, ದೇವಕಿ ಹನುಮಂತ ಬೆಳ್ಳಿ, ಬಾದಾಮಿಯ ಸಮೀರಾ ಬೇಗಂ, ಹುನಗುಂದದ ಷರೀಪಾ ಬೇಗಂ ಗಾಯಗೊಂಡಿದ್ದಾರೆ.</p><p>ಬಸ್ ಚಾಲಕ ಯಮನಪ್ಪ ಮುತ್ತಪ್ಪ ಮಾಗಿ ಹಾಗೂ ಲಾರಿ ಚಾಲಕನ ವಿರುದ್ಧ ಅಮ್ಮಿನಗಡದ ರಮೇಶ ಚಂದಪ್ಪ ಕಿತ್ತಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.</p><p>ಬಸ್ ಹುಬ್ಬಳ್ಳಿಯಿಂದ ಯಲ್ಲಾಪುರ ಮಾರ್ಗವಾಗಿ ಪ್ರಯಾಣಿಸುತ್ತಿತ್ತು. ಹಿಟ್ಟಿನಬೈಲ್ ಸಮೀಪ ಇಂಡಿಕೇಟರ್ ಹಾಕದೆ ನಿಲ್ಲಿಸಲಾಗಿದ್ದ ಲಾರಿಗೆ ಡಿಕ್ಕಿಹೊಡೆಯಿತು. ಮೃತರು ಮತ್ತು ಗಾಯಾಳುಗಳಲ್ಲಿ ಹೆಚ್ಚಿನವರು ಧರ್ಮಸ್ಥಳಕ್ಕೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>