<p><strong>ಕಾರವಾರ</strong>: ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶ ಬೆಸೆಯುವ ಬಹುನಿರೀಕ್ಷಿತ ಹುಬ್ಬಳ್ಳಿ–ಅಂಕೋಲಾ ರೈಲು ಯೋಜನೆ ಕಾರ್ಯಗತಗೊಳ್ಳಬಹುದು ಎಂಬ ನಿರೀಕ್ಷೆ ಬಲವಾಗಿದೆ.</p>.<p>ಸಂಸತ್ ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದಲ್ಲಿ 42 ಸಾವಿರ ಕೋಟಿಗೂ ಹೆಚ್ಚು ವೆಚ್ಚದ ವಿವಿಧ ಯೋಜನೆಗಳಿಗೆ ಮಂಜೂರಾತಿ ನೀಡಲು ಕ್ರಮವಹಿಸಲಾಗುವುದು ಎಂದು ಉತ್ತರಿಸಿದ್ದು, ಈ ಯೋಜನೆಗಳ ಪೈಕಿ ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಯೂ ಸೇರಿದೆ ಎಂದು ತಿಳಿಸಿದ್ದಾರೆ.</p>.<p>1999ರಲ್ಲಿಯೇ ₹494 ಕೋಟಿ ವೆಚ್ಚದ ಯೋಜನೆಗೆ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಚಾಲನೆ ನೀಡಿದ್ದರು. ಹುಬ್ಬಳ್ಳಿಯಿಂದ ಕಲಘಟಗಿವರೆಗೆ 34 ಕಿ.ಮೀ ಉದ್ದ ರೈಲು ಮಾರ್ಗವೂ ನಿರ್ಮಾಣಗೊಂಡಿತ್ತು. ಆ ಬಳಿಕ ಯೋಜನೆ ನನೆಗುದಿಗೆ ಬಿದ್ದಿತ್ತು.</p>.<p>ಪರಿಸರಕ್ಕೆ ಹಾನಿಯಾಗಲಿದೆ ಎಂಬ ಕಾರಣ ನೀಡಿ ಪರಿಸರವಾದಿ ಸಂಘಟನೆಗಳ ಆಕ್ಷೇಪಣೆಯಿಂದ ಕಳೆದ ಮೂರು ದಶಕದಿಂದ ಯೋಜನೆ ನನೆಗುದಿಗೆ ಬಿದ್ದಿದೆ. ಪಶ್ಚಿಮ ಘಟ್ಟ ಸೀಳಿಕೊಂಡು ಈಗಾಗಲೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ. ರೈಲು ಮಾರ್ಗದಿಂದ ಅರಣ್ಯಕ್ಕೆ, ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಧಕ್ಕೆ ಉಂಟಾಗಲಿದ್ದು, ವನ್ಯಜೀವಿಗಳ ಸಂಚಾರಕ್ಕೂ ಅಡ್ಡಿಯುಂಟಾಗಲಿದೆ ಎಂದು ವಾದಿಸಿದ್ದ ಪರಿಸರವಾದಿ ಸಂಘಟನೆಗಳು ಯೋಜನೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಯೋಜನೆ ಕಾರ್ಯಗತವಾದರೆ ಅಭ್ಯಂತರ ಇಲ್ಲ ಎಂದು ರಾಷ್ಟ್ರೀಯ ಹಸಿರು ಪೀಠ (ಎನ್ಜಿಟಿ) 2016ರಲ್ಲಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಪರಿಸರವಾದಿಗಳು ಯೋಜನೆ ಕಾರ್ಯರೂಪಕ್ಕೆ ತರುವುದನ್ನು ಪ್ರಶ್ನಿಸಿದ್ದರು. 2024ರಲ್ಲಿ ಆದೇಶಿಸಿದ್ದ ಹೈಕೋರ್ಟ್ ವನ್ಯಜೀವಿ ಮಂಡಳಿ ಸಹಾಯದೊಂದಿಗೆ ಅಧ್ಯಯನ ಕೈಗೊಂಡು, ಪರಿಷ್ಕೃತ ಯೋಜನಾ ವರದಿ ಸಲ್ಲಿಸಲು ಸೂಚಿಸಿತ್ತು.</p>.<p>ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಯೋಜನೆ ಕೈಗೊಳ್ಳಬಹುದಾದ ಪ್ರದೇಶದಲ್ಲಿ ಮರು ಸಮೀಕ್ಷೆ ನಡೆಸಿದ್ದ ನೈರುತ್ಯ ರೈಲ್ವೆ ಫೆ.17 ರಂದು ಕೇಂದ್ರ ರೈಲ್ವೆ ಮಂಡಳಿಗೆ ಪರಿಷ್ಕೃತ ಯೋಜನಾ ವರದಿ (ಡಿಪಿಆರ್) ಸಲ್ಲಿಸಿತ್ತು. ಉದ್ದೇಶಿತ ಮಾರ್ಗದಲ್ಲಿನ ವನ್ಯಜೀವಿಗಳ ಕುರಿತು ಡೆಹರಾಡೂನ್ನ ಭಾರತೀಯ ವನ್ಯಜೀವಿ ಸಂಸ್ಥೆ ಪ್ರತ್ಯೇಕ ಅಧ್ಯಯನ ನಡೆಸಿತ್ತು.</p>.<div><blockquote>ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಅಗತ್ಯವಾಗಿರುವ ಯೋಜನೆ. ಇದನ್ನು ಕಾರ್ಯಗತಗೊಳಿಸಲು ಸಾಧ್ಯವಾದ ಎಲ್ಲ ಪ್ರಯತ್ನ ನಡೆಸುತ್ತಿದ್ದೇವೆ</blockquote><span class="attribution">ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ </span></div>.<div><blockquote>ಹುಬ್ಬಳ್ಳಿ–ಅಂಕೋಲಾ ರೈಲು ಯೋಜನೆ ಕುರಿತು ಕೇಂದ್ರ ಸಚಿವರ ಸಕಾರಾತ್ಮಕ ಉತ್ತರ ಹೊಸ ವಿಶ್ವಾಸ ಮೂಡಿಸಿದೆ. ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದನೆ ಸಿಗುವ ದಿನ ಹತ್ತಿರವಾಗಿದೆ</blockquote><span class="attribution">ಶಿವರಾಮ ಹೆಬ್ಬಾರ,ಯಲ್ಲಾಪುರ ಶಾಸಕ</span></div>.<p> <strong>ಪರಿಷ್ಕೃತ ಡಿಪಿಆರ್ನಲ್ಲಿನ ಮುಖ್ಯಾಂಶಗಳು</strong> </p><ul><li><p>ಯೋಜನೆಗೆ ₹17,147 ಕೋಟಿ ಅಗತ್ಯ</p></li><li><p> 595 ಹೆಕ್ಟೇರ್ ಬದಲಾಗಿ 585 ಹೆ. ಅರಣ್ಯ ಭೂಮಿ ಬಳಕೆ </p></li><li><p>ರಾಷ್ಟ್ರೀಯ ಹೆದ್ದಾರಿ–63ರ ಪಕ್ಕದಲ್ಲೇ ಸಾಗಲಿದೆ ದ್ವಿಪಥ ರೈಲು ಮಾರ್ಗ</p></li><li><p> 164.4 ಕಿ.ಮೀ ಉದ್ದದ ಮಾರ್ಗದ ಪೈಕಿ 97 ಕಿ.ಮೀ ಅರಣ್ಯದಲ್ಲಿ ಹಾದುಹೋಗಲಿದೆ </p></li><li><p>ಅರಣ್ಯದಲ್ಲಿ ಹಾದುಹೋಗುವ ಮಾರ್ಗದಲ್ಲಿ 57 ಸುರಂಗಗಳ ನಿರ್ಮಾಣ </p></li><li><p> ಯಲ್ಲಾಪುರ–ಸುಂಕಸಾಳ ನಡುವಿನ ಅರಣ್ಯಕ್ಕೆ ಸುರಂಗ 13.89 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶ ಬೆಸೆಯುವ ಬಹುನಿರೀಕ್ಷಿತ ಹುಬ್ಬಳ್ಳಿ–ಅಂಕೋಲಾ ರೈಲು ಯೋಜನೆ ಕಾರ್ಯಗತಗೊಳ್ಳಬಹುದು ಎಂಬ ನಿರೀಕ್ಷೆ ಬಲವಾಗಿದೆ.</p>.<p>ಸಂಸತ್ ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದಲ್ಲಿ 42 ಸಾವಿರ ಕೋಟಿಗೂ ಹೆಚ್ಚು ವೆಚ್ಚದ ವಿವಿಧ ಯೋಜನೆಗಳಿಗೆ ಮಂಜೂರಾತಿ ನೀಡಲು ಕ್ರಮವಹಿಸಲಾಗುವುದು ಎಂದು ಉತ್ತರಿಸಿದ್ದು, ಈ ಯೋಜನೆಗಳ ಪೈಕಿ ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಯೂ ಸೇರಿದೆ ಎಂದು ತಿಳಿಸಿದ್ದಾರೆ.</p>.<p>1999ರಲ್ಲಿಯೇ ₹494 ಕೋಟಿ ವೆಚ್ಚದ ಯೋಜನೆಗೆ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಚಾಲನೆ ನೀಡಿದ್ದರು. ಹುಬ್ಬಳ್ಳಿಯಿಂದ ಕಲಘಟಗಿವರೆಗೆ 34 ಕಿ.ಮೀ ಉದ್ದ ರೈಲು ಮಾರ್ಗವೂ ನಿರ್ಮಾಣಗೊಂಡಿತ್ತು. ಆ ಬಳಿಕ ಯೋಜನೆ ನನೆಗುದಿಗೆ ಬಿದ್ದಿತ್ತು.</p>.<p>ಪರಿಸರಕ್ಕೆ ಹಾನಿಯಾಗಲಿದೆ ಎಂಬ ಕಾರಣ ನೀಡಿ ಪರಿಸರವಾದಿ ಸಂಘಟನೆಗಳ ಆಕ್ಷೇಪಣೆಯಿಂದ ಕಳೆದ ಮೂರು ದಶಕದಿಂದ ಯೋಜನೆ ನನೆಗುದಿಗೆ ಬಿದ್ದಿದೆ. ಪಶ್ಚಿಮ ಘಟ್ಟ ಸೀಳಿಕೊಂಡು ಈಗಾಗಲೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ. ರೈಲು ಮಾರ್ಗದಿಂದ ಅರಣ್ಯಕ್ಕೆ, ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಧಕ್ಕೆ ಉಂಟಾಗಲಿದ್ದು, ವನ್ಯಜೀವಿಗಳ ಸಂಚಾರಕ್ಕೂ ಅಡ್ಡಿಯುಂಟಾಗಲಿದೆ ಎಂದು ವಾದಿಸಿದ್ದ ಪರಿಸರವಾದಿ ಸಂಘಟನೆಗಳು ಯೋಜನೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಯೋಜನೆ ಕಾರ್ಯಗತವಾದರೆ ಅಭ್ಯಂತರ ಇಲ್ಲ ಎಂದು ರಾಷ್ಟ್ರೀಯ ಹಸಿರು ಪೀಠ (ಎನ್ಜಿಟಿ) 2016ರಲ್ಲಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಪರಿಸರವಾದಿಗಳು ಯೋಜನೆ ಕಾರ್ಯರೂಪಕ್ಕೆ ತರುವುದನ್ನು ಪ್ರಶ್ನಿಸಿದ್ದರು. 2024ರಲ್ಲಿ ಆದೇಶಿಸಿದ್ದ ಹೈಕೋರ್ಟ್ ವನ್ಯಜೀವಿ ಮಂಡಳಿ ಸಹಾಯದೊಂದಿಗೆ ಅಧ್ಯಯನ ಕೈಗೊಂಡು, ಪರಿಷ್ಕೃತ ಯೋಜನಾ ವರದಿ ಸಲ್ಲಿಸಲು ಸೂಚಿಸಿತ್ತು.</p>.<p>ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಯೋಜನೆ ಕೈಗೊಳ್ಳಬಹುದಾದ ಪ್ರದೇಶದಲ್ಲಿ ಮರು ಸಮೀಕ್ಷೆ ನಡೆಸಿದ್ದ ನೈರುತ್ಯ ರೈಲ್ವೆ ಫೆ.17 ರಂದು ಕೇಂದ್ರ ರೈಲ್ವೆ ಮಂಡಳಿಗೆ ಪರಿಷ್ಕೃತ ಯೋಜನಾ ವರದಿ (ಡಿಪಿಆರ್) ಸಲ್ಲಿಸಿತ್ತು. ಉದ್ದೇಶಿತ ಮಾರ್ಗದಲ್ಲಿನ ವನ್ಯಜೀವಿಗಳ ಕುರಿತು ಡೆಹರಾಡೂನ್ನ ಭಾರತೀಯ ವನ್ಯಜೀವಿ ಸಂಸ್ಥೆ ಪ್ರತ್ಯೇಕ ಅಧ್ಯಯನ ನಡೆಸಿತ್ತು.</p>.<div><blockquote>ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಅಗತ್ಯವಾಗಿರುವ ಯೋಜನೆ. ಇದನ್ನು ಕಾರ್ಯಗತಗೊಳಿಸಲು ಸಾಧ್ಯವಾದ ಎಲ್ಲ ಪ್ರಯತ್ನ ನಡೆಸುತ್ತಿದ್ದೇವೆ</blockquote><span class="attribution">ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ </span></div>.<div><blockquote>ಹುಬ್ಬಳ್ಳಿ–ಅಂಕೋಲಾ ರೈಲು ಯೋಜನೆ ಕುರಿತು ಕೇಂದ್ರ ಸಚಿವರ ಸಕಾರಾತ್ಮಕ ಉತ್ತರ ಹೊಸ ವಿಶ್ವಾಸ ಮೂಡಿಸಿದೆ. ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದನೆ ಸಿಗುವ ದಿನ ಹತ್ತಿರವಾಗಿದೆ</blockquote><span class="attribution">ಶಿವರಾಮ ಹೆಬ್ಬಾರ,ಯಲ್ಲಾಪುರ ಶಾಸಕ</span></div>.<p> <strong>ಪರಿಷ್ಕೃತ ಡಿಪಿಆರ್ನಲ್ಲಿನ ಮುಖ್ಯಾಂಶಗಳು</strong> </p><ul><li><p>ಯೋಜನೆಗೆ ₹17,147 ಕೋಟಿ ಅಗತ್ಯ</p></li><li><p> 595 ಹೆಕ್ಟೇರ್ ಬದಲಾಗಿ 585 ಹೆ. ಅರಣ್ಯ ಭೂಮಿ ಬಳಕೆ </p></li><li><p>ರಾಷ್ಟ್ರೀಯ ಹೆದ್ದಾರಿ–63ರ ಪಕ್ಕದಲ್ಲೇ ಸಾಗಲಿದೆ ದ್ವಿಪಥ ರೈಲು ಮಾರ್ಗ</p></li><li><p> 164.4 ಕಿ.ಮೀ ಉದ್ದದ ಮಾರ್ಗದ ಪೈಕಿ 97 ಕಿ.ಮೀ ಅರಣ್ಯದಲ್ಲಿ ಹಾದುಹೋಗಲಿದೆ </p></li><li><p>ಅರಣ್ಯದಲ್ಲಿ ಹಾದುಹೋಗುವ ಮಾರ್ಗದಲ್ಲಿ 57 ಸುರಂಗಗಳ ನಿರ್ಮಾಣ </p></li><li><p> ಯಲ್ಲಾಪುರ–ಸುಂಕಸಾಳ ನಡುವಿನ ಅರಣ್ಯಕ್ಕೆ ಸುರಂಗ 13.89 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>