<p><strong>ಸಿದ್ದಾಪುರ</strong>: ‘ಪ್ರಕೃತಿ ಮನುಷ್ಯನಿಗಾಗಿ ಮಾತ್ರ ಇಲ್ಲ. ಅಸಂಖ್ಯಾತ ಜೀವಿಗಳಿಗೆ ಪರಿಸರ ಅವಶ್ಯ. ಕಾಡು ನಾಶವಾದರೆ ಮನುಕುಲದ ನಾಶವೂ ಆಗುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಹೇಳಿದರು.</p>.<p>ತಾಲ್ಲೂಕಿನ ಬಿದ್ರಕಾನಿನ ಮಹಾತ್ಮಗಾಂಧಿ ಶತಾಬ್ಧಿ ಸ್ಮಾರಕ ಪ್ರೌಢಶಾಲೆಯ ಸಹಕಾರದೊಂದಿಗೆ ಮಹಾಬಲ ಫೌಂಡೇಷನ್ ಹಾಗೂ ಪ್ರಯೋಗ ಸ್ವಯಂಸೇವಾ ಸಂಸ್ಥೆ ಈಚೆಗೆ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾಡು ನಶಿಸಿರುವುದರಿಂದಲೇ ಕೃಷಿ ಕ್ಷೇತ್ರದ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುತ್ತಿವೆ. ವಿದ್ಯಾರ್ಥಿಗಳು ಪರಿಸರದ ಕುರಿತು ಕುತೂಹಲ ಹೊಂದಿರಬೇಕು’ ಎಂದರು.</p>.<p>ಡಿ.ಆರ್.ಎಫ್.ಒ ನರೇಂದ್ರನಾಥ್ ಕದಂ ಮಾತನಾಡಿ, ‘ಪರಿಸರವನ್ನು ಒಮ್ಮೆ ಹಾಳುಗೆಡವಿದರೆ ಸರಿಪಡಿಸಲು ಬಹಳ ಕಾಲ ಬೇಕು. ವಿದ್ಯಾರ್ಥಿ ದೆಸೆಯಿಂದಲೇ ಪರಿಸರದ ಮಹತ್ವ ತಿಳಿದಾಗ ಪರಿಸರ ಸಂರಕ್ಷಣೆ ಸಾಧ್ಯವಿದೆ’ ಎಂದು ಹೇಳಿದರು.</p>.<p>ನಿವೃತ್ತ ಮುಖ್ಯಶಿಕ್ಷಕ ಎಂ.ಆರ್. ಭಟ್ಟ, ಪ್ರಯೋಗ ಸಂಸ್ಥೆಯ ಅಧ್ಯಕ್ಷ ಗಂಗಾಧರ ಕೊಳಗಿ ಮಾತನಾಡಿದರು. ಪ್ರೌಢಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಆರ್.ಎಸ್. ಹೆಗಡೆ ಉಳ್ಳಾನೆ ಅಧ್ಯಕ್ಷತೆ ವಹಿಸಿದ್ದರು.</p>.<p>ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಬಿ. ನಾಯ್ಕ, ಎಸ್.ಡಿ.ಎಂ.ಸಿ. ಅಧ್ಯಕ್ಷ ಗಜಾನನ ಹೆಗಡೆ, ಮಹಾಬಲ ಫೌಂಡೇಷನ್ ಅಧ್ಯಕ್ಷ ಮಂಜುನಾಥ ಭಟ್, ಮುಖ್ಯಶಿಕ್ಷಕ ಜನಾರ್ಧನ ಸಿ., ಶಿಕ್ಷಕಿಯರಾದ ವಿಜಯಲಕ್ಷ್ಮೀ, ಸಂಧ್ಯಾ ಶಾಸ್ತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ‘ಪ್ರಕೃತಿ ಮನುಷ್ಯನಿಗಾಗಿ ಮಾತ್ರ ಇಲ್ಲ. ಅಸಂಖ್ಯಾತ ಜೀವಿಗಳಿಗೆ ಪರಿಸರ ಅವಶ್ಯ. ಕಾಡು ನಾಶವಾದರೆ ಮನುಕುಲದ ನಾಶವೂ ಆಗುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಹೇಳಿದರು.</p>.<p>ತಾಲ್ಲೂಕಿನ ಬಿದ್ರಕಾನಿನ ಮಹಾತ್ಮಗಾಂಧಿ ಶತಾಬ್ಧಿ ಸ್ಮಾರಕ ಪ್ರೌಢಶಾಲೆಯ ಸಹಕಾರದೊಂದಿಗೆ ಮಹಾಬಲ ಫೌಂಡೇಷನ್ ಹಾಗೂ ಪ್ರಯೋಗ ಸ್ವಯಂಸೇವಾ ಸಂಸ್ಥೆ ಈಚೆಗೆ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾಡು ನಶಿಸಿರುವುದರಿಂದಲೇ ಕೃಷಿ ಕ್ಷೇತ್ರದ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುತ್ತಿವೆ. ವಿದ್ಯಾರ್ಥಿಗಳು ಪರಿಸರದ ಕುರಿತು ಕುತೂಹಲ ಹೊಂದಿರಬೇಕು’ ಎಂದರು.</p>.<p>ಡಿ.ಆರ್.ಎಫ್.ಒ ನರೇಂದ್ರನಾಥ್ ಕದಂ ಮಾತನಾಡಿ, ‘ಪರಿಸರವನ್ನು ಒಮ್ಮೆ ಹಾಳುಗೆಡವಿದರೆ ಸರಿಪಡಿಸಲು ಬಹಳ ಕಾಲ ಬೇಕು. ವಿದ್ಯಾರ್ಥಿ ದೆಸೆಯಿಂದಲೇ ಪರಿಸರದ ಮಹತ್ವ ತಿಳಿದಾಗ ಪರಿಸರ ಸಂರಕ್ಷಣೆ ಸಾಧ್ಯವಿದೆ’ ಎಂದು ಹೇಳಿದರು.</p>.<p>ನಿವೃತ್ತ ಮುಖ್ಯಶಿಕ್ಷಕ ಎಂ.ಆರ್. ಭಟ್ಟ, ಪ್ರಯೋಗ ಸಂಸ್ಥೆಯ ಅಧ್ಯಕ್ಷ ಗಂಗಾಧರ ಕೊಳಗಿ ಮಾತನಾಡಿದರು. ಪ್ರೌಢಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಆರ್.ಎಸ್. ಹೆಗಡೆ ಉಳ್ಳಾನೆ ಅಧ್ಯಕ್ಷತೆ ವಹಿಸಿದ್ದರು.</p>.<p>ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಬಿ. ನಾಯ್ಕ, ಎಸ್.ಡಿ.ಎಂ.ಸಿ. ಅಧ್ಯಕ್ಷ ಗಜಾನನ ಹೆಗಡೆ, ಮಹಾಬಲ ಫೌಂಡೇಷನ್ ಅಧ್ಯಕ್ಷ ಮಂಜುನಾಥ ಭಟ್, ಮುಖ್ಯಶಿಕ್ಷಕ ಜನಾರ್ಧನ ಸಿ., ಶಿಕ್ಷಕಿಯರಾದ ವಿಜಯಲಕ್ಷ್ಮೀ, ಸಂಧ್ಯಾ ಶಾಸ್ತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>