<p><strong>ಹಳಿಯಾಳ:</strong> ‘ಸಂವಿಧಾನಬದ್ಧವಾದ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತು ಪ್ರತಿಯೊಬ್ಬರು ಸಾಗಿರಿ’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತಿತರ ಇಲಾಖೆ ವತಿಯಿಂದ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಂವಿಧಾನದ ಪ್ರಮುಖ ಉದ್ದೇಶಗಳನ್ನು ಅರಿತು ದೇಶದ ಪ್ರಜೆಗಳ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ರಕ್ಷಿಸುವ ಹಾಗೂ ಅವರಲ್ಲಿ ಭ್ರಾತೃತ್ವವನ್ನು ಪ್ರೇರೇಪಿಸುವ ಒಂದು ಸಾರ್ವಭೌಮ ಪ್ರಜಾಸತಾತ್ಮಕವಾದ ಸಂವಿಧಾನದ ತತ್ವ ಮತ್ತು ಆಶಯಗಳನ್ನು ಸಕಾರಗೊಳಿಸುವಲ್ಲಿ ಪ್ರತಿಯೊಬ್ಬನು ಸಂವಿಧಾನಬದ್ಧವಾಗಿ ಸಾಗಿರಿ’ ಎಂದರು.</p>.<p>ಕೆ.ಪಿ.ಎಸ್ ಮುರ್ಕವಾಡ ಸರ್ಕಾರಿ ಪ್ರೌಡ ಶಾಲೆಯ ಮುಖ್ಯಶಿಕ್ಷಕ ದಿನೇಶ ನಾಯಕ ಅವರು, ಸಂವಿಧಾನದ ರಚನೆ ಸಂವಿಧಾನದಲ್ಲಿ ಇರುವ ಹಕ್ಕು ಮತ್ತು ಕರ್ತವ್ಯಕುರಿತು ಉಪನ್ಯಾಸ ನೀಡಿದರು.</p>.<p>ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಪಾಟೀಲ, ತಹಶೀಲ್ದಾರ್ ಪಿರೋಜಷಾ ಸೋಮನಕಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವಿಲಾಸ ರಾಜ ಪ್ರಸನ್ನ, ಸಮಾಜ ಕಲ್ಯಾಣ ಅಧಿಕಾರಿ ಅಶೋಕ ಪವಾರ ಇದ್ದರು.</p>.<p>ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಸಾಮೂಹಿಕವಾಗಿ ಪ್ರತಿಜ್ಞೆವಿಧಿ ಬೋಧಿಸಲಾಯಿತು. ರಮೇಶ ಪಾಟೀಲ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ:</strong> ‘ಸಂವಿಧಾನಬದ್ಧವಾದ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತು ಪ್ರತಿಯೊಬ್ಬರು ಸಾಗಿರಿ’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತಿತರ ಇಲಾಖೆ ವತಿಯಿಂದ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಂವಿಧಾನದ ಪ್ರಮುಖ ಉದ್ದೇಶಗಳನ್ನು ಅರಿತು ದೇಶದ ಪ್ರಜೆಗಳ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ರಕ್ಷಿಸುವ ಹಾಗೂ ಅವರಲ್ಲಿ ಭ್ರಾತೃತ್ವವನ್ನು ಪ್ರೇರೇಪಿಸುವ ಒಂದು ಸಾರ್ವಭೌಮ ಪ್ರಜಾಸತಾತ್ಮಕವಾದ ಸಂವಿಧಾನದ ತತ್ವ ಮತ್ತು ಆಶಯಗಳನ್ನು ಸಕಾರಗೊಳಿಸುವಲ್ಲಿ ಪ್ರತಿಯೊಬ್ಬನು ಸಂವಿಧಾನಬದ್ಧವಾಗಿ ಸಾಗಿರಿ’ ಎಂದರು.</p>.<p>ಕೆ.ಪಿ.ಎಸ್ ಮುರ್ಕವಾಡ ಸರ್ಕಾರಿ ಪ್ರೌಡ ಶಾಲೆಯ ಮುಖ್ಯಶಿಕ್ಷಕ ದಿನೇಶ ನಾಯಕ ಅವರು, ಸಂವಿಧಾನದ ರಚನೆ ಸಂವಿಧಾನದಲ್ಲಿ ಇರುವ ಹಕ್ಕು ಮತ್ತು ಕರ್ತವ್ಯಕುರಿತು ಉಪನ್ಯಾಸ ನೀಡಿದರು.</p>.<p>ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಪಾಟೀಲ, ತಹಶೀಲ್ದಾರ್ ಪಿರೋಜಷಾ ಸೋಮನಕಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವಿಲಾಸ ರಾಜ ಪ್ರಸನ್ನ, ಸಮಾಜ ಕಲ್ಯಾಣ ಅಧಿಕಾರಿ ಅಶೋಕ ಪವಾರ ಇದ್ದರು.</p>.<p>ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಸಾಮೂಹಿಕವಾಗಿ ಪ್ರತಿಜ್ಞೆವಿಧಿ ಬೋಧಿಸಲಾಯಿತು. ರಮೇಶ ಪಾಟೀಲ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>