<p><strong>ಕಾರವಾರ: </strong>ನಗರದ ಹೊರವಲಯದ ಶಿರವಾಡ ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೆಗಳು ಕೋವಿಡ್ ಹೊಡೆತದಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿವೆ. ಆದರೆ, ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಸಹಕಾರ ಸಿಗುತ್ತಿಲ್ಲ ಎಂದು ಉದ್ಯಮಿಗಳು ಆರೋಪಿಸಿದ್ದಾರೆ.</p>.<p>ಕೈಗಾರಿಕಾ ಪ್ರದೇಶದಲ್ಲಿ ಬೀದಿ ದೀಪಗಳ ನಿರ್ವಹಣೆ ಮಾಡುತ್ತಿಲ್ಲ. ಇಲ್ಲಿರುವ ಮನೆಗಳಿಗೆ ಮತ್ತು ಉದ್ಯಮಗಳಿಗೆ ಗ್ರಾಮ ಪಂಚಾಯಿತಿಯಿಂದ ನೀರಿನ ಸೌಲಭ್ಯವನ್ನು ಒದಗಿಸಿಲ್ಲ. ಇದರಿಂದ ಈಗಾಗಲೇ ಸಂಕಷ್ಟದಲ್ಲಿರುವ ಉದ್ಯಮಗಳ ಮೇಲೆ ಮತ್ತಷ್ಟು ಹೊರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>‘ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮವು (ಕೆ.ಎಸ್.ಎಸ್.ಐ.ಡಿ.ಸಿ) ಈ ಪ್ರದೇಶದಲ್ಲಿ 35 ಪ್ಲಾಟ್ಗಳನ್ನು ಅಭಿವೃದ್ಧಿ ಪಡಿಸಿತು. ಅವುಗಳ ನಿರ್ವಹಣೆಯನ್ನು 2006ರಲ್ಲಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು. ಬಳಿಕ 2012ರಲ್ಲಿ ಎಲ್ಲ ಉದ್ಯಮಗಳಿಗೆ ಇ–ಸ್ವತ್ತು ನೀಡಲಾಯಿತು. ಆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗೆ ನೀಡಬೇಕಿದ್ದ ಎಲ್ಲ ಹಳೆಯ ತೆರಿಗೆಗಳನ್ನೂ ಪಾವತಿಸಿಕೊಂಡಿದ್ದಾರೆ. ಆದರೆ, ಬಳಿಕ ನಿರ್ವಹಣೆ ಮಾತ್ರ ಮಾಡುತ್ತಿಲ್ಲ’ ಎಂದು ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಗಂಗಾಧರ ನಾಯ್ಕ ಹೇಳುತ್ತಾರೆ.</p>.<p>‘ಇಲ್ಲಿ ಮಾರ್ಚ್ನಿಂದಲೇ ಕುಡಿಯುವ ನೀರಿನ ಸಮಸ್ಯೆ ಶುರುವಾಗುತ್ತದೆ. ನೀರು ಪೂರೈಕೆಗೆಂದು ಇಲ್ಲಿನ ರಸ್ತೆಗಳ ಅಡಿಯಲ್ಲಿಪೈಪ್ಲೈನ್ ಅಳವಡಿಸಲಾಗಿದೆ. ಆದರೆ, ಗ್ರಾಮ ಪಂಚಾಯಿತಿಯಿಂದ ನೀರು ಕೊಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಯವರ ಗಮನಕ್ಕೂ ತರಲಾಯಿತು. ಬಳಿಕ ಕೆ.ಎಸ್.ಎಸ್.ಐ.ಡಿ.ಸಿ.ಯವರೇ ಕೊಳವೆ ಬಾವಿಯನ್ನು ಕೊರೆಯಿಸಿಕೊಟ್ಟರು. ಅದರಿಂದ ಈಗ ಹರಿಸಲಾಗುತ್ತಿದೆ’ ಎಂದು ಅವರು ವಿವರಿಸುತ್ತಾರೆ.</p>.<p>‘ಇದೇರೀತಿ, ಬೀದಿದೀಪಗಳ ನಿರ್ವಹಣೆಗೂ ಗ್ರಾಮ ಪಂಚಾಯಿತಿ ಮುಂದಾಗುತ್ತಿಲ್ಲ. ಹಲವು ದೀಪಗಳು ಕೆಟ್ಟು ಹೋಗಿವೆ. ಇಲ್ಲಿ ಕೈಗಾರಿಕಾ ಪ್ರದೇಶ ಆಗಿರುವ ಕಾರಣ ಭದ್ರತೆ ಮತ್ತು ಬೆಳಕಿನ ವ್ಯವಸ್ಥೆ ಅತ್ಯಗತ್ಯ. ಹಾಗಾಗಿ ನಾವೇ ಹೊಸ ಎಲ್.ಇ.ಡಿ ದೀಪಗಳನ್ನು ಅಳವಡಿಸಿಕೊಂಡಿದ್ದೇವೆ’ ಎಂದು ಹೇಳಿದರು.</p>.<p class="Subhead"><strong>ನಿಧಾನವಾಗಿ ಚೇತರಿಕೆ:</strong>ಕೋವಿಡ್ ಸಂದರ್ಭದಲ್ಲಿ ಕೈಗಾರಿಕಾ ಪ್ರದೇಶದ ಹಲವು ಉದ್ದಿಮೆಗಳು ಬಾಗಿಲು ಮುಚ್ಚಿದ್ದವು. ಜನಜೀವನ ಸಹಜವಾಗುತ್ತ ಸಾಗಿದಂತೆ ನಿಧಾನವಾಗಿ ಒಂದೊಂದೇ ಸಣ್ಣ ಕೈಗಾರಿಕೆಗಳು ಮತ್ತೆ ಕಾರ್ಯಾರಂಭ ಮಾಡುತ್ತಿವೆ. ಸದ್ಯ ಸುಮಾರು 25ರಷ್ಟು ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ.</p>.<p>ಸಮೀಪದಲ್ಲಿರುವ ನಗರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕದಿಂದ ಹರಿಯುವ ಕೊಳಚೆ ನೀರು, ಮಳೆಗಾಲದಲ್ಲಿ ಇಲ್ಲಿನ ಚರಂಡಿಗಳಲ್ಲಿ ಹರಿಯುತ್ತದೆ. ಅದು ಸಮೀಪದ ಕುಡಿಯುವ ನೀರಿನ ಬಾವಿಗಳಲ್ಲಿ ತುಂಬಿಕೊಳ್ಳುತ್ತದೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆಯೂ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p>***</p>.<p>ನಾವು ಗ್ರಾ.ಪಂಚಾಯಿತಿಗೆ ನಿಯಮದಂತೆ ತೆರಿಗೆ ಪಾವತಿಸಲು ಸಿದ್ಧರಿದ್ದೇವೆ. ಅದಕ್ಕೆ ಬದಲಾಗಿ ಗ್ರಾ. ಪಂ ಕನಿಷ್ಠ ಮೂಲ ಸೌಕರ್ಯವನ್ನು ಕೊಡಲಿ.</p>.<p><strong>– ಗಂಗಾಧರ ನಾಯ್ಕ, ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ</strong></p>.<p><strong>***</strong></p>.<p>ಕೈಗಾರಿಕಾ ವಲಯಕ್ಕೆ ನಾವು ನೀರು ಪೂರೈಕೆ ಮಾಡುತ್ತಿದ್ದೇವೆ. ಅಲ್ಲಿ ನಾಲ್ಕು ಕೊಳವೆ ಬಾವಿಗಳಿವೆ. ಜೊತೆಗೇ ಕೆ.ಎಸ್.ಎಸ್.ಐ.ಡಿ.ಸಿ ಹೊಸದೊಂದು ಕೊರೆಯಿಸಿದೆ.</p>.<p><strong>– ಸಂದೀಪ ಕೊಠಾರಕರ್, ಶಿರವಾಡ ಗ್ರಾ.ಪಂ ಪಿ.ಡಿ.ಒ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ನಗರದ ಹೊರವಲಯದ ಶಿರವಾಡ ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೆಗಳು ಕೋವಿಡ್ ಹೊಡೆತದಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿವೆ. ಆದರೆ, ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಸಹಕಾರ ಸಿಗುತ್ತಿಲ್ಲ ಎಂದು ಉದ್ಯಮಿಗಳು ಆರೋಪಿಸಿದ್ದಾರೆ.</p>.<p>ಕೈಗಾರಿಕಾ ಪ್ರದೇಶದಲ್ಲಿ ಬೀದಿ ದೀಪಗಳ ನಿರ್ವಹಣೆ ಮಾಡುತ್ತಿಲ್ಲ. ಇಲ್ಲಿರುವ ಮನೆಗಳಿಗೆ ಮತ್ತು ಉದ್ಯಮಗಳಿಗೆ ಗ್ರಾಮ ಪಂಚಾಯಿತಿಯಿಂದ ನೀರಿನ ಸೌಲಭ್ಯವನ್ನು ಒದಗಿಸಿಲ್ಲ. ಇದರಿಂದ ಈಗಾಗಲೇ ಸಂಕಷ್ಟದಲ್ಲಿರುವ ಉದ್ಯಮಗಳ ಮೇಲೆ ಮತ್ತಷ್ಟು ಹೊರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>‘ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮವು (ಕೆ.ಎಸ್.ಎಸ್.ಐ.ಡಿ.ಸಿ) ಈ ಪ್ರದೇಶದಲ್ಲಿ 35 ಪ್ಲಾಟ್ಗಳನ್ನು ಅಭಿವೃದ್ಧಿ ಪಡಿಸಿತು. ಅವುಗಳ ನಿರ್ವಹಣೆಯನ್ನು 2006ರಲ್ಲಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು. ಬಳಿಕ 2012ರಲ್ಲಿ ಎಲ್ಲ ಉದ್ಯಮಗಳಿಗೆ ಇ–ಸ್ವತ್ತು ನೀಡಲಾಯಿತು. ಆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗೆ ನೀಡಬೇಕಿದ್ದ ಎಲ್ಲ ಹಳೆಯ ತೆರಿಗೆಗಳನ್ನೂ ಪಾವತಿಸಿಕೊಂಡಿದ್ದಾರೆ. ಆದರೆ, ಬಳಿಕ ನಿರ್ವಹಣೆ ಮಾತ್ರ ಮಾಡುತ್ತಿಲ್ಲ’ ಎಂದು ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಗಂಗಾಧರ ನಾಯ್ಕ ಹೇಳುತ್ತಾರೆ.</p>.<p>‘ಇಲ್ಲಿ ಮಾರ್ಚ್ನಿಂದಲೇ ಕುಡಿಯುವ ನೀರಿನ ಸಮಸ್ಯೆ ಶುರುವಾಗುತ್ತದೆ. ನೀರು ಪೂರೈಕೆಗೆಂದು ಇಲ್ಲಿನ ರಸ್ತೆಗಳ ಅಡಿಯಲ್ಲಿಪೈಪ್ಲೈನ್ ಅಳವಡಿಸಲಾಗಿದೆ. ಆದರೆ, ಗ್ರಾಮ ಪಂಚಾಯಿತಿಯಿಂದ ನೀರು ಕೊಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಯವರ ಗಮನಕ್ಕೂ ತರಲಾಯಿತು. ಬಳಿಕ ಕೆ.ಎಸ್.ಎಸ್.ಐ.ಡಿ.ಸಿ.ಯವರೇ ಕೊಳವೆ ಬಾವಿಯನ್ನು ಕೊರೆಯಿಸಿಕೊಟ್ಟರು. ಅದರಿಂದ ಈಗ ಹರಿಸಲಾಗುತ್ತಿದೆ’ ಎಂದು ಅವರು ವಿವರಿಸುತ್ತಾರೆ.</p>.<p>‘ಇದೇರೀತಿ, ಬೀದಿದೀಪಗಳ ನಿರ್ವಹಣೆಗೂ ಗ್ರಾಮ ಪಂಚಾಯಿತಿ ಮುಂದಾಗುತ್ತಿಲ್ಲ. ಹಲವು ದೀಪಗಳು ಕೆಟ್ಟು ಹೋಗಿವೆ. ಇಲ್ಲಿ ಕೈಗಾರಿಕಾ ಪ್ರದೇಶ ಆಗಿರುವ ಕಾರಣ ಭದ್ರತೆ ಮತ್ತು ಬೆಳಕಿನ ವ್ಯವಸ್ಥೆ ಅತ್ಯಗತ್ಯ. ಹಾಗಾಗಿ ನಾವೇ ಹೊಸ ಎಲ್.ಇ.ಡಿ ದೀಪಗಳನ್ನು ಅಳವಡಿಸಿಕೊಂಡಿದ್ದೇವೆ’ ಎಂದು ಹೇಳಿದರು.</p>.<p class="Subhead"><strong>ನಿಧಾನವಾಗಿ ಚೇತರಿಕೆ:</strong>ಕೋವಿಡ್ ಸಂದರ್ಭದಲ್ಲಿ ಕೈಗಾರಿಕಾ ಪ್ರದೇಶದ ಹಲವು ಉದ್ದಿಮೆಗಳು ಬಾಗಿಲು ಮುಚ್ಚಿದ್ದವು. ಜನಜೀವನ ಸಹಜವಾಗುತ್ತ ಸಾಗಿದಂತೆ ನಿಧಾನವಾಗಿ ಒಂದೊಂದೇ ಸಣ್ಣ ಕೈಗಾರಿಕೆಗಳು ಮತ್ತೆ ಕಾರ್ಯಾರಂಭ ಮಾಡುತ್ತಿವೆ. ಸದ್ಯ ಸುಮಾರು 25ರಷ್ಟು ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ.</p>.<p>ಸಮೀಪದಲ್ಲಿರುವ ನಗರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕದಿಂದ ಹರಿಯುವ ಕೊಳಚೆ ನೀರು, ಮಳೆಗಾಲದಲ್ಲಿ ಇಲ್ಲಿನ ಚರಂಡಿಗಳಲ್ಲಿ ಹರಿಯುತ್ತದೆ. ಅದು ಸಮೀಪದ ಕುಡಿಯುವ ನೀರಿನ ಬಾವಿಗಳಲ್ಲಿ ತುಂಬಿಕೊಳ್ಳುತ್ತದೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆಯೂ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p>***</p>.<p>ನಾವು ಗ್ರಾ.ಪಂಚಾಯಿತಿಗೆ ನಿಯಮದಂತೆ ತೆರಿಗೆ ಪಾವತಿಸಲು ಸಿದ್ಧರಿದ್ದೇವೆ. ಅದಕ್ಕೆ ಬದಲಾಗಿ ಗ್ರಾ. ಪಂ ಕನಿಷ್ಠ ಮೂಲ ಸೌಕರ್ಯವನ್ನು ಕೊಡಲಿ.</p>.<p><strong>– ಗಂಗಾಧರ ನಾಯ್ಕ, ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ</strong></p>.<p><strong>***</strong></p>.<p>ಕೈಗಾರಿಕಾ ವಲಯಕ್ಕೆ ನಾವು ನೀರು ಪೂರೈಕೆ ಮಾಡುತ್ತಿದ್ದೇವೆ. ಅಲ್ಲಿ ನಾಲ್ಕು ಕೊಳವೆ ಬಾವಿಗಳಿವೆ. ಜೊತೆಗೇ ಕೆ.ಎಸ್.ಎಸ್.ಐ.ಡಿ.ಸಿ ಹೊಸದೊಂದು ಕೊರೆಯಿಸಿದೆ.</p>.<p><strong>– ಸಂದೀಪ ಕೊಠಾರಕರ್, ಶಿರವಾಡ ಗ್ರಾ.ಪಂ ಪಿ.ಡಿ.ಒ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>