ಉನ್ನತ ಶಿಕ್ಷಣ ಇಲಾಖೆ ಆಂತರಿಕ ಗುಣಮಟ್ಟ ಭರವಸಾ ಕೋಶದ ರಾಜ್ಯ ನೋಡಲ್ ಅಧಿಕಾರಿ ಡಾ.ಕೆ. ವಿಕ್ರಮ್ ಮಾತನಾಡಿ, ಸೌಲಭ್ಯಗಳಿಗಿಂತ ವಿದ್ಯಾರ್ಥಿಗಳ ಹುಮ್ಮಸ್ಸು, ಆಸಕ್ತಿ ಸಂಶೋಧನೆಗೆ ಒತ್ತು ನೀಡಬಲ್ಲದು. ಕುಮಟಾ ಕಾಲೇಜಿನಲ್ಲಿ ನಡೆದ ಸಂಶೋಧನೆಗೆ ಒತ್ತು ನೀಡುವ ಅಂತರರಾಷ್ಟ್ರೀಯ ಸಮ್ಮೇಳನಗಳು ಉನ್ನತ ಶಿಕ್ಷಣ ಇಲಾಖೆ, ವಿಶ್ವವಿದ್ಯಾಲಯಗಳ ಗಮನ ಸೆಳೆಯಬೇಕಾಗಿದೆ ಎಂದರು.