<p><strong>ಕಾರವಾರ</strong>: ಇಸ್ರೇಲ್ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಈಚೆಗೆ ನಡೆಸಿದ ‘ಆಪರೇಷನ್ ಅಜಯ್’ ತಂಡದಲ್ಲಿ ತಾಲ್ಲೂಕಿನ ಬಿಣಗಾದ ಮಹಿಮಾ ಶೆಟ್ಟಿ ಕೂಡ ಇದ್ದರು.</p>.<p>ಸದ್ಯ ಗೋವಾದ ಪರ್ವೊರಿಮ್ನಲ್ಲಿ ನೆಲೆಸಿರುವ ದುರ್ಗಪ್ಪ ಶೆಟ್ಟಿ ಮತ್ತು ನಯನಾ ದಂಪತಿಯ ಪುತ್ರಿ ಮಹಿಮಾ ಶೆಟ್ಟಿ ಆಪರೇಷನ್ ಅಜಯ್ ತಂಡದಲ್ಲಿದ್ದರು. ಏರ್ ಇಂಡಿಯಾದಲ್ಲಿ ಗಗನಸಖಿ ಆಗಿರುವ ಅವರು ಇಸ್ರೇಲ್ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರುವ ಆರು ಮಂದಿಯ ತಂಡದಲ್ಲಿದ್ದರು.</p>.<p>‘ಮಗಳು ಮಹಿಮಾ ಇಸ್ರೇಲ್ನಲ್ಲಿ ಇರುವವರನ್ನು ಕರೆತರಲು ಹೋಗುತ್ತಾಳೆ ಎಂದು ತಿಳಿದು ಆತಂಕವಾಗಿತ್ತು. ಅಲ್ಲಿ ಸಂಕಷ್ಟದಲ್ಲಿ ಇರುವ ನಮ್ಮವರನ್ನು ಸುರಕ್ಷಿತವಾಗಿ ಕರೆತರುವುದು ಪುಣ್ಯದ ಕೆಲಸ. ಈ ಅವಕಾಶ ಎಲ್ಲರಿಗೂ ಸಿಗದು ಎಂದು ನಮಗೇ ಧೈರ್ಯ ತುಂಬಿದಳು. ಕ್ಷಿಪಣಿ ದಾಳಿ ನಡೆಯುತ್ತಿದ್ದುದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದ ಅನುಭವ ಹೇಳಿದಳು. 236 ಮಂದಿ ಭಾರತೀಯರನ್ನು ಕರೆತಂದಿದ್ದಾಗಿ ತಿಳಿಸಿದ್ದಾಳೆ’ ಎಂದು ಮಹಿಮಾ ತಾಯಿ ನಯನಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ವಾರದ ಹಿಂದೆಯೇ ಮಗಳು ಇಸ್ರೇಲ್ನಿಂದ ಮರಳಿದ್ದಾಳೆ. ಮಹತ್ತರ ಕಾರ್ಯಾಚರಣೆಯೊಂದರಲ್ಲಿ ಮಗಳು ಪಾಲ್ಗೊಂಡಿದ್ದರ ಬಗ್ಗೆ ನಮಗೂ ಹೆಮ್ಮೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಇಸ್ರೇಲ್ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಈಚೆಗೆ ನಡೆಸಿದ ‘ಆಪರೇಷನ್ ಅಜಯ್’ ತಂಡದಲ್ಲಿ ತಾಲ್ಲೂಕಿನ ಬಿಣಗಾದ ಮಹಿಮಾ ಶೆಟ್ಟಿ ಕೂಡ ಇದ್ದರು.</p>.<p>ಸದ್ಯ ಗೋವಾದ ಪರ್ವೊರಿಮ್ನಲ್ಲಿ ನೆಲೆಸಿರುವ ದುರ್ಗಪ್ಪ ಶೆಟ್ಟಿ ಮತ್ತು ನಯನಾ ದಂಪತಿಯ ಪುತ್ರಿ ಮಹಿಮಾ ಶೆಟ್ಟಿ ಆಪರೇಷನ್ ಅಜಯ್ ತಂಡದಲ್ಲಿದ್ದರು. ಏರ್ ಇಂಡಿಯಾದಲ್ಲಿ ಗಗನಸಖಿ ಆಗಿರುವ ಅವರು ಇಸ್ರೇಲ್ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರುವ ಆರು ಮಂದಿಯ ತಂಡದಲ್ಲಿದ್ದರು.</p>.<p>‘ಮಗಳು ಮಹಿಮಾ ಇಸ್ರೇಲ್ನಲ್ಲಿ ಇರುವವರನ್ನು ಕರೆತರಲು ಹೋಗುತ್ತಾಳೆ ಎಂದು ತಿಳಿದು ಆತಂಕವಾಗಿತ್ತು. ಅಲ್ಲಿ ಸಂಕಷ್ಟದಲ್ಲಿ ಇರುವ ನಮ್ಮವರನ್ನು ಸುರಕ್ಷಿತವಾಗಿ ಕರೆತರುವುದು ಪುಣ್ಯದ ಕೆಲಸ. ಈ ಅವಕಾಶ ಎಲ್ಲರಿಗೂ ಸಿಗದು ಎಂದು ನಮಗೇ ಧೈರ್ಯ ತುಂಬಿದಳು. ಕ್ಷಿಪಣಿ ದಾಳಿ ನಡೆಯುತ್ತಿದ್ದುದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದ ಅನುಭವ ಹೇಳಿದಳು. 236 ಮಂದಿ ಭಾರತೀಯರನ್ನು ಕರೆತಂದಿದ್ದಾಗಿ ತಿಳಿಸಿದ್ದಾಳೆ’ ಎಂದು ಮಹಿಮಾ ತಾಯಿ ನಯನಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ವಾರದ ಹಿಂದೆಯೇ ಮಗಳು ಇಸ್ರೇಲ್ನಿಂದ ಮರಳಿದ್ದಾಳೆ. ಮಹತ್ತರ ಕಾರ್ಯಾಚರಣೆಯೊಂದರಲ್ಲಿ ಮಗಳು ಪಾಲ್ಗೊಂಡಿದ್ದರ ಬಗ್ಗೆ ನಮಗೂ ಹೆಮ್ಮೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>