<p><strong>ಶಿರಸಿ</strong>: 'ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಈಗಾಗಲೇ ಎಸ್ಐಟಿಗೆ ನೀಡಿದೆ. ಅದರ ವರದಿ ಬಂದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಬೇಕು. ಈಗಲೇ ಬಿಜೆಪಿಯವರು ಮುಖ್ಯಮಂತ್ರಿಯವರ ರಾಜೀನಾಮೆ ಕೇಳುವುದು ಸರಿಯಲ್ಲ' ಎಂದು ಬಳ್ಳಾರಿ ಸಂಸದ ಈ.ತುಕಾರಾಂ ಹೇಳಿದರು. </p>.<p>‘ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಬಿಜೆಪಿಯವರು ಪ್ರತಿಭಟಿಸುವುದು, ವಿರೋಧ ಪಕ್ಷವಾಗಿ ಅದು ಅವರ ಕರ್ತವ್ಯ. ಈ ತಿಂಗಳ 15ರಿಂದ ವಿಧಾನಸಭೆ ಅಧಿವೇಶನ ಆರಂಭವಾಗುತ್ತದೆ. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿ. ಅಲ್ಲಿ ಬಿಜೆಪಿಯವರು ಬಂದು ವಿಷಯ ಪ್ರಸ್ತಾಪಿಸಲಿ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಸಂಡೂರು ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ನನ್ನ ಮಗಳಿಗೆ ಟಿಕೆಟ್ ನೀಡುವಂತೆ ಈವರೆಗೂ ಕೇಳಿಲ್ಲ. ಪಕ್ಷದಿಂದ ಸರ್ವೆ ನಡೆದು ಆ ಪ್ರಕಾರ ಟಿಕೆಟ್ ನೀಡಲಾಗುತ್ತದೆ. ಸಂಡೂರಿನಲ್ಲಿ ಯಾರು ಸೂಕ್ತ ಅಭ್ಯರ್ಥಿ ಎಂಬುದನ್ನು ಪಕ್ಷದ ಹಿರಿಯರು ಚರ್ಚಿಸುವರು. ಎಲ್ಲ ಸಮುದಾಯದ ಅಭಿಪ್ರಾಯವನ್ನೂ ಪಡೆಯಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: 'ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಈಗಾಗಲೇ ಎಸ್ಐಟಿಗೆ ನೀಡಿದೆ. ಅದರ ವರದಿ ಬಂದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಬೇಕು. ಈಗಲೇ ಬಿಜೆಪಿಯವರು ಮುಖ್ಯಮಂತ್ರಿಯವರ ರಾಜೀನಾಮೆ ಕೇಳುವುದು ಸರಿಯಲ್ಲ' ಎಂದು ಬಳ್ಳಾರಿ ಸಂಸದ ಈ.ತುಕಾರಾಂ ಹೇಳಿದರು. </p>.<p>‘ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಬಿಜೆಪಿಯವರು ಪ್ರತಿಭಟಿಸುವುದು, ವಿರೋಧ ಪಕ್ಷವಾಗಿ ಅದು ಅವರ ಕರ್ತವ್ಯ. ಈ ತಿಂಗಳ 15ರಿಂದ ವಿಧಾನಸಭೆ ಅಧಿವೇಶನ ಆರಂಭವಾಗುತ್ತದೆ. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿ. ಅಲ್ಲಿ ಬಿಜೆಪಿಯವರು ಬಂದು ವಿಷಯ ಪ್ರಸ್ತಾಪಿಸಲಿ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಸಂಡೂರು ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ನನ್ನ ಮಗಳಿಗೆ ಟಿಕೆಟ್ ನೀಡುವಂತೆ ಈವರೆಗೂ ಕೇಳಿಲ್ಲ. ಪಕ್ಷದಿಂದ ಸರ್ವೆ ನಡೆದು ಆ ಪ್ರಕಾರ ಟಿಕೆಟ್ ನೀಡಲಾಗುತ್ತದೆ. ಸಂಡೂರಿನಲ್ಲಿ ಯಾರು ಸೂಕ್ತ ಅಭ್ಯರ್ಥಿ ಎಂಬುದನ್ನು ಪಕ್ಷದ ಹಿರಿಯರು ಚರ್ಚಿಸುವರು. ಎಲ್ಲ ಸಮುದಾಯದ ಅಭಿಪ್ರಾಯವನ್ನೂ ಪಡೆಯಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>