<p><strong>ಕಾರವಾರ</strong>: ‘ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶಿಲ್ಪಕಲೆಗೆ ಹೆಚ್ಚಿನ ಮಹತ್ವವಿದೆ. ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು ಹಳೆಬೀಡಿನಲ್ಲಿ ಕೆತ್ತಿರುವ ಶಿಲ್ಪಕಲೆಯ ಮೂಲಕ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಲ್ಪಕಲೆ ಎನ್ನುವುದು ಅತ್ಯಂತ ನಾಜೂಕಾದ ಕೆತ್ತನೆಯ ಕಲೆ ಇಂತಹ ವಿಶೇವಾದಂತಹ ಕಲೆಯ ಮೂಲಕ ಅಮರಶಿಲ್ಪಿ ಜಕಣಾಚಾರಿ ನಾಡಿನ ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ವಿಶ್ವಕರ್ಮ ಸಮುದಾಯದ ಬೇಡಿಕೆಗಳಿದ್ದಲ್ಲಿ ಗಮನಕ್ಕೆ ತರಬೇಕು. ಅವುಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದರು.</p>.<p>ಉಪನ್ಯಾಸ ನೀಡಿದ ಭಾರತೀಯ ವಿಶ್ವಕರ್ಮ ಸೇವಾ ಪರಿಷತ್ನ ರಾಜ್ಯ ಘಟಕದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ, ‘ಅಮರಶಿಲ್ಪಿ ಜಕಣಾಚಾರಿ ಅತ್ಯಂತ ಶ್ರೇಷ್ಠ ಶಿಲ್ಪಿ. ಶಿಲ್ಪಕಲೆಗೆ ಪರ್ಯಾಯ ಹೆಸರೇ ಜಕಣಾಚಾರಿ. ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು’ ಎಂದರು.</p>.<p>ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಗೋಪಾಲ ಆಚಾರ್ಯ, ‘ವಿಶ್ವಕರ್ಮ ಸಮಾಜದವರು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಲೆಗಳ ಪ್ರದರ್ಶನಕ್ಕೆ ಅವಕಾಶ ಮಾಡಬೇಕು. ಜಿಲ್ಲೆಯಲ್ಲಿ ಒಂದು ಸಮುದಾಯ ಭವನ ನಿರ್ಮಾಣ ಮಾಡಬೇಕು’ ಎಂದರು.</p>.<p>ವಿವಿಧ ವೃತ್ತಿ ಕೌಶಲ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿಶ್ವಕರ್ಮ ಸಮಾಜದ ಮಂಜುನಾಥ ಆಚಾರ್ಯ, ಗಂಗಾಧರ ಆಚಾರ್ಯ, ಗಣಪತಿ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ ಕೆ.ಎಂ, ವಿಶ್ವಕರ್ಮ ಸಮಾಜದ ಮುಖಂಡ ಜಗದೀಶ ಆಚಾರ್ಯ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶಿಲ್ಪಕಲೆಗೆ ಹೆಚ್ಚಿನ ಮಹತ್ವವಿದೆ. ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು ಹಳೆಬೀಡಿನಲ್ಲಿ ಕೆತ್ತಿರುವ ಶಿಲ್ಪಕಲೆಯ ಮೂಲಕ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಲ್ಪಕಲೆ ಎನ್ನುವುದು ಅತ್ಯಂತ ನಾಜೂಕಾದ ಕೆತ್ತನೆಯ ಕಲೆ ಇಂತಹ ವಿಶೇವಾದಂತಹ ಕಲೆಯ ಮೂಲಕ ಅಮರಶಿಲ್ಪಿ ಜಕಣಾಚಾರಿ ನಾಡಿನ ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ವಿಶ್ವಕರ್ಮ ಸಮುದಾಯದ ಬೇಡಿಕೆಗಳಿದ್ದಲ್ಲಿ ಗಮನಕ್ಕೆ ತರಬೇಕು. ಅವುಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದರು.</p>.<p>ಉಪನ್ಯಾಸ ನೀಡಿದ ಭಾರತೀಯ ವಿಶ್ವಕರ್ಮ ಸೇವಾ ಪರಿಷತ್ನ ರಾಜ್ಯ ಘಟಕದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ, ‘ಅಮರಶಿಲ್ಪಿ ಜಕಣಾಚಾರಿ ಅತ್ಯಂತ ಶ್ರೇಷ್ಠ ಶಿಲ್ಪಿ. ಶಿಲ್ಪಕಲೆಗೆ ಪರ್ಯಾಯ ಹೆಸರೇ ಜಕಣಾಚಾರಿ. ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು’ ಎಂದರು.</p>.<p>ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಗೋಪಾಲ ಆಚಾರ್ಯ, ‘ವಿಶ್ವಕರ್ಮ ಸಮಾಜದವರು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಲೆಗಳ ಪ್ರದರ್ಶನಕ್ಕೆ ಅವಕಾಶ ಮಾಡಬೇಕು. ಜಿಲ್ಲೆಯಲ್ಲಿ ಒಂದು ಸಮುದಾಯ ಭವನ ನಿರ್ಮಾಣ ಮಾಡಬೇಕು’ ಎಂದರು.</p>.<p>ವಿವಿಧ ವೃತ್ತಿ ಕೌಶಲ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿಶ್ವಕರ್ಮ ಸಮಾಜದ ಮಂಜುನಾಥ ಆಚಾರ್ಯ, ಗಂಗಾಧರ ಆಚಾರ್ಯ, ಗಣಪತಿ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ ಕೆ.ಎಂ, ವಿಶ್ವಕರ್ಮ ಸಮಾಜದ ಮುಖಂಡ ಜಗದೀಶ ಆಚಾರ್ಯ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>