‘ಪಟ್ಟಣದ ಹೃದಯಭಾಗದಲ್ಲಿರುವ ಕೆರೆಯ ಅಭಿವೃದ್ದಿಗೆ ಪುರಸಭೆ ಆಸಕ್ತಿ ತೋರುತ್ತಿಲ್ಲ. ಕೆರೆಯ ಬಗ್ಗೆ ಒಮ್ಮೆಯೂ ಪುರಸಭೆಯ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ಮಾಡಿಲ್ಲ. ಕೆರೆಯ ತುಂಬ ಹೂಳು ತುಂಬಿಕೊಂಡಿದ್ದು, ಪಾಚಿ ಬೆಳೆದುಕೊಂಡಿದೆ. ಸುತ್ತಮುತ್ತಲಿನ ಗ್ರಾಮದ ಜೀವಜಲವಾದ ಈ ಕೆರೆಯನ್ನು ಪಾಳು ಬಿಟ್ಟರೆ ಬರದ ಸ್ಥಿತಿ ತಲೆದೋರಬಹುದು’ ಎನ್ನುತ್ತಾರೆ ಸ್ಥಳೀಯ ನಿವಾಸಿ ವೆಂಕಟೇಶ ಮೊಗೇರ.