<p><strong>ಮುಂಡಗೋಡ:</strong> ಇಲ್ಲಿನ ತಾಲ್ಲೂಕು ಆಸ್ಪತ್ರೆಯ ಆವರಣದಲ್ಲಿರುವ ಜನೌಷಧ ಕೇಂದ್ರವನ್ನು, ನಿಯಮಾವಳಿ ಉಲ್ಲಂಘಿಸಿರುವ ಆರೋಪದ ಮೇಲೆ ಶನಿವಾರದಿಂದ ಬಂದ್ ಮಾಡಿಸಲಾಗಿದೆ.</p>.<p>ಜನೌಷಧ ಕೇಂದ್ರದಲ್ಲಿ ನಿಗದಿಪಡಿಸಿದ ಔಷಧಗಳ ಜೊತೆಗೆ ದುಬಾರಿ ಬೆಲೆಯ ಔಷಧಗಳನ್ನು ಸಹ ಮಾರುತ್ತಿದ್ದಾರೆ ಎಂಬ ಸಾರ್ವಜನಿಕರ ಲಿಖಿತ ದೂರಿನ ಹಿನ್ನೆಲೆಯಲ್ಲಿ, ಈಚೆಗೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡವು ದಿಢೀರ್ ದಾಳಿ ಮಾಡಿ, ಪರಿಶೀಲಿಸಿದ್ದರು.</p>.<p>ದಾಳಿಯ ಸಂದರ್ಭದಲ್ಲಿ, ಜನೌಷಧ ಕೇಂದ್ರದಲ್ಲಿ ಜನೌಷಧಗಳು ಅಷ್ಟೇ ಅಲ್ಲದೇ, ಬೇರೆ ಔಷಧಗಳನ್ನೂ ಮಾರಾಟಕ್ಕೆ ಇಟ್ಟಿರುವುದು ಕಂಡುಬಂತು. ಈ ಕುರಿತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ವರದಿ ನೀಡಲಾಗಿತ್ತು.</p>.<p>‘ಜನೌಷಧ ಕೇಂದ್ರದ ಮೇಲಿನ ದಾಳಿ ಕುರಿತು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿತ್ತು. ಈ ಕುರಿತು ಸರ್ಕಾರದ ಆದೇಶ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆದೇಶದನ್ವಯ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿರುವ ಜನೌಷದ ಕೇಂದ್ರವನ್ನು ಶನಿವಾರದಿಂದ ಬಂದ್ ಮಾಡಲಾಗಿದೆ’ ಎಂದು ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸ್ವರೂಪರಾಣಿ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ:</strong> ಇಲ್ಲಿನ ತಾಲ್ಲೂಕು ಆಸ್ಪತ್ರೆಯ ಆವರಣದಲ್ಲಿರುವ ಜನೌಷಧ ಕೇಂದ್ರವನ್ನು, ನಿಯಮಾವಳಿ ಉಲ್ಲಂಘಿಸಿರುವ ಆರೋಪದ ಮೇಲೆ ಶನಿವಾರದಿಂದ ಬಂದ್ ಮಾಡಿಸಲಾಗಿದೆ.</p>.<p>ಜನೌಷಧ ಕೇಂದ್ರದಲ್ಲಿ ನಿಗದಿಪಡಿಸಿದ ಔಷಧಗಳ ಜೊತೆಗೆ ದುಬಾರಿ ಬೆಲೆಯ ಔಷಧಗಳನ್ನು ಸಹ ಮಾರುತ್ತಿದ್ದಾರೆ ಎಂಬ ಸಾರ್ವಜನಿಕರ ಲಿಖಿತ ದೂರಿನ ಹಿನ್ನೆಲೆಯಲ್ಲಿ, ಈಚೆಗೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡವು ದಿಢೀರ್ ದಾಳಿ ಮಾಡಿ, ಪರಿಶೀಲಿಸಿದ್ದರು.</p>.<p>ದಾಳಿಯ ಸಂದರ್ಭದಲ್ಲಿ, ಜನೌಷಧ ಕೇಂದ್ರದಲ್ಲಿ ಜನೌಷಧಗಳು ಅಷ್ಟೇ ಅಲ್ಲದೇ, ಬೇರೆ ಔಷಧಗಳನ್ನೂ ಮಾರಾಟಕ್ಕೆ ಇಟ್ಟಿರುವುದು ಕಂಡುಬಂತು. ಈ ಕುರಿತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ವರದಿ ನೀಡಲಾಗಿತ್ತು.</p>.<p>‘ಜನೌಷಧ ಕೇಂದ್ರದ ಮೇಲಿನ ದಾಳಿ ಕುರಿತು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿತ್ತು. ಈ ಕುರಿತು ಸರ್ಕಾರದ ಆದೇಶ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆದೇಶದನ್ವಯ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿರುವ ಜನೌಷದ ಕೇಂದ್ರವನ್ನು ಶನಿವಾರದಿಂದ ಬಂದ್ ಮಾಡಲಾಗಿದೆ’ ಎಂದು ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸ್ವರೂಪರಾಣಿ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>