<p><strong>ಯಲ್ಲಾಪುರ</strong>: ರಾಜ್ಯ ಸರ್ಕಾರದ ತುಷ್ಟೀಕರಣ ನೀತಿ, ಭ್ರಷ್ಷಾಚಾರ, ಬೆಲೆ ಏರಿಕೆ ಹಾಗೂ ಪರಿಶಿಷ್ಟರ ಹಣದ ದುರ್ಬಳಕೆ ವಿರುದ್ದ ಬಿಜೆಪಿ ಜನಾಕ್ರೋಶ ಯಾತ್ರೆ ಆಯೋಜಿಸಿದ್ದು, ಏಪ್ರಿಲ್ 11ರಂದು ಯಲ್ಲಾಪುರಕ್ಕೆ ಯಾತ್ರೆ ಬರಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್.ಹೆಗಡೆ ತಿಳಿಸಿದರು.</p>.<p>ಪಟ್ಟಣದ ಟಿ.ಎಂ.ಎಸ್ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಜನಾಕ್ರೋಶ ಯಾತ್ರೆಯ ಅಂಗವಾಗಿ ಪಟ್ಟಣದ ಗ್ರಾಮದೇವಿ ದೇವಸ್ಥಾನದಿಂದ ವೈಟಿಎಸ್ಎಸ್ ಮೈದಾನದವರೆಗೆ ಮೆರವಣಿಗೆ ನಡೆಯಲಿದ್ದು , ಅಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದರು.</p>.<p>ರಾಜ್ಯ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಜಿಲ್ಲೆಯ ಸಂಸದರು, ಶಾಸಕರು ಭಾಗವಹಿಸುವರು.</p>.<p>ಜನರು ಕಾಂಗ್ರೆಸ್ ಸರ್ಕಾರದಿಂದ ರೋಸಿ ಹೋಗಿದ್ದು, ಅಭಿವೃದ್ಧಿ ಕುಸಿದಿದೆ. ಭ್ರಷ್ಷಾಚಾರ ಮಿತಿಮೀರಿದೆ. ಜನರ ಸಮಸ್ಯೆ ಗಮನಿಸಿ ಪಕ್ಷ ಹೋರಾಟಕ್ಕೆ ಇಳಿದಿದೆ. ಪಾದಯಾತ್ರೆ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುವುದು ಎಂದರು.</p>.<p>ಪಕ್ಷದ ಪ್ರಮುಖರಾದ ಅಶೋಕ ಚಲವಾದಿ, ಗುರುಪ್ರಸಾದ ಹೆಗಡೆ, ಶಿವಾಜಿ ನಸ್ರಾಣಿ, ಹರಿಪ್ರಕಾಶ ಕೋಣೆಮನೆ, ಚಂದ್ರಕಲಾ ಭಟ್, ಪ್ರಸಾದ ಹೆಗಡೆ, ಕೆ.ಟಿ.ಹೆಗಡೆ, ಗಣಪತಿ ಮಾನಿಗದ್ದೆ, ನಾರಾಯಣ ಭಟ್ ಅಗ್ಗಾಶಿಕುಂಬ್ರಿ, ಉಮೇಶ ಭಾಗ್ವತ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ರಾಜ್ಯ ಸರ್ಕಾರದ ತುಷ್ಟೀಕರಣ ನೀತಿ, ಭ್ರಷ್ಷಾಚಾರ, ಬೆಲೆ ಏರಿಕೆ ಹಾಗೂ ಪರಿಶಿಷ್ಟರ ಹಣದ ದುರ್ಬಳಕೆ ವಿರುದ್ದ ಬಿಜೆಪಿ ಜನಾಕ್ರೋಶ ಯಾತ್ರೆ ಆಯೋಜಿಸಿದ್ದು, ಏಪ್ರಿಲ್ 11ರಂದು ಯಲ್ಲಾಪುರಕ್ಕೆ ಯಾತ್ರೆ ಬರಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್.ಹೆಗಡೆ ತಿಳಿಸಿದರು.</p>.<p>ಪಟ್ಟಣದ ಟಿ.ಎಂ.ಎಸ್ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಜನಾಕ್ರೋಶ ಯಾತ್ರೆಯ ಅಂಗವಾಗಿ ಪಟ್ಟಣದ ಗ್ರಾಮದೇವಿ ದೇವಸ್ಥಾನದಿಂದ ವೈಟಿಎಸ್ಎಸ್ ಮೈದಾನದವರೆಗೆ ಮೆರವಣಿಗೆ ನಡೆಯಲಿದ್ದು , ಅಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದರು.</p>.<p>ರಾಜ್ಯ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಜಿಲ್ಲೆಯ ಸಂಸದರು, ಶಾಸಕರು ಭಾಗವಹಿಸುವರು.</p>.<p>ಜನರು ಕಾಂಗ್ರೆಸ್ ಸರ್ಕಾರದಿಂದ ರೋಸಿ ಹೋಗಿದ್ದು, ಅಭಿವೃದ್ಧಿ ಕುಸಿದಿದೆ. ಭ್ರಷ್ಷಾಚಾರ ಮಿತಿಮೀರಿದೆ. ಜನರ ಸಮಸ್ಯೆ ಗಮನಿಸಿ ಪಕ್ಷ ಹೋರಾಟಕ್ಕೆ ಇಳಿದಿದೆ. ಪಾದಯಾತ್ರೆ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುವುದು ಎಂದರು.</p>.<p>ಪಕ್ಷದ ಪ್ರಮುಖರಾದ ಅಶೋಕ ಚಲವಾದಿ, ಗುರುಪ್ರಸಾದ ಹೆಗಡೆ, ಶಿವಾಜಿ ನಸ್ರಾಣಿ, ಹರಿಪ್ರಕಾಶ ಕೋಣೆಮನೆ, ಚಂದ್ರಕಲಾ ಭಟ್, ಪ್ರಸಾದ ಹೆಗಡೆ, ಕೆ.ಟಿ.ಹೆಗಡೆ, ಗಣಪತಿ ಮಾನಿಗದ್ದೆ, ನಾರಾಯಣ ಭಟ್ ಅಗ್ಗಾಶಿಕುಂಬ್ರಿ, ಉಮೇಶ ಭಾಗ್ವತ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>