ಅಂಕೋಲಾ (ಉತ್ತರ ಕನ್ನಡ): ತಾಲ್ಲೂಕಿನ ಬೇಲೆಕೇರಿ ಬಂದರಿನ ಮೂಲಕ ಅಕ್ರಮವಾಗಿ ಅದಿರು ರಫ್ತು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಮತ್ತು ಶಾಸಕ ನಾಗೇಂದ್ರ ಅವರು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಸೋಮವಾರ ಖುದ್ದು ಹಾಜರಾಗಿ ಜಾಮೀನು ಪ್ರತಿಯನ್ನು ಪಡೆದುಕೊಂಡರು. ಈ ವರ್ಷ ಜ.24ರಂದು ನಿರೀಕ್ಷಣಾ ಜಾಮೀನು ಪಡೆದಿದ್ದ ಅವರಿಗೆ, ಅಂಕೋಲಾ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿತು