<p><strong>ಜೊಯಿಡಾ</strong>: ತಾಲ್ಲೂಕಿಗೆ ಮೂಲಸೌಕರ್ಯಗಳನ್ನು ಒದಗಿಸುವುವಂತೆ ಆಗ್ರಹಿಸಿ ಕರ್ನಾಟಕ ರೈತ ಪ್ರಾಂತ ಸಂಘದ ಜೊಯಿಡಾ ಘಟಕದ ವತಿಯಿಂದ ಕಿರವತ್ತಿಯಿಂದ ಜೊಯಿಡಾ ತಹಶೀಲ್ದಾರ್ ಕಚೇರಿವರೆಗೆ ಸೋಮವಾರ ಪಾದಯಾತ್ರೆ ನಡೆಸಿ, ಮನವಿ ನೀಡಲಾಯಿತು.</p>.<p>ಘಟಕದ ಅಧ್ಯಕ್ಷ ಪ್ರೇಮಾನಂದ ವೇಳಿಪ, ‘ಮೂಲಸೌಕರ್ಯಕ್ಕೆ ಹೋರಾಟ ಮಾಡುವ ದಿನಗಳು ಬಂದಿದ್ದು ದುಃಖಕರ. ಸರ್ಕಾರಕ್ಕೆ ನಾಚಿಕೆ ಆಗಬೇಕು. ಅನೇಕ ಬಾರಿ ಮನವಿ ನೀಡಿದರು ಪ್ರಯೋಜನ ವಾಗಿಲ್ಲ’ ಎಂದು ಆರೋಪಿಸಿದರು.</p>.<p>‘ಕೆಲವು ಗ್ರಾಮಗಳಿಗೆ ಸರಿಯಾದ ಬಸ್ ಸೌಕರ್ಯ, ಬಿಎಸ್ಎನ್ಎಲ್ ಟವರ್ ಇಲ್ಲ. ನ್ಯಾಯ ಬೆಲೆ ಅಂಗಡಿ ನೀಡಬೇಕು. ಅರಣ್ಯ ಪ್ಯಾಕೇಜ್ ಆಮಿಷ ಬಂದ್ ಮಾಡಬೇಕು. ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಅಧ್ಯಕ್ಷ ತಿಲಕ್ ಗೌಡ ಮಾತನಾಡಿ,‘ ಜೊಯಿಡಾ ಪ್ರದೇಶವನ್ನು ಸರ್ಕಾರ ಸಂಪೂರ್ಣ ಕಡೆಗಣಿಸಿದೆ. ಸ್ವಾತಂತ್ರ್ಯ ನಂತರವೂ ಮೂಲಸೌಕರ್ಯಕ್ಕಾಗಿ ಹೋರಾಟ ಅನಿವಾರ್ಯವಾಗಿದೆ. ಮುಂದೆ ಸ್ವಾತಂತ್ರ್ಯ ಹೋರಾಟ ಮಾದರಿಯಲ್ಲಿ ಹೋರಾಟ ಆಗಬೇಕು. ಭೂಮಿ ಹಕ್ಕು ಸಿಗಬೇಕು’ ಎಂದರು.</p>.<p>ಜಿಲ್ಲಾ ಕಾರ್ಯದರ್ಶಿಗಳಾದ ಶ್ಯಾಮನಾಥ ನಾಯ್ಕ, ಸ್ಯಾಮಸನ್ ಮಾತನಾಡಿದರು.</p>.<p>ನಾಗೊಡಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ನಾಯ್ಕ, ಸದಸ್ಯ ದಿಗಂಬರ ದೇಸಾಯಿ, ಪ್ರಮುಖರಾದ ವಿಕಾಸ ವೇಳಿಪ, ಸಂತೋಷ ವೇಳಿಪ, ಜಯಂತ ವೇಳಿಪ, ಮಾಬಳು ಕುಂಡಲಕರ, ಕೃಷ್ಣಾ ಮಿರಾಶಿ, ದಯಾನಂದ ಕುಮಗಾಳಕರ, ಪ್ರಧಾನ ಕಾರ್ಯದರ್ಶಿ ರಾಜೇಶ ಗಾವಡಾ ಭಾಗವಹಿಸಿದ್ದರು.</p>.<p>ಇದಕ್ಕೂ ಮುನ್ನ ಕಿರವತ್ತಿಯಿಂದ 11 ಕಿ.ಮೀ. ಪಾದಯಾತ್ರೆಯಲ್ಲಿ ಬಂದ ಪ್ರತಿಭಟನಕಾರರು ತಹಶೀಲ್ದಾರ್ ಕಚೇರಿ ಮುಂಭಾಗದ ಖಾಲಿ ಇರುವ ಪ್ರದೇಶಗಳಲ್ಲಿ ಅಹೋರಾತ್ರಿ ಧರಣಿ ನಡೆಸಿದರು.</p>.<p>ತಹಶೀಲ್ದಾರ್ ಮಂಜುನಾಥ ಮುನ್ನಳ್ಳಿ ಮನವಿ ಸ್ವೀಕರಿಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಯಿಡಾ</strong>: ತಾಲ್ಲೂಕಿಗೆ ಮೂಲಸೌಕರ್ಯಗಳನ್ನು ಒದಗಿಸುವುವಂತೆ ಆಗ್ರಹಿಸಿ ಕರ್ನಾಟಕ ರೈತ ಪ್ರಾಂತ ಸಂಘದ ಜೊಯಿಡಾ ಘಟಕದ ವತಿಯಿಂದ ಕಿರವತ್ತಿಯಿಂದ ಜೊಯಿಡಾ ತಹಶೀಲ್ದಾರ್ ಕಚೇರಿವರೆಗೆ ಸೋಮವಾರ ಪಾದಯಾತ್ರೆ ನಡೆಸಿ, ಮನವಿ ನೀಡಲಾಯಿತು.</p>.<p>ಘಟಕದ ಅಧ್ಯಕ್ಷ ಪ್ರೇಮಾನಂದ ವೇಳಿಪ, ‘ಮೂಲಸೌಕರ್ಯಕ್ಕೆ ಹೋರಾಟ ಮಾಡುವ ದಿನಗಳು ಬಂದಿದ್ದು ದುಃಖಕರ. ಸರ್ಕಾರಕ್ಕೆ ನಾಚಿಕೆ ಆಗಬೇಕು. ಅನೇಕ ಬಾರಿ ಮನವಿ ನೀಡಿದರು ಪ್ರಯೋಜನ ವಾಗಿಲ್ಲ’ ಎಂದು ಆರೋಪಿಸಿದರು.</p>.<p>‘ಕೆಲವು ಗ್ರಾಮಗಳಿಗೆ ಸರಿಯಾದ ಬಸ್ ಸೌಕರ್ಯ, ಬಿಎಸ್ಎನ್ಎಲ್ ಟವರ್ ಇಲ್ಲ. ನ್ಯಾಯ ಬೆಲೆ ಅಂಗಡಿ ನೀಡಬೇಕು. ಅರಣ್ಯ ಪ್ಯಾಕೇಜ್ ಆಮಿಷ ಬಂದ್ ಮಾಡಬೇಕು. ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಅಧ್ಯಕ್ಷ ತಿಲಕ್ ಗೌಡ ಮಾತನಾಡಿ,‘ ಜೊಯಿಡಾ ಪ್ರದೇಶವನ್ನು ಸರ್ಕಾರ ಸಂಪೂರ್ಣ ಕಡೆಗಣಿಸಿದೆ. ಸ್ವಾತಂತ್ರ್ಯ ನಂತರವೂ ಮೂಲಸೌಕರ್ಯಕ್ಕಾಗಿ ಹೋರಾಟ ಅನಿವಾರ್ಯವಾಗಿದೆ. ಮುಂದೆ ಸ್ವಾತಂತ್ರ್ಯ ಹೋರಾಟ ಮಾದರಿಯಲ್ಲಿ ಹೋರಾಟ ಆಗಬೇಕು. ಭೂಮಿ ಹಕ್ಕು ಸಿಗಬೇಕು’ ಎಂದರು.</p>.<p>ಜಿಲ್ಲಾ ಕಾರ್ಯದರ್ಶಿಗಳಾದ ಶ್ಯಾಮನಾಥ ನಾಯ್ಕ, ಸ್ಯಾಮಸನ್ ಮಾತನಾಡಿದರು.</p>.<p>ನಾಗೊಡಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ನಾಯ್ಕ, ಸದಸ್ಯ ದಿಗಂಬರ ದೇಸಾಯಿ, ಪ್ರಮುಖರಾದ ವಿಕಾಸ ವೇಳಿಪ, ಸಂತೋಷ ವೇಳಿಪ, ಜಯಂತ ವೇಳಿಪ, ಮಾಬಳು ಕುಂಡಲಕರ, ಕೃಷ್ಣಾ ಮಿರಾಶಿ, ದಯಾನಂದ ಕುಮಗಾಳಕರ, ಪ್ರಧಾನ ಕಾರ್ಯದರ್ಶಿ ರಾಜೇಶ ಗಾವಡಾ ಭಾಗವಹಿಸಿದ್ದರು.</p>.<p>ಇದಕ್ಕೂ ಮುನ್ನ ಕಿರವತ್ತಿಯಿಂದ 11 ಕಿ.ಮೀ. ಪಾದಯಾತ್ರೆಯಲ್ಲಿ ಬಂದ ಪ್ರತಿಭಟನಕಾರರು ತಹಶೀಲ್ದಾರ್ ಕಚೇರಿ ಮುಂಭಾಗದ ಖಾಲಿ ಇರುವ ಪ್ರದೇಶಗಳಲ್ಲಿ ಅಹೋರಾತ್ರಿ ಧರಣಿ ನಡೆಸಿದರು.</p>.<p>ತಹಶೀಲ್ದಾರ್ ಮಂಜುನಾಥ ಮುನ್ನಳ್ಳಿ ಮನವಿ ಸ್ವೀಕರಿಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>