‘ಕದಂಬೋತ್ಸವ ಕೇವಲ ಅಧಿಕಾರಿಗಳ, ಜನಪ್ರತಿನಿಧಿಗಳ ಕಾರ್ಯಕ್ರಮ ಆಗಬಾರದು. ಎಲ್ಲ ಪಕ್ಷ, ಸಾಮಾನ್ಯರು ಪಾಲ್ಗೊಳ್ಳುವ ಕಾರ್ಯಕ್ರಮ ಆಗಬೇಕು. ಫೆ.25 ರಂದು ಮುಖ್ಯಮಂತ್ರಿಗಳು ಬನವಾಸಿಯಲ್ಲಿ ಮೂರು ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧುಕೇಶ್ವರ ದೇವಾಲಯದ ನೂತನ ರಥ ಲೋಕಾರ್ಪಣೆ, ₹75 ಕೋಟಿ ವೆಚ್ಚದ ವರದಾ ನದಿ ನೀರನ್ನು ಕೆರೆಗೆ ತುಂಬುವ ಕಾರ್ಯಕ್ರಮ ಉದ್ಘಾಟನೆ ಹಾಗೂ ಕದಂಬೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ’ ಎಂದರು.