‘ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಗೆ ಭೇಟಿ ನೀಡಿದ್ದಾಗ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲಿಲ್ಲ. ಇಲ್ಲಿನ ಅರಣ್ಯ ಭೂಮಿ ಸಮಸ್ಯೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಜನರು ಎದುರಿಸುವ ತೊಂದರೆಗಳಿಗೆ ಪರಿಹಾರ ನೀಡುವ ಸಂಬಂಧ ಸ್ಪಷ್ಟ ಭರವಸೆಯನ್ನೂ ನೀಡಲಿಲ್ಲ. ಜಿಲ್ಲೆಯ ಕುಣಬಿ, ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಪ್ರಯತ್ನಿಸುತ್ತಿದ್ದರೂ ಹತ್ತು ವರ್ಷದಿಂದ ಕೇಂದ್ರ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ’ ಎಂದು ದೂರಿದರು.