<p><strong>ಸಿದ್ದಾಪುರ</strong>: ಅರಣ್ಯವಾಸಿಗಳು ಅರಣ್ಯಭೂಮಿ ಸಾಗುವಳಿ ಜೊತೆಯಲ್ಲಿ ಪರಿಸರ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಭಾಗಿಯಾಗಬೇಕಿದೆ. ಕಾಡು ಮಲೆನಾಡಿನ ಐಶ್ವರ್ಯ ಅಲ್ಲದೇ, ಬದುಕಿನ ಭಾಗವಾಗಿದೆ. ಕಾಡು ಇದ್ದರೇ ನಾಡು ಎಂದು ಚಿಂತಕ ಕಾಗೋಡ ತಿಮ್ಮಪ್ಪ ಹೇಳಿದರು.</p>.<p>ತಾಲ್ಲೂಕಿನ ಬೇಡ್ಕಣಿಯ ಹನುಮಂತ ದೇವಾಲಯದ ಆವರಣದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ದಶಲಕ್ಷ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮರ ಬಿಟ್ಟು ಮಾನವನಿಲ್ಲ, ಮಾನವನಿಲ್ಲದೇ ಮರವಿಲ್ಲ. ಇಂದಿನ ಜೀವನದಲ್ಲಿ ಪರಿಸರ ಜಾಗೃತಿಗೆ ಅರಣ್ಯವಾಸಿಗಳು ಗಿಡ ನೆಡುವ ಕಾರ್ಯ ಪ್ರಶಂಸನೀಯ. ಅರಣ್ಯವಾಸಿಗಳು ಭೂಮಿ ಹಕ್ಕಿನ ಹೋರಾಟಕ್ಕೆ ನೀಡುವ ಪ್ರಾಮುಖ್ಯತೆಯಷ್ಟೇ, ಪರಿಸರ ಉಳಿಸಿ ಬೆಳೆಸುವುದಕ್ಕೂ ಸಮಯ ನೀಡಬೇಕು ಎಂದರು.</p>.<p>ಹಿರಿಯರಾದ ತಿಮ್ಮಣ ನಾಯ್ಕ ಕಡಕೇರಿ, ವಿ.ಎನ್ ನಾಯ್ಕ ಬಿಳಾನೆ, ಜಗದೀಶ ನಾಯ್ಕ ಶಿರಲಗಿ, ಹರಿರರ ನಾಯ್ಕ ಓಂಕಾರ, ರಾಘವೇಂದ್ರ ಕವಂಚೂರು ಮಾತನಾಡಿದರು.</p>.<p>ಗ್ರೀನ್ ಕಾರ್ಡ್ ಪ್ರಮುಖ ದಿನೇಶ ನಾಯ್ಕ ಬೇಡ್ಕಣಿ, ಸುಧಾಕರ ಮಡಿವಾಳ, ಜಯಂತ ನಾಯ್ಕ ಕಾನಗೋಡ, ಕಮಲಾಕರ್ ತ್ಯಾರ್ಸಿ, ಚಂದ್ರು ಚೆನ್ನಯ್ಯ, ರಾಮಚಂದ್ರ ನಾಯ್ಕ ತ್ಯಾಗಲೆಮನೆ ಇದ್ದರು.</p>.<p>ದಶಲಕ್ಷ ಗಿಡ ನೆಡುವ ಅಭಿಯಾನ ಇಂದಿನಿಂದ ಆರಂಭಗೊಂಡು 15 ದಿನಗಳವರೆಗೆ ಜಿಲ್ಲೆಯಾದ್ಯಂತ ಗ್ರಾಮೀಣ ಭಾಗದಲ್ಲಿ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ಅರಣ್ಯವಾಸಿಗಳು ಅರಣ್ಯಭೂಮಿ ಸಾಗುವಳಿ ಜೊತೆಯಲ್ಲಿ ಪರಿಸರ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಭಾಗಿಯಾಗಬೇಕಿದೆ. ಕಾಡು ಮಲೆನಾಡಿನ ಐಶ್ವರ್ಯ ಅಲ್ಲದೇ, ಬದುಕಿನ ಭಾಗವಾಗಿದೆ. ಕಾಡು ಇದ್ದರೇ ನಾಡು ಎಂದು ಚಿಂತಕ ಕಾಗೋಡ ತಿಮ್ಮಪ್ಪ ಹೇಳಿದರು.</p>.<p>ತಾಲ್ಲೂಕಿನ ಬೇಡ್ಕಣಿಯ ಹನುಮಂತ ದೇವಾಲಯದ ಆವರಣದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ದಶಲಕ್ಷ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮರ ಬಿಟ್ಟು ಮಾನವನಿಲ್ಲ, ಮಾನವನಿಲ್ಲದೇ ಮರವಿಲ್ಲ. ಇಂದಿನ ಜೀವನದಲ್ಲಿ ಪರಿಸರ ಜಾಗೃತಿಗೆ ಅರಣ್ಯವಾಸಿಗಳು ಗಿಡ ನೆಡುವ ಕಾರ್ಯ ಪ್ರಶಂಸನೀಯ. ಅರಣ್ಯವಾಸಿಗಳು ಭೂಮಿ ಹಕ್ಕಿನ ಹೋರಾಟಕ್ಕೆ ನೀಡುವ ಪ್ರಾಮುಖ್ಯತೆಯಷ್ಟೇ, ಪರಿಸರ ಉಳಿಸಿ ಬೆಳೆಸುವುದಕ್ಕೂ ಸಮಯ ನೀಡಬೇಕು ಎಂದರು.</p>.<p>ಹಿರಿಯರಾದ ತಿಮ್ಮಣ ನಾಯ್ಕ ಕಡಕೇರಿ, ವಿ.ಎನ್ ನಾಯ್ಕ ಬಿಳಾನೆ, ಜಗದೀಶ ನಾಯ್ಕ ಶಿರಲಗಿ, ಹರಿರರ ನಾಯ್ಕ ಓಂಕಾರ, ರಾಘವೇಂದ್ರ ಕವಂಚೂರು ಮಾತನಾಡಿದರು.</p>.<p>ಗ್ರೀನ್ ಕಾರ್ಡ್ ಪ್ರಮುಖ ದಿನೇಶ ನಾಯ್ಕ ಬೇಡ್ಕಣಿ, ಸುಧಾಕರ ಮಡಿವಾಳ, ಜಯಂತ ನಾಯ್ಕ ಕಾನಗೋಡ, ಕಮಲಾಕರ್ ತ್ಯಾರ್ಸಿ, ಚಂದ್ರು ಚೆನ್ನಯ್ಯ, ರಾಮಚಂದ್ರ ನಾಯ್ಕ ತ್ಯಾಗಲೆಮನೆ ಇದ್ದರು.</p>.<p>ದಶಲಕ್ಷ ಗಿಡ ನೆಡುವ ಅಭಿಯಾನ ಇಂದಿನಿಂದ ಆರಂಭಗೊಂಡು 15 ದಿನಗಳವರೆಗೆ ಜಿಲ್ಲೆಯಾದ್ಯಂತ ಗ್ರಾಮೀಣ ಭಾಗದಲ್ಲಿ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>