<p><strong>ಕಾರವಾರ:</strong> ‘ಕೈಗಾದ ಅಣು ಸ್ಥಾವರದಲ್ಲಿ ನಡೆಯಲಿರುವ ಅಣಕು ಕಾರ್ಯಾಚರಣೆಯು ನೈಜ ವಿಪತ್ತು ಸಂಭವಿಸಿದ ಸನ್ನಿವೇಶ ಸೃಷ್ಟಿಸಿ, ಗರಿಷ್ಠಮಟ್ಟದ ಮುನ್ನೆಚ್ಚರಿಕೆ ಕೈಗೊಳ್ಳುವ ಕಾರ್ಯಾಚರಣೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಣು ಸ್ಥಾವರದಲ್ಲಿ ಡಿ. 11 ರಂದು ನಡೆಯಲಿರುವ ಅಣಕು ಕಾರ್ಯಚರಣೆ ಕುರಿತು ಅವರು ಪೂರ್ವಭಾವಿ ಸಭೆ ನಡೆಸಿದರು.</p>.<p>‘ಅಣು ಕಾರ್ಯಾಚರಣೆ ವೇಳೆ ಕೈಗಾ ಸುತ್ತಮುತ್ತಲಿನ ಜನರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಿ. ಕಾರ್ಯಾಚರಣೆ ಬಗ್ಗೆ ಅವರಿಗೆ ವಿವರ ಮಾಹಿತಿ ಒದಗಿಸಿ. ಕಾರ್ಯಾಚರಣೆಯಿಂದ ಜನರು ಭಯಭೀತರಾಗದಂತೆ ಎಚ್ಚರವಹಿಸಿ’ ಎಂದರು.</p>.<p>‘ಅಣಕು ಕಾರ್ಯಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳು ಮುಂದಾಗಬೇಕು. ಸಮನ್ವಯದ ಕೊರತೆ ಉಂಟಾಗಬಾರದು. ಕಾರ್ಯಚರಣೆ ಸಂದರ್ಭದಲ್ಲಿ ದೈನಂದಿನ ಸಾರ್ವಜನಿಕ ವ್ಯವಸ್ಥೆಗೆ ಯಾವುದೇ ಅಡಚಣೆಯಾಗದಂತೆ ಎಚ್ಚರವಹಿಸಬೇಕು’ ಎಂದರು.</p>.<p>ಕಾರ್ಯಾಚರಣೆಗೆ ಅಗತ್ಯವಿರುವ ವಾಹನಗಳ ವ್ಯವಸ್ಥೆ ಮಾಡುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ, ಕಾರ್ಯಾಚರಣೆ ನಡೆಯುವ ವ್ಯಾಪ್ತಿಯ ಪ್ರದೇಶಗಳಲ್ಲಿ ಸುರಕ್ಷತೆ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಡಿಸಿಎಫ್ ಸಿ.ರವಿಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಎನ್ಪಿಸಿಐಎಲ್ ಹಿರಿಯ ಅಧಿಕಾರಿಗಳಾದ ಅಮೋಲ್ ಶುಕ್ಲಾ, ಚಿತ್ತರಂಜನ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಕೈಗಾದ ಅಣು ಸ್ಥಾವರದಲ್ಲಿ ನಡೆಯಲಿರುವ ಅಣಕು ಕಾರ್ಯಾಚರಣೆಯು ನೈಜ ವಿಪತ್ತು ಸಂಭವಿಸಿದ ಸನ್ನಿವೇಶ ಸೃಷ್ಟಿಸಿ, ಗರಿಷ್ಠಮಟ್ಟದ ಮುನ್ನೆಚ್ಚರಿಕೆ ಕೈಗೊಳ್ಳುವ ಕಾರ್ಯಾಚರಣೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಣು ಸ್ಥಾವರದಲ್ಲಿ ಡಿ. 11 ರಂದು ನಡೆಯಲಿರುವ ಅಣಕು ಕಾರ್ಯಚರಣೆ ಕುರಿತು ಅವರು ಪೂರ್ವಭಾವಿ ಸಭೆ ನಡೆಸಿದರು.</p>.<p>‘ಅಣು ಕಾರ್ಯಾಚರಣೆ ವೇಳೆ ಕೈಗಾ ಸುತ್ತಮುತ್ತಲಿನ ಜನರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಿ. ಕಾರ್ಯಾಚರಣೆ ಬಗ್ಗೆ ಅವರಿಗೆ ವಿವರ ಮಾಹಿತಿ ಒದಗಿಸಿ. ಕಾರ್ಯಾಚರಣೆಯಿಂದ ಜನರು ಭಯಭೀತರಾಗದಂತೆ ಎಚ್ಚರವಹಿಸಿ’ ಎಂದರು.</p>.<p>‘ಅಣಕು ಕಾರ್ಯಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳು ಮುಂದಾಗಬೇಕು. ಸಮನ್ವಯದ ಕೊರತೆ ಉಂಟಾಗಬಾರದು. ಕಾರ್ಯಚರಣೆ ಸಂದರ್ಭದಲ್ಲಿ ದೈನಂದಿನ ಸಾರ್ವಜನಿಕ ವ್ಯವಸ್ಥೆಗೆ ಯಾವುದೇ ಅಡಚಣೆಯಾಗದಂತೆ ಎಚ್ಚರವಹಿಸಬೇಕು’ ಎಂದರು.</p>.<p>ಕಾರ್ಯಾಚರಣೆಗೆ ಅಗತ್ಯವಿರುವ ವಾಹನಗಳ ವ್ಯವಸ್ಥೆ ಮಾಡುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ, ಕಾರ್ಯಾಚರಣೆ ನಡೆಯುವ ವ್ಯಾಪ್ತಿಯ ಪ್ರದೇಶಗಳಲ್ಲಿ ಸುರಕ್ಷತೆ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಡಿಸಿಎಫ್ ಸಿ.ರವಿಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಎನ್ಪಿಸಿಐಎಲ್ ಹಿರಿಯ ಅಧಿಕಾರಿಗಳಾದ ಅಮೋಲ್ ಶುಕ್ಲಾ, ಚಿತ್ತರಂಜನ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>