ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ: ಕಳಚೆ ಸೊಸೈಟಿ ಅಧ್ಯಕ್ಷರಾಗಿ ಭಾಗ್ವತ್

Published 1 ಜುಲೈ 2023, 12:48 IST
Last Updated 1 ಜುಲೈ 2023, 12:48 IST
ಅಕ್ಷರ ಗಾತ್ರ

ಯಲ್ಲಾಪುರ: ತಾಲ್ಲೂಕಿನ ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಉಮಾಮಹೇಶ್ವರ ಭಾಗ್ವತ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಭಟ್ಟ ಕೋಣೆಮನೆ ಗುರುವಾರ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಉಮಾಮಹೇಶ್ವರ ಭಾಗ್ವತ, ಅವಿರೋಧವಾಗಿ ಆಯ್ಕೆಮಾಡಿದ ಎಲ್ಲ ನಿರ್ದೇಶಕರಿಗೆ ಅಭಿನಂದಿಸಿದರು. ಸಂಸ್ಥೆಯನ್ನು ಮುಂದಿನ ದಿನಗಳಲ್ಲಿ ಪ್ರಗತಿ ಪಥದದಲ್ಲಿ ನಡೆಸಿಕೊಂಡು ಹೋಗಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ಸಹಕಾರಿ ತತ್ವದಲ್ಲಿ ನಡೆಯೋಣ ಎಂದರು.

ಸಹಕಾರಿ ಅಭಿವೃದ್ಧಿ ಅಧಿಕಾರಿ ಶಕ್ತಿಪ್ರಸಾದ್ ಎಸ್. ಜಂಬಗಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸಂಘದ ಪ್ರಭಾರಿ ಮುಖ್ಯಕಾರ್ಯನಿರ್ವಾಹಕ ದತ್ತಾತ್ರೇಯ ಹೆಗಡೆ ಹಾಗೂ ಸಿಬ್ಬಂದಿ ಹೂಗುಚ್ಚ ನೀಡಿ ಅಭಿನಂದಿಸಿದರು. ಸೂರ್ಯನಾರಾಯಣ ಸಾಂಬ ಭಟ್ಟ ಸಂಘದ ಅಭಿವೃದ್ಧಿ ಕುರಿತು ಮಾತನಾಡಿದರು.

ರಾಘವೇಂದ್ರ ಭಟ್ಟ 
ರಾಘವೇಂದ್ರ ಭಟ್ಟ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT