<p><strong>ಕುಮಟಾ</strong>: ‘ಹೆಚ್ಚು ಆಮ್ಲಜನಕ ಉತ್ಪಾದಿಸುವ ಕಾಂಡ್ಲಾ ವನ ಸಾಗರ ತೀರಗಳ ರಕ್ಷಾ ಕವಚ ಇದ್ದಂತೆ. ಕಾಂಡ್ಲಾ ಪರಿಸರವನ್ನೊಳಗೊಂಡ ಅಘನಾಶಿನಿ ಹಿನ್ನೀರು ಪ್ರದೇಶ ವಿಶಿಷ್ಟ ಜೀವ ವೈವಿಧ್ಯ ಸಂಕುಲಗಳಿಂದ ಜಗತ್ತಿನ ಗಮನ ಸೆಳೆದಿದೆ' ಎಂದು ಕುಮಟಾ ಎ.ಸಿ.ಎಫ್ ಕೃಷ್ಣ ಗೌಡ ಹೇಳಿದರು.</p>.<p>ತಾಲ್ಲೂಕಿನ ಕಿಮಾನಿಯ ಅಘನಾಶಿನಿ ನದಿ ತೀರದಲ್ಲಿ ಬುಧವಾರ ಆಸ್ಟರ್ ಡಿ.ಎಂ.ಫೌಂಡೇಶನ್, ಸ್ಕೊಡ್ವೆಸ್ ಸಂಸ್ಥೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾಂಡ್ಲಾ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಶೇ 65 ಕ್ಕಿಂತ ಹೆಚ್ಚಿನ ಪ್ರಮಾಣದ ಅನಾಹುತಗಳನ್ನು ತಡೆಯುವ ಸಾಮರ್ಥ್ಯ ಕಾಂಡ್ಲಾ ವನಗಳಿಗಿವೆ. ಆದ್ದರಿಂದ ಸಹಜವಾಗಿ ಪ್ರಾಕೃತಿಕ ವಿಕೋಪ ತಡೆಯುವ ಕಾಂಡ್ಲಾ ಸಂರಕ್ಷಣಾ ಕಾರ್ಯ ಕರಾವಳಿ ಹಾಗೂ ನದಿ ಹಿನ್ನೀರು ಪ್ರದೇಶಗಳಲ್ಲಿ ಸಾರ್ವತ್ರಿಕಗೊಳ್ಳಬೇಕು’ ಎಂದರು.</p>.<p>ಆಸ್ಟರ್ ಡಿ.ಎಂ.ಫೌಂಡೇಶನ್ ಮುಖ್ಯಸ್ಥ ರೋಹನ್ ಪ್ರಾಂಕೋ, ‘ದೇಶದ ಪಶ್ಚಿಮ ಸಾಗರ ತೀರ ಪ್ರದೇಶಗಳ ಸಂರಕ್ಷಣೆಯಲ್ಲಿ ಕಾಂಡ್ಲಾ ನೆಡುತೋಪುಗಳು ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ ಅವುಗಳನ್ನು ಸಂರಕ್ಷಿಸುವ ಅವಶ್ಯಕತೆಯಿದೆ’ ಎಂದರು.</p>.<p>ಸ್ಕೊಡ್ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ, ‘ಕಾಂಡ್ಲಾ ಸಂರಕ್ಷಣಾ ಅಭಿಯಾನದಲ್ಲಿ 5 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ’ ಎಂದರು.</p>.<p>ಸ್ಕೊಡ್ವೆಸ್ನ ಪ್ರಶಾಂತ ನಾಯಕ, ಗಂಗಾಧರ ನಾಯ್ಕ, ಮಿರ್ಜಾನ ಆರ್.ಎಫ್.ಒ ರಾಜು ನಾಯ್ಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಮಟಾ</strong>: ‘ಹೆಚ್ಚು ಆಮ್ಲಜನಕ ಉತ್ಪಾದಿಸುವ ಕಾಂಡ್ಲಾ ವನ ಸಾಗರ ತೀರಗಳ ರಕ್ಷಾ ಕವಚ ಇದ್ದಂತೆ. ಕಾಂಡ್ಲಾ ಪರಿಸರವನ್ನೊಳಗೊಂಡ ಅಘನಾಶಿನಿ ಹಿನ್ನೀರು ಪ್ರದೇಶ ವಿಶಿಷ್ಟ ಜೀವ ವೈವಿಧ್ಯ ಸಂಕುಲಗಳಿಂದ ಜಗತ್ತಿನ ಗಮನ ಸೆಳೆದಿದೆ' ಎಂದು ಕುಮಟಾ ಎ.ಸಿ.ಎಫ್ ಕೃಷ್ಣ ಗೌಡ ಹೇಳಿದರು.</p>.<p>ತಾಲ್ಲೂಕಿನ ಕಿಮಾನಿಯ ಅಘನಾಶಿನಿ ನದಿ ತೀರದಲ್ಲಿ ಬುಧವಾರ ಆಸ್ಟರ್ ಡಿ.ಎಂ.ಫೌಂಡೇಶನ್, ಸ್ಕೊಡ್ವೆಸ್ ಸಂಸ್ಥೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾಂಡ್ಲಾ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಶೇ 65 ಕ್ಕಿಂತ ಹೆಚ್ಚಿನ ಪ್ರಮಾಣದ ಅನಾಹುತಗಳನ್ನು ತಡೆಯುವ ಸಾಮರ್ಥ್ಯ ಕಾಂಡ್ಲಾ ವನಗಳಿಗಿವೆ. ಆದ್ದರಿಂದ ಸಹಜವಾಗಿ ಪ್ರಾಕೃತಿಕ ವಿಕೋಪ ತಡೆಯುವ ಕಾಂಡ್ಲಾ ಸಂರಕ್ಷಣಾ ಕಾರ್ಯ ಕರಾವಳಿ ಹಾಗೂ ನದಿ ಹಿನ್ನೀರು ಪ್ರದೇಶಗಳಲ್ಲಿ ಸಾರ್ವತ್ರಿಕಗೊಳ್ಳಬೇಕು’ ಎಂದರು.</p>.<p>ಆಸ್ಟರ್ ಡಿ.ಎಂ.ಫೌಂಡೇಶನ್ ಮುಖ್ಯಸ್ಥ ರೋಹನ್ ಪ್ರಾಂಕೋ, ‘ದೇಶದ ಪಶ್ಚಿಮ ಸಾಗರ ತೀರ ಪ್ರದೇಶಗಳ ಸಂರಕ್ಷಣೆಯಲ್ಲಿ ಕಾಂಡ್ಲಾ ನೆಡುತೋಪುಗಳು ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ ಅವುಗಳನ್ನು ಸಂರಕ್ಷಿಸುವ ಅವಶ್ಯಕತೆಯಿದೆ’ ಎಂದರು.</p>.<p>ಸ್ಕೊಡ್ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ, ‘ಕಾಂಡ್ಲಾ ಸಂರಕ್ಷಣಾ ಅಭಿಯಾನದಲ್ಲಿ 5 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ’ ಎಂದರು.</p>.<p>ಸ್ಕೊಡ್ವೆಸ್ನ ಪ್ರಶಾಂತ ನಾಯಕ, ಗಂಗಾಧರ ನಾಯ್ಕ, ಮಿರ್ಜಾನ ಆರ್.ಎಫ್.ಒ ರಾಜು ನಾಯ್ಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>