ಶಿರಸಿಯಲ್ಲಿ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ಪತ್ರಕರ್ತರ ಜೊತೆ ಮಾತನಾಡಿ, ನಾಯಕರ ಜೊತೆ ಕೆಲ ಚಿಕ್ಕಪುಟ್ಟ ಭಿನ್ನಮತ ಇತ್ತು. ಅದನ್ನು ಶಮನ ಮಾಡಲು ಪಕ್ಷದ ವರಿಷ್ಠರಿಗೆ ಸಾಧ್ಯವಾಗಲಿಲ್ಲ. ಸಾಕಷ್ಟು ಮಾತುಕತೆಯ ನಂತರವೂ ಯಾವುದೇ ಪ್ರಯೋಜನವಾಗಲಿಲ್ಲ. ಇಂಥ ಸನ್ನಿವೇಶದಲ್ಲಿ ಪಕ್ಷ ಬಿಡುವುದು ಇಲ್ಲವೇ ಪಕ್ಷಾಂತರವೇ ಉಳಿದ ಮಾರ್ಗವಾಗಿದೆ. ಹೀಗಾಗಿ ರಾಜೀನಾಮೆ ನೀಡಿದ್ದು, ಕ್ಷೇತ್ರದ ಜನರ ಅಭಿಪ್ರಾಯದಂತೆ ಕಾಂಗ್ರೆಸ್ ಸೇರಲಿದ್ದೇನೆ ಎಂದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಕ್ಷೇತ್ರಕ್ಕೆ ತೆರಳಿ ಜನರ ಬಳಿ ಬಹುಮತ ಕೇಳುತ್ತೇನೆ. ಈಗಾಗಲೇ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಅಂತಿಮವಾಗಿದ್ದು, ನಿಶ್ಚಿತವಾಗಿ ಗೆಲುವು ಪಡೆಯುತ್ತೇನೆ. ಜೆಡಿಎಸ್ ಪಕ್ಷಕ್ಕೆ ಭವಿಷ್ಯವಿಲ್ಲ ಎಂದರು.