ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಕೆ

Last Updated 18 ಏಪ್ರಿಲ್ 2023, 15:34 IST
ಅಕ್ಷರ ಗಾತ್ರ

ಯಲ್ಲಾಪುರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮ ಹೆಬ್ಬಾರ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ಅವರಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಪಟ್ಟಣದ ಗ್ರಾಮ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ನಡೆಸಲಾಯಿತು. ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿ ಭಾಗದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ತೆರೆದ ಜೀಪಿನಲ್ಲಿ ಶಿವರಾಮ ಹೆಬ್ಬಾರ, ಇತರ ಮುಕಂಡರು ಸಾಗಿದರು.

ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಿವರಾಮ ಹೆಬ್ಬಾರ, ‘ಅಭಿವೃದ್ಧಿ ಮತ್ತು ನೀತಿ ಆಧಾರಿತ ಚುನಾವಣೆ ಇದಾಗಿರಲಿದ್ದು, ಬಿಜೆಪಿಯನ್ನು ಜನರು ಬೆಂಬಲಿಸುವ ವಿಶ್ವಾಸವಿದೆ. ಸಿಕ್ಕ ಅಧಿಕಾರವನ್ನು ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕವಾಗಿ ಬಳಕೆ ಮಾಡಿರುವ ವಿಶ್ವಾಸವಿದೆ’ ಎಂದರು.

ಪ್ರಮುಖರಾದ ವನಜಾಕ್ಷಿ ಹೆಬ್ಬಾರ, ಗೋಪಾಲಕೃಷ್ಣ ಗಾಂವ್ಕರ, ಶಾಂತಾರಾಮ ಸಿದ್ದಿ, ವೆಂಕಟೇಶ ನಾಯಕ, ಎಲ್.ಟಿ.ಪಾಟೀಲ್, ವಿವೇಕ ಹೆಬ್ಬಾರ್, ಬಾಲಚಂದ್ರ ನಾಯಕ, ದೇವು ಪಾಟೀಲ್, ರವಿಗೌಡ ಪಾಟೀಲ್, ಅಶೋಕ ಚಲವಾದಿ ಇದ್ದರು.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಆನಂದ ಗಣಪತಿ ಭಟ್ಟ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT