<p><strong>ಕಾರವಾರ</strong>: ಬೆಳಗಾವಿಯಲ್ಲಿ ಮರಾಠಿಗರ ದಬ್ಬಾಳಿಕೆ ಖಂಡಿಸಿ ವಾಟಾಳ್ ಚಳವಳಿ ಪಕ್ಷ ಹಾಗೂ ಇತರೆ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ಗೆ ಜಿಲ್ಲೆಯಲ್ಲಿ ಸ್ಪಂದನೆ ದೊರೆಯಲಿಲ್ಲ.</p><p>ಜಿಲ್ಲೆಯಲ್ಲಿ ಯಾವೊಂದೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಲಿಲ್ಲ. ಸಿದ್ದಾಪುರದಲ್ಲಿ ಕನ್ನಡಪರ ಸಂಘಟನೆಗಳ ಬೆರಳೆಣಿಕೆಯಷ್ಟು ಕಾರ್ಯಕರ್ತರು ಮರಾಠಿಗರ ದಬ್ಬಾಳಿಕೆ ವಿರೋಧಿಸಿ ಮನವಿ ಸಲ್ಲಿಸಿದರು.</p><p>ಕಾರವಾರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲ ನಗರ, ಪಟ್ಟಣಗಳಲ್ಲಿ ವ್ಯಾಪಾರ, ಸಾರಿಗೆ ಸಂಚಾರ, ಜನರ ಓಡಾಟ ಎಂದಿನಂತೆಯೇ ಇತ್ತು. ಬಂದ್ ಕರೆ ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲೂ ಪರಿಣಾಮ ಬೀರಲಿಲ್ಲ. ನಸುಕಿನಿಂದಲೇ ಬಸ್, ಆಟೊ, ಮ್ಯಾಕ್ಸಿ ಕ್ಯಾಬ್ಗಳು ಎಂದಿನಂತೆ ಸಂಚಾರ ನಡೆಸಿದವು.</p>.<p>ಅಂಗಡಿಗಳು ಎಲ್ಲೆಡೆ ತೆರೆದಿದ್ದವು. ನಾಲ್ಕನೇ ಶನಿವಾರ ಆಗಿದ್ದರಿಂದ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಬಾಗಿಲು ಮುಚ್ಚಿದ್ದವು. ಸರ್ಕಾರಿ ರಜೆ ಇದ್ದ ಕಾರಣ ಕಾರವಾರದಲ್ಲಿ ಜನರ ಓಡಾಟ ಕಡಿಮೆ ಇತ್ತು. ಉಳಿದಂತೆ ಮಾರುಕಟ್ಟೆಯಲ್ಲಿ ವಹಿವಾಟು ನಡೆಯಿತು.</p>.<p>‘ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಸಮಯದಲ್ಲಿ ಬಂದ್ಗೆ ಕರೆ ನೀಡಿದ್ದು ಸಮಂಜಸ ಎನಿಸಲಿಲ್ಲ. ಈ ಕಾರಣಕ್ಕೆ ಬಂದ್ಗೆ ಸಂಘಟನೆ ಬೆಂಬಲಿಸಲಿಲ್ಲ’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಅಕ್ಷಯ ಬಿ.ಎಸ್ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಬೆಳಗಾವಿಯಲ್ಲಿ ಮರಾಠಿಗರ ದಬ್ಬಾಳಿಕೆ ಖಂಡಿಸಿ ವಾಟಾಳ್ ಚಳವಳಿ ಪಕ್ಷ ಹಾಗೂ ಇತರೆ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ಗೆ ಜಿಲ್ಲೆಯಲ್ಲಿ ಸ್ಪಂದನೆ ದೊರೆಯಲಿಲ್ಲ.</p><p>ಜಿಲ್ಲೆಯಲ್ಲಿ ಯಾವೊಂದೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಲಿಲ್ಲ. ಸಿದ್ದಾಪುರದಲ್ಲಿ ಕನ್ನಡಪರ ಸಂಘಟನೆಗಳ ಬೆರಳೆಣಿಕೆಯಷ್ಟು ಕಾರ್ಯಕರ್ತರು ಮರಾಠಿಗರ ದಬ್ಬಾಳಿಕೆ ವಿರೋಧಿಸಿ ಮನವಿ ಸಲ್ಲಿಸಿದರು.</p><p>ಕಾರವಾರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲ ನಗರ, ಪಟ್ಟಣಗಳಲ್ಲಿ ವ್ಯಾಪಾರ, ಸಾರಿಗೆ ಸಂಚಾರ, ಜನರ ಓಡಾಟ ಎಂದಿನಂತೆಯೇ ಇತ್ತು. ಬಂದ್ ಕರೆ ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲೂ ಪರಿಣಾಮ ಬೀರಲಿಲ್ಲ. ನಸುಕಿನಿಂದಲೇ ಬಸ್, ಆಟೊ, ಮ್ಯಾಕ್ಸಿ ಕ್ಯಾಬ್ಗಳು ಎಂದಿನಂತೆ ಸಂಚಾರ ನಡೆಸಿದವು.</p>.<p>ಅಂಗಡಿಗಳು ಎಲ್ಲೆಡೆ ತೆರೆದಿದ್ದವು. ನಾಲ್ಕನೇ ಶನಿವಾರ ಆಗಿದ್ದರಿಂದ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಬಾಗಿಲು ಮುಚ್ಚಿದ್ದವು. ಸರ್ಕಾರಿ ರಜೆ ಇದ್ದ ಕಾರಣ ಕಾರವಾರದಲ್ಲಿ ಜನರ ಓಡಾಟ ಕಡಿಮೆ ಇತ್ತು. ಉಳಿದಂತೆ ಮಾರುಕಟ್ಟೆಯಲ್ಲಿ ವಹಿವಾಟು ನಡೆಯಿತು.</p>.<p>‘ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಸಮಯದಲ್ಲಿ ಬಂದ್ಗೆ ಕರೆ ನೀಡಿದ್ದು ಸಮಂಜಸ ಎನಿಸಲಿಲ್ಲ. ಈ ಕಾರಣಕ್ಕೆ ಬಂದ್ಗೆ ಸಂಘಟನೆ ಬೆಂಬಲಿಸಲಿಲ್ಲ’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಅಕ್ಷಯ ಬಿ.ಎಸ್ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>