<p><strong>ಕಾರವಾರ</strong>: ಬಡವರಿಗೆ ಮಂಜೂರಾದ ಮನೆಯಲ್ಲೂ ಲಂಚ ಕೇಳುವ ಹೀನ ಸ್ಥಿತಿಗೆ ರಾಜ್ಯ ಸರ್ಕಾರ ಇಳಿದಿರುವುದು ಅರಾಜಕತೆಯ ಪರಮಾವಧಿ. ಇಂತ ಭ್ರಷ್ಟ ಸರ್ಕಾರ ನಡೆಸುವ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ' ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು.</p>.ಕೇಂದ್ರದ ಮಾರ್ಗಸೂಚಿಯಂತೆ ವಸತಿ ಮೀಸಲಾತಿ: ಮುಖ್ಯಮಂತ್ರಿ ಸಿದ್ದರಾಮಯ್ಯ.<p>'ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್.ಪಾಟೀಲ ಬಹಿರಂಗಪಡಿಸಿದ್ದಾರೆ. ಇದು ಕಾಂಗ್ರೆಸ್ ಭ್ರಷ್ಟಾಚಾರ ಆಡಳಿತದ ಮುಖವಾಡ ಕಳಚಿದೆ' ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ದೂರಿದರು.</p><p>'ವಸತಿ ಯೋಜನೆ ಮನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಟು ಮೀಸಲಾತಿ ಜಾರಿ ಮಾಡಲುಹೊರಟಿರುವುದು ಓಲೈಕೆಯ ಪರಮಾವಧಿ. ಇದು ಸಿಎಂ, ಡಿಸಿಎಂ ಅವರ ಬೇಕಾಬಿಟ್ಟಿ ಆಡಳಿತಕ್ಕೆ ಹಿಡಿದ ಕೈಗನ್ನಡಿ' ಎಂದು ಆರೋಪಿಸಿದರು.</p>.ವಸತಿ ಯೋಜನೆಗಳಲ್ಲಿ ಶೇ15 ಮೀಸಲಾತಿ; ಕೇಂದ್ರದ ಮಾದರಿ ಅನುಕರಣೆ: ಸಚಿವ ಜಮೀರ್.<p>'ಸಚಿವ ಸಂಪುಟ ಜಾತಿ ಜನಗಣತಿ ವರದಿ ತಿರಸ್ಕರಿಸಿದ್ದರೆ ಮರು ಗಣತಿ ನಡೆಸುವ ಬಗ್ಗೆ ನಿರ್ಣಯಿಸಬಹುದಿತ್ತು. ಆದರೆ, ಕಾಂಗ್ರೆಸ್ ಹೈಕಮಾಂಡ್ ತಿರಸ್ಕರಿಸಿದ ಕಾರಣಕ್ಕೆ ರಾಜ್ಯ ಸರ್ಕಾರ ಮರುಗಣತಿ ಮಾಡಿ ಜನರ ತೆರಿಗೆ ಹಣ ಪೋಲು ಮಾಡಲು ಹೊರಟಿರುವುದು ಮೂರ್ಖತನದ ಪರಮಾವಧಿ' ಎಂದರು</p><p>'ರಾಜ್ಯ ಸರ್ಕಾರ ಹೊಸದಾಗಿ ಜಾತಿ ಜನಗಣತಿ ಮಾಡುವ ಬದಲು ಕೇಂದ್ರ ಸರ್ಕಾರ ಮಾಡಲಿರುವ ಗಣತಿಗೆ ಸಹಕಾರ ನೀಡಬೇಕು. ಅಗತ್ಯ ಸಲಹೆಗಳಿದ್ದರೆ ನೀಡಲಿ' ಎಂದರು.</p> .ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಾವು: ದಾಖಲಾಗದ 70 ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಬಡವರಿಗೆ ಮಂಜೂರಾದ ಮನೆಯಲ್ಲೂ ಲಂಚ ಕೇಳುವ ಹೀನ ಸ್ಥಿತಿಗೆ ರಾಜ್ಯ ಸರ್ಕಾರ ಇಳಿದಿರುವುದು ಅರಾಜಕತೆಯ ಪರಮಾವಧಿ. ಇಂತ ಭ್ರಷ್ಟ ಸರ್ಕಾರ ನಡೆಸುವ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ' ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು.</p>.ಕೇಂದ್ರದ ಮಾರ್ಗಸೂಚಿಯಂತೆ ವಸತಿ ಮೀಸಲಾತಿ: ಮುಖ್ಯಮಂತ್ರಿ ಸಿದ್ದರಾಮಯ್ಯ.<p>'ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್.ಪಾಟೀಲ ಬಹಿರಂಗಪಡಿಸಿದ್ದಾರೆ. ಇದು ಕಾಂಗ್ರೆಸ್ ಭ್ರಷ್ಟಾಚಾರ ಆಡಳಿತದ ಮುಖವಾಡ ಕಳಚಿದೆ' ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ದೂರಿದರು.</p><p>'ವಸತಿ ಯೋಜನೆ ಮನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಟು ಮೀಸಲಾತಿ ಜಾರಿ ಮಾಡಲುಹೊರಟಿರುವುದು ಓಲೈಕೆಯ ಪರಮಾವಧಿ. ಇದು ಸಿಎಂ, ಡಿಸಿಎಂ ಅವರ ಬೇಕಾಬಿಟ್ಟಿ ಆಡಳಿತಕ್ಕೆ ಹಿಡಿದ ಕೈಗನ್ನಡಿ' ಎಂದು ಆರೋಪಿಸಿದರು.</p>.ವಸತಿ ಯೋಜನೆಗಳಲ್ಲಿ ಶೇ15 ಮೀಸಲಾತಿ; ಕೇಂದ್ರದ ಮಾದರಿ ಅನುಕರಣೆ: ಸಚಿವ ಜಮೀರ್.<p>'ಸಚಿವ ಸಂಪುಟ ಜಾತಿ ಜನಗಣತಿ ವರದಿ ತಿರಸ್ಕರಿಸಿದ್ದರೆ ಮರು ಗಣತಿ ನಡೆಸುವ ಬಗ್ಗೆ ನಿರ್ಣಯಿಸಬಹುದಿತ್ತು. ಆದರೆ, ಕಾಂಗ್ರೆಸ್ ಹೈಕಮಾಂಡ್ ತಿರಸ್ಕರಿಸಿದ ಕಾರಣಕ್ಕೆ ರಾಜ್ಯ ಸರ್ಕಾರ ಮರುಗಣತಿ ಮಾಡಿ ಜನರ ತೆರಿಗೆ ಹಣ ಪೋಲು ಮಾಡಲು ಹೊರಟಿರುವುದು ಮೂರ್ಖತನದ ಪರಮಾವಧಿ' ಎಂದರು</p><p>'ರಾಜ್ಯ ಸರ್ಕಾರ ಹೊಸದಾಗಿ ಜಾತಿ ಜನಗಣತಿ ಮಾಡುವ ಬದಲು ಕೇಂದ್ರ ಸರ್ಕಾರ ಮಾಡಲಿರುವ ಗಣತಿಗೆ ಸಹಕಾರ ನೀಡಬೇಕು. ಅಗತ್ಯ ಸಲಹೆಗಳಿದ್ದರೆ ನೀಡಲಿ' ಎಂದರು.</p> .ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಾವು: ದಾಖಲಾಗದ 70 ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>