<p><strong>ಕಾರವಾರ: </strong>ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಜಯ ಸಾಧಿಸಿದ್ದಾರೆ. ಅವರು ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರಿಗಿಂತ 183 ಹೆಚ್ಚು ಮತಗಳನ್ನು ಪಡೆದರು. ಈ ಮೂಲಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.</p>.<p>ಒಟ್ಟು 2907 ಮತಗಳು ಚಲಾವಣೆಯಾಗಿದ್ದು, ಉಳ್ವೇಕರ್ 1514 ಮತಗಳನ್ನು ಗಳಿಸಿದರು. ಭೀಮಣ್ಣ ನಾಯ್ಕ 1331 ಮತಗಳನ್ನು ಪಡೆದರು. ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿಗಳಾದ ಈಶ್ವರ ಗೌಡ ನಾಲ್ಕು, ದತ್ತಾತ್ರೇಯ ನಾಯ್ಕ ಮೂರು ಮತ್ತು ಸೋಮಶೇಖರ ಗೌಡ ಒಂದು ಮತಗಳನ್ನಷ್ಟೇ ಗಳಿಸಿದರು.</p>.<p>ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದರಿಂದ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲ ನಗರದ ಮಾಲಾದೇವಿ ಮೈದಾನದಲ್ಲಿ ಸೇರಿರುವ ನೂರಾರು ಕಾರ್ಯಕರ್ತರು, ಪಟಾಕಿ ಸಿಡಿಸಿ, ಪಕ್ಷ ಮತ್ತು ಗಣಪತಿ ಉಳ್ವೇಕರ್ ಪರ ಘೋಷಣೆ ಕೂಗಿ ವಿಜಯೋತ್ಸವದಲ್ಲಿ ತೊಡಗಿದ್ದಾರೆ.</p>.<p>ಉತ್ತರ ಕನ್ನಡ ಕ್ಷೇತ್ರಕ್ಕೆ ಐದು ಬಾರಿ ವಿಧಾನಪರಿಷತ್ ಚುನಾವಣೆಯಾಗಿದ್ದು, ಎರಡು ಬಾರಿ ಜನತಾ ಪರಿವಾರ ಹಾಗೂ ಕಾಂಗ್ರೆಸ್ ಮೂರು ಸಲ ಗೆಲುವು ಕಂಡಿತ್ತು. ಈ ಸಲದ ಗೆಲುವಿನೊಂದಿಗೆ ಬಿಜೆಪಿ ಇಲ್ಲಿ ಮೊದಲ ಬಾರಿಗೆ ಯಶಸ್ಸು ಕಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಜಯ ಸಾಧಿಸಿದ್ದಾರೆ. ಅವರು ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರಿಗಿಂತ 183 ಹೆಚ್ಚು ಮತಗಳನ್ನು ಪಡೆದರು. ಈ ಮೂಲಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.</p>.<p>ಒಟ್ಟು 2907 ಮತಗಳು ಚಲಾವಣೆಯಾಗಿದ್ದು, ಉಳ್ವೇಕರ್ 1514 ಮತಗಳನ್ನು ಗಳಿಸಿದರು. ಭೀಮಣ್ಣ ನಾಯ್ಕ 1331 ಮತಗಳನ್ನು ಪಡೆದರು. ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿಗಳಾದ ಈಶ್ವರ ಗೌಡ ನಾಲ್ಕು, ದತ್ತಾತ್ರೇಯ ನಾಯ್ಕ ಮೂರು ಮತ್ತು ಸೋಮಶೇಖರ ಗೌಡ ಒಂದು ಮತಗಳನ್ನಷ್ಟೇ ಗಳಿಸಿದರು.</p>.<p>ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದರಿಂದ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲ ನಗರದ ಮಾಲಾದೇವಿ ಮೈದಾನದಲ್ಲಿ ಸೇರಿರುವ ನೂರಾರು ಕಾರ್ಯಕರ್ತರು, ಪಟಾಕಿ ಸಿಡಿಸಿ, ಪಕ್ಷ ಮತ್ತು ಗಣಪತಿ ಉಳ್ವೇಕರ್ ಪರ ಘೋಷಣೆ ಕೂಗಿ ವಿಜಯೋತ್ಸವದಲ್ಲಿ ತೊಡಗಿದ್ದಾರೆ.</p>.<p>ಉತ್ತರ ಕನ್ನಡ ಕ್ಷೇತ್ರಕ್ಕೆ ಐದು ಬಾರಿ ವಿಧಾನಪರಿಷತ್ ಚುನಾವಣೆಯಾಗಿದ್ದು, ಎರಡು ಬಾರಿ ಜನತಾ ಪರಿವಾರ ಹಾಗೂ ಕಾಂಗ್ರೆಸ್ ಮೂರು ಸಲ ಗೆಲುವು ಕಂಡಿತ್ತು. ಈ ಸಲದ ಗೆಲುವಿನೊಂದಿಗೆ ಬಿಜೆಪಿ ಇಲ್ಲಿ ಮೊದಲ ಬಾರಿಗೆ ಯಶಸ್ಸು ಕಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>