<p><strong>ಶಿರಸಿ: </strong>ತಾಲ್ಲೂಕಿನ ಗಡಿಗ್ರಾಮ ಮೊಗವಳ್ಳಿಗೆ ನೆರೆ ಭೀತಿ ಎದುರಾಗಿದೆ. ಸಾಗರ ಭಾಗದಲ್ಲಿಯೂ ಅಧಿಕ ಮಳೆ ಸುರಿಯುತ್ತಿರುವ ಪರಿಣಾಮ ವರದಾ ನದಿ ಉಕ್ಕಿದೆ.</p>.<p>ಮೊಗವಳ್ಳಿಯ ಸಣ್ಣಮನೆ ಭಾಗದ ಹಲವು ಮನೆಗಳ ಆವರಣಕ್ಕೆ ನೀರು ನುಗ್ಗಿದೆ. ಮಣ್ಣಿನ ಗೋಡೆಯ ಕೆಲ ಮನೆಗಳು ಕುಸಿದು ಬೀಳುವ ಆತಂಕ ಎದುರಾಗಿದೆ. ನೂರಾರು ಎಕರೆ ಕೃಷಿಭೂಮಿ ಸಂಪೂರ್ಣ ಜಲಾವೃತವಾಗಿದೆ.</p>.<p>ಭಾಶಿ ಭಾಗದಲ್ಲಿಯೂ ನಿರಂತರ ಮಳೆ ಸುರಿಯುತ್ತಿದ್ದು ನೀರಿನ ಮಟ್ಟ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.</p>.<p>‘ನೀರಿನ ಮಟ್ಟ ಇನ್ನಷ್ಟು ಏರಿಕೆಯಾದರೆ ಗ್ರಾಮಸ್ಥರನ್ನು ಹೊಸಕೇರಿಯ ಗಂಜಿಕೇಂದ್ರಕ್ಕೆ ಸ್ಥಳಾನಮತರಿಸಲಾಗುವುದು’ ಎಂದು ಕಂದಾಯ ನಿರೀಕ್ಷಕ ಡಿ.ಆರ್.ಬೆಳ್ಳಿಮನೆ ತಿಳಿಸಿದ್ದಾರೆ.<br /><br />‘ನೆರೆ ಪರಿಸ್ಥಿತಿಯ ಮುನ್ಸೂಚನೆ ಇದ್ದರೂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿಲ್ಲ. ಕೊನೆಕ್ಷಣದಲ್ಲಿ ಸ್ಥಳಾಂತರ ಕಷ್ಟ. ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು’ ಎಂದು ಭಾಶಿ ಗ್ರಾಮ ಪಂಚಾಯ್ತಿ ಸದಸ್ಯ ವಿನಯ ಗೌಡರ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ತಾಲ್ಲೂಕಿನ ಗಡಿಗ್ರಾಮ ಮೊಗವಳ್ಳಿಗೆ ನೆರೆ ಭೀತಿ ಎದುರಾಗಿದೆ. ಸಾಗರ ಭಾಗದಲ್ಲಿಯೂ ಅಧಿಕ ಮಳೆ ಸುರಿಯುತ್ತಿರುವ ಪರಿಣಾಮ ವರದಾ ನದಿ ಉಕ್ಕಿದೆ.</p>.<p>ಮೊಗವಳ್ಳಿಯ ಸಣ್ಣಮನೆ ಭಾಗದ ಹಲವು ಮನೆಗಳ ಆವರಣಕ್ಕೆ ನೀರು ನುಗ್ಗಿದೆ. ಮಣ್ಣಿನ ಗೋಡೆಯ ಕೆಲ ಮನೆಗಳು ಕುಸಿದು ಬೀಳುವ ಆತಂಕ ಎದುರಾಗಿದೆ. ನೂರಾರು ಎಕರೆ ಕೃಷಿಭೂಮಿ ಸಂಪೂರ್ಣ ಜಲಾವೃತವಾಗಿದೆ.</p>.<p>ಭಾಶಿ ಭಾಗದಲ್ಲಿಯೂ ನಿರಂತರ ಮಳೆ ಸುರಿಯುತ್ತಿದ್ದು ನೀರಿನ ಮಟ್ಟ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.</p>.<p>‘ನೀರಿನ ಮಟ್ಟ ಇನ್ನಷ್ಟು ಏರಿಕೆಯಾದರೆ ಗ್ರಾಮಸ್ಥರನ್ನು ಹೊಸಕೇರಿಯ ಗಂಜಿಕೇಂದ್ರಕ್ಕೆ ಸ್ಥಳಾನಮತರಿಸಲಾಗುವುದು’ ಎಂದು ಕಂದಾಯ ನಿರೀಕ್ಷಕ ಡಿ.ಆರ್.ಬೆಳ್ಳಿಮನೆ ತಿಳಿಸಿದ್ದಾರೆ.<br /><br />‘ನೆರೆ ಪರಿಸ್ಥಿತಿಯ ಮುನ್ಸೂಚನೆ ಇದ್ದರೂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿಲ್ಲ. ಕೊನೆಕ್ಷಣದಲ್ಲಿ ಸ್ಥಳಾಂತರ ಕಷ್ಟ. ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು’ ಎಂದು ಭಾಶಿ ಗ್ರಾಮ ಪಂಚಾಯ್ತಿ ಸದಸ್ಯ ವಿನಯ ಗೌಡರ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>