<p>ಕಾರವಾರ: ಜಿಲ್ಲೆಯ ವಿವಿಧ ವಲಯ ವ್ಯಾಪ್ತಿಗಳಲ್ಲಿ ವಶಕ್ಕೆ ಪಡೆಯಲಾಗಿದ್ದ ₹3 ಲಕ್ಷ ಮೌಲ್ಯದ 11.26 ಕೆ.ಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಈಚೆಗೆ ನಾಶಪಡಿಸಿದರು.</p>.<p>ಅಂಕೋಲಾ ತಾಲ್ಲೂಕಿನ ಅಗಸೂರು ಸಮೀಪದಲ್ಲಿರುವ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಇನ್ಸಿನರೇಟರ್ ಯಂತ್ರದ ಮೂಲಕ ಗಾಂಜಾ ದಾಸ್ತಾನನ್ನು ಸುಟ್ಟು, ನಾಶಪಡಿಸಲಾಯಿತು.</p>.<p>‘ಶಿರಸಿ ವಲಯ ವ್ಯಾಪ್ತಿಯಲ್ಲಿ 4, ದಾಂಡೇಲಿ ಹಾಗೂ ಕುಮಟಾ ವಲಯ ವ್ಯಾಪ್ತಿಯ ತಲಾ 1 ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಒಣಗಾಂಜಾವನ್ನು ಮಾದಕ ವಸ್ತು ವಿಲೇವಾರಿ ಸಮಿತಿ ಹಸ್ತಾಂತರಿಸಲಾಯಿತು. ಕೋರ್ಟ್ ಆದೇಶದಂತೆ ಅವುಗಳನ್ನು ವೈಜ್ಞಾನಿಕ ವಿಧಾನದಿಂದ ನಾಶಪಡಿಸಲಾಯಿತು’ ಎಂದು ಅಬಕಾರಿ ಉಪ ಆಯುಕ್ತ ಅಮಾನುಲ್ಲಾ ಖಾನ್ತಿಳಿಸಿದರು.</p>.<p>ವಿಲೇವಾರಿ ಪ್ರಕ್ರಿಯೆ ವೇಳೆ ಮಂಗಳೂರು ವಿಭಾಗ ಅಬಕಾರಿ ಜಂಟಿ ಆಯುಕ್ತ ಎ.ಎಲ್.ನಾಗೇಶ, ಉಡುಪಿ ಅಬಕಾರಿ ಉಪ ಆಯುಕ್ತ ಟಿ.ಎಂ.ಶ್ರೀನಿವಾಸ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-20-1153051287</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ಜಿಲ್ಲೆಯ ವಿವಿಧ ವಲಯ ವ್ಯಾಪ್ತಿಗಳಲ್ಲಿ ವಶಕ್ಕೆ ಪಡೆಯಲಾಗಿದ್ದ ₹3 ಲಕ್ಷ ಮೌಲ್ಯದ 11.26 ಕೆ.ಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಈಚೆಗೆ ನಾಶಪಡಿಸಿದರು.</p>.<p>ಅಂಕೋಲಾ ತಾಲ್ಲೂಕಿನ ಅಗಸೂರು ಸಮೀಪದಲ್ಲಿರುವ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಇನ್ಸಿನರೇಟರ್ ಯಂತ್ರದ ಮೂಲಕ ಗಾಂಜಾ ದಾಸ್ತಾನನ್ನು ಸುಟ್ಟು, ನಾಶಪಡಿಸಲಾಯಿತು.</p>.<p>‘ಶಿರಸಿ ವಲಯ ವ್ಯಾಪ್ತಿಯಲ್ಲಿ 4, ದಾಂಡೇಲಿ ಹಾಗೂ ಕುಮಟಾ ವಲಯ ವ್ಯಾಪ್ತಿಯ ತಲಾ 1 ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಒಣಗಾಂಜಾವನ್ನು ಮಾದಕ ವಸ್ತು ವಿಲೇವಾರಿ ಸಮಿತಿ ಹಸ್ತಾಂತರಿಸಲಾಯಿತು. ಕೋರ್ಟ್ ಆದೇಶದಂತೆ ಅವುಗಳನ್ನು ವೈಜ್ಞಾನಿಕ ವಿಧಾನದಿಂದ ನಾಶಪಡಿಸಲಾಯಿತು’ ಎಂದು ಅಬಕಾರಿ ಉಪ ಆಯುಕ್ತ ಅಮಾನುಲ್ಲಾ ಖಾನ್ತಿಳಿಸಿದರು.</p>.<p>ವಿಲೇವಾರಿ ಪ್ರಕ್ರಿಯೆ ವೇಳೆ ಮಂಗಳೂರು ವಿಭಾಗ ಅಬಕಾರಿ ಜಂಟಿ ಆಯುಕ್ತ ಎ.ಎಲ್.ನಾಗೇಶ, ಉಡುಪಿ ಅಬಕಾರಿ ಉಪ ಆಯುಕ್ತ ಟಿ.ಎಂ.ಶ್ರೀನಿವಾಸ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-20-1153051287</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>