<p>ಕಾರವಾರ: ‘ಎಸ್ಐಆರ್ ಕುರಿತು ಕಾರ್ಯಕರ್ತರು ಎಚ್ಚರ ವಹಿಸಬೇಕು. ಬಿಎಲ್ಎ–2 ಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಜನಮಾನ್ಯರಿಗೆ ನೀಡಿದ ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.</p>.<p>ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲಗಳ ಕಾರ್ಯಕರ್ತರಿಗೆ ಶನಿವಾರ ಇಲ್ಲಿನ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಎಲ್ಎ 2 ಮತ್ತು ಬೂತ್ ಅಧ್ಯಕ್ಷರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪಕ್ಷ ಬೆಳೆದಂತೆ ಪ್ರತಿಯೊಬ್ಬ ಕಾರ್ಯಕರ್ತರೂ ಬೆಳೆಯುತ್ತಾರೆ. ಪಕ್ಷ ಇನ್ನಷ್ಟು ಬೆಳವಣಿಗೆ ಸಾಧಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದರು.</p>.<p>ಪಕ್ಷದ ನಗರ ಘಟಕದ ಅಧ್ಯಕ್ಷ ನಾಗೇಶ ಕುರ್ಡೇಕರ ಪ್ರಾಸ್ತಾವಿಕ ಮಾತನಾಡಿ, ‘ಪಕ್ಷ ಸಂಘಟನೆಯಲ್ಲಿ ಬೂತ್ ಮಟ್ಟದ ಸಂಘಟನೆ ಪ್ರಮುಖ ಪಾತ್ರ ವಹಿಸಲಿದೆ’ ಎಂದು ತಿಳಿಸಿದರು.</p>.<p>ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ್ ಗುನಗಿ ಮಾತನಾಡಿ, ‘ಪ್ರತಿಯೊಬ್ಬ ಕಾರ್ಯಕರ್ತರು ತಮಗೆ ನೀಡಿದ ಜವಾಬ್ದಾರಿಯನ್ನು ಅರಿತು ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದರು.</p>.<p>ಪಕ್ಷದ ಪ್ರಮುಖರಾದ ಗಜಾನನ ಗುನಗಾ, ಸುನಿಲ್ ಸೋನಿ, ಕಿಶನ್ ಕಾಂಬಳೆ, ಉದಯ ನಾಯ್ಕ, ಸೂರಜ್ ದೇಸಾಯಿ, ಅಶೋಕ ಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-20-770437429</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ಎಸ್ಐಆರ್ ಕುರಿತು ಕಾರ್ಯಕರ್ತರು ಎಚ್ಚರ ವಹಿಸಬೇಕು. ಬಿಎಲ್ಎ–2 ಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಜನಮಾನ್ಯರಿಗೆ ನೀಡಿದ ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.</p>.<p>ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲಗಳ ಕಾರ್ಯಕರ್ತರಿಗೆ ಶನಿವಾರ ಇಲ್ಲಿನ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಎಲ್ಎ 2 ಮತ್ತು ಬೂತ್ ಅಧ್ಯಕ್ಷರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪಕ್ಷ ಬೆಳೆದಂತೆ ಪ್ರತಿಯೊಬ್ಬ ಕಾರ್ಯಕರ್ತರೂ ಬೆಳೆಯುತ್ತಾರೆ. ಪಕ್ಷ ಇನ್ನಷ್ಟು ಬೆಳವಣಿಗೆ ಸಾಧಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದರು.</p>.<p>ಪಕ್ಷದ ನಗರ ಘಟಕದ ಅಧ್ಯಕ್ಷ ನಾಗೇಶ ಕುರ್ಡೇಕರ ಪ್ರಾಸ್ತಾವಿಕ ಮಾತನಾಡಿ, ‘ಪಕ್ಷ ಸಂಘಟನೆಯಲ್ಲಿ ಬೂತ್ ಮಟ್ಟದ ಸಂಘಟನೆ ಪ್ರಮುಖ ಪಾತ್ರ ವಹಿಸಲಿದೆ’ ಎಂದು ತಿಳಿಸಿದರು.</p>.<p>ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ್ ಗುನಗಿ ಮಾತನಾಡಿ, ‘ಪ್ರತಿಯೊಬ್ಬ ಕಾರ್ಯಕರ್ತರು ತಮಗೆ ನೀಡಿದ ಜವಾಬ್ದಾರಿಯನ್ನು ಅರಿತು ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದರು.</p>.<p>ಪಕ್ಷದ ಪ್ರಮುಖರಾದ ಗಜಾನನ ಗುನಗಾ, ಸುನಿಲ್ ಸೋನಿ, ಕಿಶನ್ ಕಾಂಬಳೆ, ಉದಯ ನಾಯ್ಕ, ಸೂರಜ್ ದೇಸಾಯಿ, ಅಶೋಕ ಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-20-770437429</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>