<p><strong>ಕಾರವಾರ: </strong>ಕೋಣೆನಾಲೆಯ ಕೊಳಚೆ ನೀರಿನ ಶುದ್ಧೀಕರಣಕ್ಕೆ ಇನ್ನುಮುಂದೆ ಆಧುನಿಕ ತಂತ್ರಜ್ಞಾನ ಬಳಕೆಯಾಗಲಿದೆ. ನಗರಸಭೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಯಿತು.</p>.<p>ಮಂಗಳೂರಿನ ಆಪಾವನಿ ಎನ್ವಿರಾನ್ಮೆಂಟ್ ಸೊಲ್ಯೂಷನ್ಸ್ ಸಂಸ್ಥೆಯು ಮೆಂಬ್ರೇನ್ ಬಯೊ ರಿಯಾಕ್ಟರ್ ಅಳವಡಿಸಲಿದೆ. ಸುಮಾರು ₹ 1.70 ಕೋಟಿ ವೆಚ್ಚವಾಗಲಿದೆ ಎಂದು ನಗರಸಭೆ ಆಯುಕ್ತ ಆರ್.ಪಿ.ನಾಯ್ಕ ಮಾಹಿತಿ ನೀಡಿದರು. ಅಲ್ಲದೇ ನಾಲೆಯಲ್ಲಿ ಪೈಪ್ಲೈನ್ ಅಳವಡಿಸಿ ಅದರಲ್ಲಿ ಕೊಳಚೆ ನೀರು ಹರಿಯಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ₹ 38 ಲಕ್ಷ ವೆಚ್ಚದ ಈ ಕಾಮಗಾರಿಗೂ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.</p>.<p class="Subhead"><strong>ಕೃತಕ ಬುದ್ಧಿಮತ್ತೆ ಬಳಕೆ:</strong>‘ಕೋಣೆನಾಲೆಯ ಶುದ್ಧೀಕರಣ ಘಟಕವನ್ನು ಜಪಾನ್ನಿಂದ ತರಿಸಲಾಗಿರುವ ಸಲಕರಣೆಗಳ ಮೂಲಕ ನಿರ್ಮಿಸಲಾಗಿದೆ. ಮೊದಲ ಹಂತದಲ್ಲಿ 1,600 ಕೆ.ಎಲ್.ಡಿ ಸಾಮರ್ಥ್ಯದ ಒಂದು ಘಟಕ ನಿರ್ಮಾಣವಾಗಿದೆ.ಒಟ್ಟು 1.60 ಎಂ.ಎಲ್.ಡಿ ನೀರನ್ನು ಶುದ್ಧೀಕರಿಸುವ ಘಟಕ ಇದಾಗಿದೆ’ ಎಂದುಆಪಾವನಿ ಎನ್ವಿರಾನ್ಮೆಂಟ್ ಸೊಲ್ಯೂಷನ್ಸ್ ಸಂಸ್ಥೆಯ ಇಂಜಿನಿಯರ್ ಸಭೆಗೆ ತಿಳಿಸಿದರು.</p>.<p>‘ಕೃತಕ ಬುದ್ಧಿಮತ್ತೆ ಬಳಸಿ ಇದು ಕಾರ್ಯನಿರ್ವಹಿಸುತ್ತದೆ. ನಗರಸಭೆಯಿಂದಲೇ ಅದರ ಕಾರ್ಯ ನಿಭಾಯಿಸಲು ಸಾಧ್ಯವಿದೆ. ಸಂಸ್ಥೆಯು ಐದು ವರ್ಷ ನಿರ್ವಹಣೆ ಮಾಡಲಿದೆ’ ಎಂದರು.</p>.<p>ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹಾಗೂ ಅಧ್ಯಕ್ಷ ಡಾ.ಪಿಕಳೆ ಮಾತನಾಡಿ, ‘ವರದಿಯಲ್ಲಿ ತಿಳಿಸಿದಂತೆಯೇ ಕೆಲಸಗಳಾಗಬೇಕು. ಸೂಕ್ತ ರೀತಿಯಲ್ಲಿ ನಿರ್ವಹಣೆಯೂ ಆಗಬೇಕು’ ಎಂದು ತಾಕೀತು ಮಾಡಿದರು.</p>.<p>ಸದಸ್ಯರಾದ ಸಂದೀಪ ತಳೇಕರ್, ಮಕ್ಬುಲ್ ಶೇಖ್, ‘ನಗರದಲ್ಲಿ ಕೆಲವು ವರ್ಷಗಳ ಹಿಂದೆ ನಿರ್ಮಿಸಲಾದ ಒಳಚರಂಡಿಗಳು ಸಂಪೂರ್ಣ ದುರಸ್ತಿಯಾಗಬೇಕಿದೆ. ಇದೇ ಸಂದರ್ಭದಲ್ಲಿ ನಗರದ ಎಲ್ಲ ವಾರ್ಡ್ಗಳಿಗೆ ಒಳಚರಂಡಿ ಕಲ್ಪಿಸಬೇಕು. ಈ ಕುರಿತು ನಗರಸಭೆಯಿಂದ ತಾಂತ್ರಿಕ ಅಧ್ಯಯನ ಕೈಗೊಂಡು, ವಿಶೇಷ ಅನುದಾನ ಮಂಜೂರಿಗೆ ಸರ್ಕಾರಕ್ಕೆ ಮನವಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿ ಆರ್.ಪಿ.ನಾಯ್ಕ, ‘ನಗರದ ಒಳಚರಂಡಿ ಕಾಮಗಾರಿಗಳ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಲಾಗಿದೆ. ದುರಸ್ತಿಗೆ ₹ 1.70 ಕೋಟಿ ಹಾಗೂ ಹೊಸ ಕಾಮಗಾರಿಗೆ ₹ 16 ಕೋಟಿ ಪ್ರಸ್ತಾವ ಮಾಡಲಾಗಿದೆ’ ಎಂದರು.</p>.<p>ಸದಸ್ಯ ಮಕ್ಬೂಲ್ ಶೇಖ್ ಮಾತನಾಡಿ, ‘ನಗರದ ಜಿಲ್ಲಾ ಗ್ರಂಥಾಲಯದಲ್ಲಿ ವ್ಯವಸ್ಥೆಗಳು ಸರಿಯಿಲ್ಲ. ಜನರಿಂದ ಪಡೆಯುವ ತೆರಿಗೆ ಹಣ ಸದ್ಬಳಕೆಯಾಗುತ್ತಿಲ್ಲ’ ಎಂದು ಆಕ್ಷೇಪಿಸಿದರು. ಈ ಕುರಿತು ಮುಂದಿನ ಸಭೆಯಲ್ಲಿ ಚರ್ಚಿಸುವುದಾಗಿ ಅಧ್ಯಕ್ಷ ಡಾ.ನಿತಿನ್ ಪಿಕಳೆ ತಿಳಿಸಿದರು.</p>.<p>ಸದಸ್ಯ ಸಂದೀಪ ತಳೇಕರ್ ಮಾತನಾಡಿ, ‘ನಗರದಲ್ಲಿ ವಾಹನ ನಿಲುಗಡೆ ನಿಯಮ ಉಲ್ಲಂಘಿಸಿದ ಕಟ್ಟಡಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಅದನ್ನು ಮಾಡದೇ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಶುಲ್ಕ ವಿಧಿಸುವ ನಿಯಮ ಜಾರಿ ಮಾಡಬಾರದು’ ಎಂದು ಆಗ್ರಹಿಸಿದರು.</p>.<p>ನಗರಸಭೆ ಉಪಾಧ್ಯಕ್ಷ ಪ್ರಕಾಶ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಕೋಣೆನಾಲೆಯ ಕೊಳಚೆ ನೀರಿನ ಶುದ್ಧೀಕರಣಕ್ಕೆ ಇನ್ನುಮುಂದೆ ಆಧುನಿಕ ತಂತ್ರಜ್ಞಾನ ಬಳಕೆಯಾಗಲಿದೆ. ನಗರಸಭೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಯಿತು.</p>.<p>ಮಂಗಳೂರಿನ ಆಪಾವನಿ ಎನ್ವಿರಾನ್ಮೆಂಟ್ ಸೊಲ್ಯೂಷನ್ಸ್ ಸಂಸ್ಥೆಯು ಮೆಂಬ್ರೇನ್ ಬಯೊ ರಿಯಾಕ್ಟರ್ ಅಳವಡಿಸಲಿದೆ. ಸುಮಾರು ₹ 1.70 ಕೋಟಿ ವೆಚ್ಚವಾಗಲಿದೆ ಎಂದು ನಗರಸಭೆ ಆಯುಕ್ತ ಆರ್.ಪಿ.ನಾಯ್ಕ ಮಾಹಿತಿ ನೀಡಿದರು. ಅಲ್ಲದೇ ನಾಲೆಯಲ್ಲಿ ಪೈಪ್ಲೈನ್ ಅಳವಡಿಸಿ ಅದರಲ್ಲಿ ಕೊಳಚೆ ನೀರು ಹರಿಯಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ₹ 38 ಲಕ್ಷ ವೆಚ್ಚದ ಈ ಕಾಮಗಾರಿಗೂ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.</p>.<p class="Subhead"><strong>ಕೃತಕ ಬುದ್ಧಿಮತ್ತೆ ಬಳಕೆ:</strong>‘ಕೋಣೆನಾಲೆಯ ಶುದ್ಧೀಕರಣ ಘಟಕವನ್ನು ಜಪಾನ್ನಿಂದ ತರಿಸಲಾಗಿರುವ ಸಲಕರಣೆಗಳ ಮೂಲಕ ನಿರ್ಮಿಸಲಾಗಿದೆ. ಮೊದಲ ಹಂತದಲ್ಲಿ 1,600 ಕೆ.ಎಲ್.ಡಿ ಸಾಮರ್ಥ್ಯದ ಒಂದು ಘಟಕ ನಿರ್ಮಾಣವಾಗಿದೆ.ಒಟ್ಟು 1.60 ಎಂ.ಎಲ್.ಡಿ ನೀರನ್ನು ಶುದ್ಧೀಕರಿಸುವ ಘಟಕ ಇದಾಗಿದೆ’ ಎಂದುಆಪಾವನಿ ಎನ್ವಿರಾನ್ಮೆಂಟ್ ಸೊಲ್ಯೂಷನ್ಸ್ ಸಂಸ್ಥೆಯ ಇಂಜಿನಿಯರ್ ಸಭೆಗೆ ತಿಳಿಸಿದರು.</p>.<p>‘ಕೃತಕ ಬುದ್ಧಿಮತ್ತೆ ಬಳಸಿ ಇದು ಕಾರ್ಯನಿರ್ವಹಿಸುತ್ತದೆ. ನಗರಸಭೆಯಿಂದಲೇ ಅದರ ಕಾರ್ಯ ನಿಭಾಯಿಸಲು ಸಾಧ್ಯವಿದೆ. ಸಂಸ್ಥೆಯು ಐದು ವರ್ಷ ನಿರ್ವಹಣೆ ಮಾಡಲಿದೆ’ ಎಂದರು.</p>.<p>ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹಾಗೂ ಅಧ್ಯಕ್ಷ ಡಾ.ಪಿಕಳೆ ಮಾತನಾಡಿ, ‘ವರದಿಯಲ್ಲಿ ತಿಳಿಸಿದಂತೆಯೇ ಕೆಲಸಗಳಾಗಬೇಕು. ಸೂಕ್ತ ರೀತಿಯಲ್ಲಿ ನಿರ್ವಹಣೆಯೂ ಆಗಬೇಕು’ ಎಂದು ತಾಕೀತು ಮಾಡಿದರು.</p>.<p>ಸದಸ್ಯರಾದ ಸಂದೀಪ ತಳೇಕರ್, ಮಕ್ಬುಲ್ ಶೇಖ್, ‘ನಗರದಲ್ಲಿ ಕೆಲವು ವರ್ಷಗಳ ಹಿಂದೆ ನಿರ್ಮಿಸಲಾದ ಒಳಚರಂಡಿಗಳು ಸಂಪೂರ್ಣ ದುರಸ್ತಿಯಾಗಬೇಕಿದೆ. ಇದೇ ಸಂದರ್ಭದಲ್ಲಿ ನಗರದ ಎಲ್ಲ ವಾರ್ಡ್ಗಳಿಗೆ ಒಳಚರಂಡಿ ಕಲ್ಪಿಸಬೇಕು. ಈ ಕುರಿತು ನಗರಸಭೆಯಿಂದ ತಾಂತ್ರಿಕ ಅಧ್ಯಯನ ಕೈಗೊಂಡು, ವಿಶೇಷ ಅನುದಾನ ಮಂಜೂರಿಗೆ ಸರ್ಕಾರಕ್ಕೆ ಮನವಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿ ಆರ್.ಪಿ.ನಾಯ್ಕ, ‘ನಗರದ ಒಳಚರಂಡಿ ಕಾಮಗಾರಿಗಳ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಲಾಗಿದೆ. ದುರಸ್ತಿಗೆ ₹ 1.70 ಕೋಟಿ ಹಾಗೂ ಹೊಸ ಕಾಮಗಾರಿಗೆ ₹ 16 ಕೋಟಿ ಪ್ರಸ್ತಾವ ಮಾಡಲಾಗಿದೆ’ ಎಂದರು.</p>.<p>ಸದಸ್ಯ ಮಕ್ಬೂಲ್ ಶೇಖ್ ಮಾತನಾಡಿ, ‘ನಗರದ ಜಿಲ್ಲಾ ಗ್ರಂಥಾಲಯದಲ್ಲಿ ವ್ಯವಸ್ಥೆಗಳು ಸರಿಯಿಲ್ಲ. ಜನರಿಂದ ಪಡೆಯುವ ತೆರಿಗೆ ಹಣ ಸದ್ಬಳಕೆಯಾಗುತ್ತಿಲ್ಲ’ ಎಂದು ಆಕ್ಷೇಪಿಸಿದರು. ಈ ಕುರಿತು ಮುಂದಿನ ಸಭೆಯಲ್ಲಿ ಚರ್ಚಿಸುವುದಾಗಿ ಅಧ್ಯಕ್ಷ ಡಾ.ನಿತಿನ್ ಪಿಕಳೆ ತಿಳಿಸಿದರು.</p>.<p>ಸದಸ್ಯ ಸಂದೀಪ ತಳೇಕರ್ ಮಾತನಾಡಿ, ‘ನಗರದಲ್ಲಿ ವಾಹನ ನಿಲುಗಡೆ ನಿಯಮ ಉಲ್ಲಂಘಿಸಿದ ಕಟ್ಟಡಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಅದನ್ನು ಮಾಡದೇ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಶುಲ್ಕ ವಿಧಿಸುವ ನಿಯಮ ಜಾರಿ ಮಾಡಬಾರದು’ ಎಂದು ಆಗ್ರಹಿಸಿದರು.</p>.<p>ನಗರಸಭೆ ಉಪಾಧ್ಯಕ್ಷ ಪ್ರಕಾಶ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>