<p><strong>ಕಾರವಾರ:</strong> ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ನಡೆದ ಕೊಲೆ ಯತ್ನದ ಪ್ರಮುಖ ಆರೋಪಿಗಳಾದ ಗೋವಾದ ಮೊಹಮ್ಮದ್ ಇಮ್ರಾನ ಸಲ್ಮಾನಿ (46) ಮತ್ತು ಹಾವೇರಿ ಜಿಲ್ಲೆ ಹಿರೇಕೆರೂರಿನ ಅಬ್ದುಲ್ ಗನಿ (31) ಸುಳಿವು ನೀಡಿದವರಿಗೆ ₹25 ಸಾವಿರ ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿದೆ.</p>.<p>ಮಾ.24ರಂದು ಅಂಕೋಲಾ ಪಟ್ಟಣದಲ್ಲಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನ ನಡೆದಿತ್ತು. ‘ಘಟನೆ ನಡೆದ ದಿನದಿಂದಲೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಅವರ ಸುಳಿವು ಮಾಹಿತಿ ಇದ್ದಲ್ಲಿ ಪೊಲೀಸ್ ನಿರೀಕ್ಷಕರನ್ನು (9480805258) ಸಂಪರ್ಕಿಸಬಹುದು.</p>.<p>ಮಾಹಿತಿದಾರರಿಗೆ ತಲಾ ₹25 ಸಾವಿರ ಬಹುಮಾನ ನೀಡಲಾಗುವುದು ಹಾಗೂ ಮಾಹಿತಿದಾರರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು’ ಎಂದು ಪ್ರಕರಣದ ತನಿಖಾಧಿಕಾರಿಯಾಗಿರುವ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-20-177028794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ನಡೆದ ಕೊಲೆ ಯತ್ನದ ಪ್ರಮುಖ ಆರೋಪಿಗಳಾದ ಗೋವಾದ ಮೊಹಮ್ಮದ್ ಇಮ್ರಾನ ಸಲ್ಮಾನಿ (46) ಮತ್ತು ಹಾವೇರಿ ಜಿಲ್ಲೆ ಹಿರೇಕೆರೂರಿನ ಅಬ್ದುಲ್ ಗನಿ (31) ಸುಳಿವು ನೀಡಿದವರಿಗೆ ₹25 ಸಾವಿರ ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿದೆ.</p>.<p>ಮಾ.24ರಂದು ಅಂಕೋಲಾ ಪಟ್ಟಣದಲ್ಲಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನ ನಡೆದಿತ್ತು. ‘ಘಟನೆ ನಡೆದ ದಿನದಿಂದಲೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಅವರ ಸುಳಿವು ಮಾಹಿತಿ ಇದ್ದಲ್ಲಿ ಪೊಲೀಸ್ ನಿರೀಕ್ಷಕರನ್ನು (9480805258) ಸಂಪರ್ಕಿಸಬಹುದು.</p>.<p>ಮಾಹಿತಿದಾರರಿಗೆ ತಲಾ ₹25 ಸಾವಿರ ಬಹುಮಾನ ನೀಡಲಾಗುವುದು ಹಾಗೂ ಮಾಹಿತಿದಾರರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು’ ಎಂದು ಪ್ರಕರಣದ ತನಿಖಾಧಿಕಾರಿಯಾಗಿರುವ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-20-177028794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>