<p><strong>ಕಾರವಾರ:</strong> ತಾಲ್ಲೂಕಿನ ಅಸ್ನೋಟಿಯಲ್ಲಿ ಕಟ್ಟಡ ಕಾರ್ಮಿಕರೊಬ್ಬರನ್ನು ಶನಿವಾರ ತಡರಾತ್ರಿ ಹತ್ಯೆ ಮಾಡಲಾಗಿದೆ.</p><p>ಗುಜರಾತ್ ಮೂಲದ ಕಾರ್ಮಿಕ ದೆವೇಶ ರಾಥೋಡ (28) ಹತ್ಯೆಯಾದವ. ಆತನೊಂದಿಗೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.</p><p>'ಬಾಗಲಕೋಟೆ ಜಿಲ್ಲೆ ಶಿರೂರು ಹಳ್ಳಿಯ ಶಿವಾನಂದ ನಾಯ್ಕರ (45) ಮತ್ತು ಹಾವೇರಿ ಜಿಲ್ಲೆ ಸವಣೂರಿನ ಮರಿಯಪ್ಪಾ ಹರಿಜನ (43) ಎಂಬುವವರನ್ನು ಬಂಧಿಸಲಾಗಿದೆ. ಮದ್ಯದ ಮತ್ತಿನಲ್ಲಿ ನಡೆದ ಗಲಾಟೆಯಲ್ಲಿ ಹತ್ಯೆ ನಡೆದಿರುವ ಶಂಕೆ ಇದೆ' ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಾರ್ಮಿಕರು ಅಸ್ನೋಟಿಯಲ್ಲಿ ನಿವೃತ್ತ ನೌಕರ ಕಮಲಕಾರ ಗಡಕರ ಎಂಬುವವರು ಕಟ್ಟಿಸುತ್ತಿದ್ದ ಮನೆ ನಿರ್ಮಾಣಕ್ಕೆ ಗಾರೆ ಕೆಲಸ ಮಾಡಲು ಬಂದವರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ತಾಲ್ಲೂಕಿನ ಅಸ್ನೋಟಿಯಲ್ಲಿ ಕಟ್ಟಡ ಕಾರ್ಮಿಕರೊಬ್ಬರನ್ನು ಶನಿವಾರ ತಡರಾತ್ರಿ ಹತ್ಯೆ ಮಾಡಲಾಗಿದೆ.</p><p>ಗುಜರಾತ್ ಮೂಲದ ಕಾರ್ಮಿಕ ದೆವೇಶ ರಾಥೋಡ (28) ಹತ್ಯೆಯಾದವ. ಆತನೊಂದಿಗೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.</p><p>'ಬಾಗಲಕೋಟೆ ಜಿಲ್ಲೆ ಶಿರೂರು ಹಳ್ಳಿಯ ಶಿವಾನಂದ ನಾಯ್ಕರ (45) ಮತ್ತು ಹಾವೇರಿ ಜಿಲ್ಲೆ ಸವಣೂರಿನ ಮರಿಯಪ್ಪಾ ಹರಿಜನ (43) ಎಂಬುವವರನ್ನು ಬಂಧಿಸಲಾಗಿದೆ. ಮದ್ಯದ ಮತ್ತಿನಲ್ಲಿ ನಡೆದ ಗಲಾಟೆಯಲ್ಲಿ ಹತ್ಯೆ ನಡೆದಿರುವ ಶಂಕೆ ಇದೆ' ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಾರ್ಮಿಕರು ಅಸ್ನೋಟಿಯಲ್ಲಿ ನಿವೃತ್ತ ನೌಕರ ಕಮಲಕಾರ ಗಡಕರ ಎಂಬುವವರು ಕಟ್ಟಿಸುತ್ತಿದ್ದ ಮನೆ ನಿರ್ಮಾಣಕ್ಕೆ ಗಾರೆ ಕೆಲಸ ಮಾಡಲು ಬಂದವರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>