<p>ಕಾರವಾರ: ‘ಜಿಲ್ಲೆಯ ವ್ಯಾಪ್ತಿಯಲ್ಲಿರುವ ರೆಸಾರ್ಟ್, ಹೋಂ ಸ್ಟೇಗಳಲ್ಲಿ ಮಾದಕ ವಸ್ತು ಸೇವನೆ ಚಟುವಟಿಕೆ ನಡೆಸದಂತೆ ನಿಗಾ ಇರಿಸುವ ಕೆಲಸ ಆಗಬೇಕು’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು.</p>.<p>‘ಮಾದಕ ವಸ್ತುಗಳ ಬಳಕೆ ಮತ್ತು ಸರಬರಾಜು ತಡೆಯಲು ಶಂಕಾಸ್ಪದವಾಗಿ ಕಂಡು ಬರುವ ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ಅನಿರೀಕ್ಷಿತ ತಪಾಸಣೆಗಳನ್ನು ಕೈಗೊಳ್ಳಿ’ ಎಂದು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್ಕಾರ್ಡ್ ಸಮಿತಿ ಸಭೆಯಲ್ಲಿ ಆದೇಶಿಸಿದರು.</p>.<p>‘ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ 18ರಿಂದ 35 ವಯೋಮಿತಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ದುಶ್ಚಟಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದೆ. ಯುವಜನರಲ್ಲಿ ಮಾದಕ ವಸ್ತು ಸೇವನೆ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು’ ಎಂದರು.</p>.<p>‘ಔಷಧ ಮಳಿಗೆಗಳಲ್ಲಿ ವೈದ್ಯರ ಸಲಹೆ ಚೀಟಿ ಇಲ್ಲದೇ ಔಷಧಗಳನ್ನು ಸರಬರಾಜು ಮಾಡದಂತೆ ಸೂಚನೆ ನೀಡಬೇಕು. ಈ ಕುರಿತು ಭಿತ್ತಿಪತ್ರ ಅಳವಡಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು. ನೋವು ನಿವಾರಕ ಮಾತ್ರೆಗಳ ಮಾರಾಟದ ಮೇಲೆಯೂ ನಿಗಾ ಇರಿಸಬೇಕು’ ಎಂದು ಜಿಲ್ಲಾ ಔಷಧ ನಿಯಂತ್ರಕರಿಗೆ ಸೂಚಿಸಿದರು.</p>.<p>‘ಕಳೆದ ನಾಲ್ಕು ತಿಂಗಳಿನಲ್ಲಿ ಮಾದಕ ವಸ್ತು ಸರಬರಾಜಿನ 8 ಪ್ರಕರಣ ದಾಖಲಿಸಿದ್ದು, 14 ಮಂದಿಯನ್ನು ಬಂಧಿಸಿ ₹1.49 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಮಾದಕ ವಸ್ತು ಸೇವನೆಯ 97 ಪ್ರಕರಣಗಳಲ್ಲಿ 112 ಮಂದಿಯನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದರು.</p>.<p>ಸಭೆಯಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಬಂದರು, ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-20-2081338770</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ಜಿಲ್ಲೆಯ ವ್ಯಾಪ್ತಿಯಲ್ಲಿರುವ ರೆಸಾರ್ಟ್, ಹೋಂ ಸ್ಟೇಗಳಲ್ಲಿ ಮಾದಕ ವಸ್ತು ಸೇವನೆ ಚಟುವಟಿಕೆ ನಡೆಸದಂತೆ ನಿಗಾ ಇರಿಸುವ ಕೆಲಸ ಆಗಬೇಕು’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು.</p>.<p>‘ಮಾದಕ ವಸ್ತುಗಳ ಬಳಕೆ ಮತ್ತು ಸರಬರಾಜು ತಡೆಯಲು ಶಂಕಾಸ್ಪದವಾಗಿ ಕಂಡು ಬರುವ ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ಅನಿರೀಕ್ಷಿತ ತಪಾಸಣೆಗಳನ್ನು ಕೈಗೊಳ್ಳಿ’ ಎಂದು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್ಕಾರ್ಡ್ ಸಮಿತಿ ಸಭೆಯಲ್ಲಿ ಆದೇಶಿಸಿದರು.</p>.<p>‘ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ 18ರಿಂದ 35 ವಯೋಮಿತಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ದುಶ್ಚಟಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದೆ. ಯುವಜನರಲ್ಲಿ ಮಾದಕ ವಸ್ತು ಸೇವನೆ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು’ ಎಂದರು.</p>.<p>‘ಔಷಧ ಮಳಿಗೆಗಳಲ್ಲಿ ವೈದ್ಯರ ಸಲಹೆ ಚೀಟಿ ಇಲ್ಲದೇ ಔಷಧಗಳನ್ನು ಸರಬರಾಜು ಮಾಡದಂತೆ ಸೂಚನೆ ನೀಡಬೇಕು. ಈ ಕುರಿತು ಭಿತ್ತಿಪತ್ರ ಅಳವಡಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು. ನೋವು ನಿವಾರಕ ಮಾತ್ರೆಗಳ ಮಾರಾಟದ ಮೇಲೆಯೂ ನಿಗಾ ಇರಿಸಬೇಕು’ ಎಂದು ಜಿಲ್ಲಾ ಔಷಧ ನಿಯಂತ್ರಕರಿಗೆ ಸೂಚಿಸಿದರು.</p>.<p>‘ಕಳೆದ ನಾಲ್ಕು ತಿಂಗಳಿನಲ್ಲಿ ಮಾದಕ ವಸ್ತು ಸರಬರಾಜಿನ 8 ಪ್ರಕರಣ ದಾಖಲಿಸಿದ್ದು, 14 ಮಂದಿಯನ್ನು ಬಂಧಿಸಿ ₹1.49 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಮಾದಕ ವಸ್ತು ಸೇವನೆಯ 97 ಪ್ರಕರಣಗಳಲ್ಲಿ 112 ಮಂದಿಯನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದರು.</p>.<p>ಸಭೆಯಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಬಂದರು, ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-20-2081338770</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>