<p><strong>ಕಾರವಾರ</strong>: ‘ಭ್ರ್ರೂಣ ಲಿಂಗ ಪತ್ತೆ ಪ್ರಕರಣ ಕುರಿತು ಮಾಹಿತಿ ನೀಡಿದವರಿಗೆ ಸರ್ಕಾರದಿಂದ ₹1 ಲಕ್ಷ ಬಹುಮಾನ ನೀಡಲಾಗುತ್ತದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ ರಾವ್ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಮಾಹಿತಿ ನೀಡಿದರು.</p>.<p>‘ಭ್ರೂಣ ಹತ್ಯೆ ಪ್ರಕರಣ ನಡೆಯದಂತೆ ನಿಗಾ ಇರಿಸಲಾಗುತ್ತಿದೆ. ಅಪರಾಧ ಎಸಗಿದ ಸ್ಕ್ಯಾನಿಂಗ್ ಕೇಂದ್ರಗಳು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ಮತ್ತು ಸ್ಥಾನಮಾನ ಇದೆ. ಹೆಣ್ಣು ಮಗುವನ್ನು, ಮನೆಯನ್ನು ಬೆಳಗುವ ದೀಪ ಎಂದು ಕರೆಯುವ ಅದೇ ಜನ ಮನೆಯಲ್ಲಿ ಹೆಣ್ಣು ಹುಟ್ಟಿದರೆ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳದಂತೆ ನಾವೆಲ್ಲರೂ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಯೂಸುಫ್ ಖಾನ್, ತೋಡುರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ರಾಹುಲ್ ಎಸ್., ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಬಸವರಾಜ್ ಕನ್ನಕ್ಕನವರ, ರತೀಶ್ ನಾಯ್ಕ, ನರ್ಸಿಂಗ್ ಅಧಿಕಾರಿ ಸುಷ್ಮಾ ನಾಯ್ಕ, ಸಂಧ್ಯಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಭ್ರ್ರೂಣ ಲಿಂಗ ಪತ್ತೆ ಪ್ರಕರಣ ಕುರಿತು ಮಾಹಿತಿ ನೀಡಿದವರಿಗೆ ಸರ್ಕಾರದಿಂದ ₹1 ಲಕ್ಷ ಬಹುಮಾನ ನೀಡಲಾಗುತ್ತದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ ರಾವ್ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಮಾಹಿತಿ ನೀಡಿದರು.</p>.<p>‘ಭ್ರೂಣ ಹತ್ಯೆ ಪ್ರಕರಣ ನಡೆಯದಂತೆ ನಿಗಾ ಇರಿಸಲಾಗುತ್ತಿದೆ. ಅಪರಾಧ ಎಸಗಿದ ಸ್ಕ್ಯಾನಿಂಗ್ ಕೇಂದ್ರಗಳು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ಮತ್ತು ಸ್ಥಾನಮಾನ ಇದೆ. ಹೆಣ್ಣು ಮಗುವನ್ನು, ಮನೆಯನ್ನು ಬೆಳಗುವ ದೀಪ ಎಂದು ಕರೆಯುವ ಅದೇ ಜನ ಮನೆಯಲ್ಲಿ ಹೆಣ್ಣು ಹುಟ್ಟಿದರೆ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳದಂತೆ ನಾವೆಲ್ಲರೂ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಯೂಸುಫ್ ಖಾನ್, ತೋಡುರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ರಾಹುಲ್ ಎಸ್., ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಬಸವರಾಜ್ ಕನ್ನಕ್ಕನವರ, ರತೀಶ್ ನಾಯ್ಕ, ನರ್ಸಿಂಗ್ ಅಧಿಕಾರಿ ಸುಷ್ಮಾ ನಾಯ್ಕ, ಸಂಧ್ಯಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>