<p><strong>ಕಾರವಾರ</strong>: ‘ಪರಿಸರದಲ್ಲಿ ಸಮತೋಲನ ಕಾಪಾಡಲು ಶ್ರಮಿಸುವ ಮೂಲಕ ಹವಾಮಾನದಲ್ಲಿ ಉಂಟಾಗುವ ಬದಲಾವಣೆಗಳನ್ನು ನಿಯಂತ್ರಿಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ವತಿಯಿಂದ ರಾಜ್ಯದ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತಯಾರಿಸುವ ಕುರಿತಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹವಾಮಾನ ವೈಪರೀತ್ಯದಿಂದ ಉಂಟಾಗುತ್ತಿರುವ ಜಾಗತಿಕ ತಾಪಮಾನ ಏರಿಕೆ, ಅತಿವೃಷ್ಟಿ, ಬರಗಾಲ, ವಾಯು ಮಾಲಿನ್ಯಗಳನ್ನು ನಿಯಂತ್ರಿಸುವ ಜವಾಬ್ದಾರಿ ಸರಿಯಾಗಿ ನಿಭಾಯಿಸಲು ಸಾಧ್ಯವಿದೆ. ಈ ಮೂಲಕ ಅರಣ್ಯ, ಸಮುದ್ರ ಹಾಗೂ ವನ್ಯಜೀವಿಗಳ ನಾಶದಂತಹ ಪರಿಸ್ಥಿತಿಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ನಿಯಂತ್ರಣ ಕ್ರಮಗಳ ಕುರಿತಂತೆ ಕ್ರಿಯಾ ಯೋಜನೆಯನ್ನು ರೂಪಿಸಬೇಕು. ಅದನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ನಿಭಾಯಿಸಬೇಕು’ ಎಂದರು.</p>.<p>ಎಂಪ್ರಿ ಸಂಸ್ಥೆಯ ಹವಾಮಾನ ಬದಲಾವಣೆ ವಿಭಾಗದ ಹಿರಿಯ ಸಮಾಲೋಚಕಿ ಬಿ.ಸರಿತಾ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿನ ಅವುಗಳ ದತ್ತಾಂಶಗಳ ಕುರಿತು ಮಾಹಿತಿ ನೀಡಿದರು.</p>.<p>ಕೆನಡಾದ ಯೂನಿವರ್ಸಿಟಿ ಆಫ್ ವಿನ್ನಪೆಗ್ನ ಪರಿಸರ ವಿಜ್ಞಾನ ವಿಭಾಗದ ಸಂಶೋಧನಾ ವಿಜ್ಞಾನಿ ಮಹಾಬಲೇಶ್ವರ ಹೆಗಡೆ ಸಾಯಿಮನೆ ಕಾರ್ಬನ್ ಕ್ರೆಡಿಟ್ ಸ್ಕೋರ್, ಹವಾಮಾನ ಬದಲಾವಣೆ ಉಪಕ್ರಮಗಳು, ಪ್ಯಾರಿಸ್ ಒಪ್ಪಂದದ ಕುರಿತು ವಿವರಿಸಿದರು.</p>.<p>ಜಲ ಸಂಪನ್ಮೂಲ ಇಲಾಖೆಯ ನಿರ್ದೇಶಕ ಸೋಮಶೇಖರ ರಾವ್ ಜಲ ಸಂಪನ್ಮೂಲದ ಬಗ್ಗೆ ಮಾಹಿತಿ ನೀಡಿದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ.ಸಂತೋಷ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-20-1035146965</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಪರಿಸರದಲ್ಲಿ ಸಮತೋಲನ ಕಾಪಾಡಲು ಶ್ರಮಿಸುವ ಮೂಲಕ ಹವಾಮಾನದಲ್ಲಿ ಉಂಟಾಗುವ ಬದಲಾವಣೆಗಳನ್ನು ನಿಯಂತ್ರಿಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ವತಿಯಿಂದ ರಾಜ್ಯದ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತಯಾರಿಸುವ ಕುರಿತಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹವಾಮಾನ ವೈಪರೀತ್ಯದಿಂದ ಉಂಟಾಗುತ್ತಿರುವ ಜಾಗತಿಕ ತಾಪಮಾನ ಏರಿಕೆ, ಅತಿವೃಷ್ಟಿ, ಬರಗಾಲ, ವಾಯು ಮಾಲಿನ್ಯಗಳನ್ನು ನಿಯಂತ್ರಿಸುವ ಜವಾಬ್ದಾರಿ ಸರಿಯಾಗಿ ನಿಭಾಯಿಸಲು ಸಾಧ್ಯವಿದೆ. ಈ ಮೂಲಕ ಅರಣ್ಯ, ಸಮುದ್ರ ಹಾಗೂ ವನ್ಯಜೀವಿಗಳ ನಾಶದಂತಹ ಪರಿಸ್ಥಿತಿಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ನಿಯಂತ್ರಣ ಕ್ರಮಗಳ ಕುರಿತಂತೆ ಕ್ರಿಯಾ ಯೋಜನೆಯನ್ನು ರೂಪಿಸಬೇಕು. ಅದನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ನಿಭಾಯಿಸಬೇಕು’ ಎಂದರು.</p>.<p>ಎಂಪ್ರಿ ಸಂಸ್ಥೆಯ ಹವಾಮಾನ ಬದಲಾವಣೆ ವಿಭಾಗದ ಹಿರಿಯ ಸಮಾಲೋಚಕಿ ಬಿ.ಸರಿತಾ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿನ ಅವುಗಳ ದತ್ತಾಂಶಗಳ ಕುರಿತು ಮಾಹಿತಿ ನೀಡಿದರು.</p>.<p>ಕೆನಡಾದ ಯೂನಿವರ್ಸಿಟಿ ಆಫ್ ವಿನ್ನಪೆಗ್ನ ಪರಿಸರ ವಿಜ್ಞಾನ ವಿಭಾಗದ ಸಂಶೋಧನಾ ವಿಜ್ಞಾನಿ ಮಹಾಬಲೇಶ್ವರ ಹೆಗಡೆ ಸಾಯಿಮನೆ ಕಾರ್ಬನ್ ಕ್ರೆಡಿಟ್ ಸ್ಕೋರ್, ಹವಾಮಾನ ಬದಲಾವಣೆ ಉಪಕ್ರಮಗಳು, ಪ್ಯಾರಿಸ್ ಒಪ್ಪಂದದ ಕುರಿತು ವಿವರಿಸಿದರು.</p>.<p>ಜಲ ಸಂಪನ್ಮೂಲ ಇಲಾಖೆಯ ನಿರ್ದೇಶಕ ಸೋಮಶೇಖರ ರಾವ್ ಜಲ ಸಂಪನ್ಮೂಲದ ಬಗ್ಗೆ ಮಾಹಿತಿ ನೀಡಿದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ.ಸಂತೋಷ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-20-1035146965</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>